ಸಾಂದರ್ಭಿಕ ಚಿತ್ರ 
ರಾಜ್ಯ

ಕಾಣೆಯಾದ ಮಕ್ಕಳನ್ನು ಪತ್ತೆಹಚ್ಚಲು ಕರ್ನಾಟಕ ಆರ್ ಪಿಎಫ್ ನಿಂದ ಆಪ್ ಬಳಕೆ

ರಾಜ್ಯದಲ್ಲಿ ಕಾಣೆಯಾಗಿರುವ ಮಕ್ಕಳನ್ನು ಪತ್ತೆಹಚ್ಚಲು ರೈಲ್ವೆ ರಕ್ಷಣಾ ಪಡೆ ಸದ್ಯದಲ್ಲಿಯೇ ಆಪ್ ...

ಬೆಂಗಳೂರು: ರಾಜ್ಯದಲ್ಲಿ ಕಾಣೆಯಾಗಿರುವ ಮಕ್ಕಳನ್ನು ಪತ್ತೆಹಚ್ಚಲು ರೈಲ್ವೆ ರಕ್ಷಣಾ ಪಡೆ ಸದ್ಯದಲ್ಲಿಯೇ ಆಪ್ ವೊಂದನ್ನು ನಿಯೋಜಿಸಲಿದ್ದು ಅದರಲ್ಲಿ ಕಾಣೆಯಾಗಿರುವ ಮಕ್ಕಳ ಹಿನ್ನೆಲೆಯನ್ನು ತಕ್ಷಣವೇ ಕಂಡುಹಿಡಿದು ಅವರನ್ನು ಪತ್ತೆಹಚ್ಚಿ ಕುಟುಂಬದವರ ಜೊತೆ ಸೇರಿಸಲು ಅನುಕೂಲವಾಗುತ್ತದೆ.

ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಉಪ ಪೊಲೀಸ್ ಮಹಾನಿರ್ದೇಶಕ ಮತ್ತು ರೈಲ್ವೆ ರಕ್ಷಣಾ ಪಡೆಯ ಮುಖ್ಯ ಭದ್ರತಾ ಆಯುಕ್ತ ಡಿ.ಬಿ.ಕಸರ್, ಫೇಸ್ ಟಾಗರ್ ಎಂಬ ಆಪ್ ಎಲ್ಲಾ ಆಂಡ್ರಾಯ್ಡ್ ಮತ್ತು ಸ್ಮಾರ್ಟ್ ಫೋನ್ ಗಳಲ್ಲಿ ಕೆಲಸ ಮಾಡಲಿದೆ. ಅದನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೊಯ ಪಯ ವೆಬ್ ಸೈಟ್ ನಲ್ಲಿ ಜೋಡಿಸಲಾಗುತ್ತದೆ. ಅದರಲ್ಲಿ ಸುಮಾರು ಮೂರೂವರೆ ಲಕ್ಷ ಮಕ್ಕಳ ದಾಖಲೆಗಳು ಹಿಡಿಯುತ್ತವೆ ಎಂದು ಹೇಳಿದರು.

ರೈಲ್ವೆ ರಕ್ಷಣಾ ಪಡೆಯಿಂದ ಮಕ್ಕಳನ್ನು ರಕ್ಷಿಸಿದ ತಕ್ಷಣವೇ ಅವರ ಫೋಟೋಗಳನ್ನುಈ ಪೋರ್ಟಲ್ ಗೆ ಕಳುಹಿಸಬಹುದು. ಫೋಟೋ ಕಳೆದುಹೋಗಿರುವ ಮಗುವಿನ ಯಾವುದಾದರೂ ಫೋಟೋ ಜೊತೆ ಹೊಂದಿಕೆಯಾದರೆ ಸಾಫ್ಟ್ ವೇರ್ ನಲ್ಲಿ ತಕ್ಷಣವೇ ಗೊತ್ತಾಗುತ್ತದೆ. ನಂತರ ಮಗುವಿನ ಪೋಷಕರು ಮತ್ತು ಕುಟುಂಬದವರಿಗೆ ಮಾಹಿತಿ ನೀಡಿ ಅವರನ್ನು ಕಾಪಾಡಲಾಗುತ್ತದೆ ಎಂದು ಕಸರ್ ಹೇಳುತ್ತಾರೆ.

ಪ್ರಾಯೋಗಿಕ ಹಂತವಾಗಿ ಈ ಯೋಜನೆಯನ್ನು ಬೆಂಗಳೂರು, ಮೈಸೂರು ಮತ್ತು ಹುಬ್ಬಳ್ಳಿ ರೈಲ್ವೆ ನಿಲ್ದಾಣಗಳಲ್ಲಿ 15 ದಿನಗಳ ಕಾಲ ನಡೆಸಲಾಗುತ್ತದೆ. ಆರಂಭದ ದಿನಗಳಲ್ಲಿ ಮೂರರಿಂದ 6 ತಿಂಗಳವರೆಗೆ ಪ್ರಾಯೋಗಿಕವಾಗಿ ಇದನ್ನು ನಡೆಸಲಾಗುವುದು ಎಂದು ಡಿಐಜಿ ತಿಳಿಸಿದರು.

ಮಕ್ಕಳನ್ನು ರಕ್ಷಿಸಲು ಎಲ್ಲಾ ಆರ್ ಪಿಎಫ್ ಸಿಬ್ಬಂದಿಗೆ ಸ್ಮಾರ್ಟ್ ಫೋನ್ ಗಳನ್ನು ನೀಡಲಾಗುವುದು. ಪ್ರಾಯೋಗಿಕ ಯೋಜನೆಯ ಫಲಿತಾಂಶವನ್ನು ರೈಲ್ವೆ ಮಂಡಳಿಗೆ ಸಲ್ಲಿಸಿದ ಮೇಲೆ ಅದು ಯಶಸ್ವಿಯಾದರೆ ದೇಶಾದ್ಯಂತ ಜಾರಿಗೆ ತರಲಾಗುವುದು ಎಂದು ಹೇಳಿದರು.
ಪ್ರಸ್ತುತ ಮಕ್ಕಳನ್ನು ಕಳ್ಳಸಾಗಣೆದಾರರಿಂದ ರಕ್ಷಿಸಿ ರಾಜ್ಯ ಪೊಲೀಸರಿಗೆ ಹಸ್ತಾಂತರಿಸುತ್ತೇವೆ. ನಂತರ ಅವರಿಗೆ ಏನಾಗುತ್ತದೆ ಎಂಬುದು ಗೊತ್ತಾಗುವುದಿಲ್ಲ ಎಂದು ರೈಲ್ವೆ ರಕ್ಷಣಾ ಪಡೆಯ ಹಿರಿಯ ಅಧಿಕಾರಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ತಿಳಿಸಿದ್ದಾರೆ.

ಈ ಆಪ್ ನ್ನು ಟೆಕ್ನೊಕ್ರೆಟ್ ವಿಜಯ್ ಗಾನಡಿಶೇಖರ್ ಅಭಿವೃದ್ಧಿಪಡಿಸಿ ರೈಲ್ವೆ ರಕ್ಷಣಾ ಪಡೆಗೆ ಹಸ್ತಾಂತರಿಸಿದರು. ಎರಡು ದಶಕಗಳ ಹಿಂದೆ ಅವರ ಸೋದರ ಕಾಣೆಯಾದಾಗ ಪತ್ತೆಹಚ್ಚಲು ಸಾಧ್ಯವಾಗಲಿಲ್ಲ. ನಂತರ ಅವರು ಅಮೆರಿಕಕ್ಕೆ ಹೋಗಿ ಈ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದರು ಎನ್ನುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT