ಸಂಗ್ರಹ ಚಿತ್ರ 
ರಾಜ್ಯ

ವಿರಳಾತಿ ವಿರಳ 'ಪಿಪಿ' ರಕ್ತದ ಗುಂಪು ಪತ್ತೆ: ವ್ಯಕ್ತಿಗೆ ರಕ್ತರಹಿತ ಶಸ್ತ್ರಚಿಕಿತ್ಸೆ

ವಿರಳಾತಿ ವಿರಳ ದೇಶದಲ್ಲಿಯೇ ಮೊದಲು ಎಂದು ಹೇಳಲಾಗುತ್ತಿರುವ 'ಪಿಪಿ' ಅಥವಾ ಪಿ ನಲ್ ರಕ್ತದ ಗುಂಪಿನ ಮಾದರಿಯನ್ನು ಮಣಿಪಾಲ ಆಸ್ಪತ್ರೆಯ ವೈದ್ಯರು ಪತ್ತೆ ಹಚ್ಚಿದ್ದು, ಮೂಳೆ ಮುರಿತದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ವ್ಯಕ್ತಿಗೆ...

ಬೆಂಗಳೂರು: ವಿರಳಾತಿ ವಿರಳ ದೇಶದಲ್ಲಿಯೇ ಮೊದಲು ಎಂದು ಹೇಳಲಾಗುತ್ತಿರುವ 'ಪಿಪಿ' ಅಥವಾ ಪಿ ನಲ್ ರಕ್ತದ ಗುಂಪಿನ ಮಾದರಿಯನ್ನು ಮಣಿಪಾಲ ಆಸ್ಪತ್ರೆಯ ವೈದ್ಯರು ಪತ್ತೆ ಹಚ್ಚಿದ್ದು, ಮೂಳೆ ಮುರಿತದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ವ್ಯಕ್ತಿಗೆ ವೈದ್ಯರು ರಕ್ತರಹಿತ ಶಸ್ತ್ರಚಿಕಿತ್ಸೆ ನಡೆಸಿದ್ದಾರೆಂದು ತಿಳಿದುಬಂದಿದೆ. 
ಎಲುಬು ಮುರಿತವಾಗಿರುವ ಹಿನ್ನಲೆಯಲ್ಲಿ ಮೇ.11 ರಂದು ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿದ್ದು, ವ್ಯಕ್ತಿಗೆ ಶಸ್ತ್ರಚಿಕಿತ್ಸೆ ನಡೆಸುವ ಅಗತ್ಯವಿದೆ. ಶಸ್ತ್ರಚಿಕಿತ್ಸೆ ನಡೆಸಲು ರಕ್ತದ ಅಗತ್ಯವಿದೆ. ವಿರಳವಾಗಿರುವ ಈ ಮಾದರಿಯ ರಕ್ತವು ನಿಧಿಯಲ್ಲಿ ಲಭ್ಯವಿರಲಿಲ್ಲ. ಹೀಗಾಗಿ ಇತರೆ 80 ಘಟಕಗಳಲ್ಲಿ ತಪಾಸಣೆ ನಡೆಸಿದರೂ ನಿರ್ದಿಷ್ಟ ರಕ್ತದ ಮಾದರಿ ಯಾವ ರಕ್ತದೊಂದಿಗೂ ಹೊಂದಾಣಿಯಾಗಿಲ್ಲ. ಹೀಗಾಗಿ ವೈದ್ಯರು ರಕ್ತರಹಿತ ಶಸ್ತ್ರಚಿಕಿತ್ಸೆ ನಡೆಸಲಾಯಿತು ಎಂದು ವೈದ್ಯರು ಹೇಳಿದ್ದಾರೆ. 
ಎ, ಬಿ, ಒ ಹಾಗೂ ಹೆಚ್ಆರ್'ಡಿ ಈಗ ರಕ್ತದ ಗುಂಪುಗಳಲ್ಲಿ ಸಾಮಾನ್ಯವಾಗಿರುವ ವರ್ಗೀಕರಣಗಳು. ಆದರೆ, ಸುಮಾರು 200ಕ್ಕೂ ಅಧಿಕ ಸಣ್ಣ ಸಣ್ಣ ರಕ್ತ ಗುಂಪುಗಳ ಪ್ರತಿಜನಕಗಳನ್ನು ಈಗಾಗಲೇ ಗುರುತಿಸಲಾಗಿದೆ. 1 ಸಾವಿರಕ್ಕಿಂತಲೂ ಕಡಿಮೆ ಜನರಲ್ಲಿ ಗುರುತಿಸಲಾಗುವ ವಿಶೇಷ ರಕ್ತದ ಗುಂಪನ್ನು ಅಪರೂಪದ ರಕ್ತ ಎಂದು ಕರೆಯಲಾಗುತ್ತದೆ. 
ಪಿಪಿ ರಕ್ತದ ಮಾದರಿ ಪತ್ತೆಯಾಗುತ್ತಿರುವುದು ಇದೇ ಮೊದಲು. ವಿರಳ ರಕ್ತದ ಮಾದರಿಗಳನ್ನು ಸಂಗ್ರಹಿಸಲು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ದಾನಿಗಳು ಸಿಗುವ ವಿಶ್ವಾಸವಿದೆ. ವ್ಯಕ್ತಿದ ರಕ್ತದ ಗುಂಪು ಜನಾಂಗೀಯತೆ ಹಾಗೂ ಅನುವಂಶಿಕ ಸ್ವಭಾವಗಳನ್ನು ಆಧರಿಸುತ್ತದೆ. ಸ್ಥಳದಿಂದ ಸ್ಥಳಕ್ಕೆ ಬದಲಾವಣೆಗಳೂ ಇರುತ್ತವೆ. ಯೂರೋಪ್ ನಲ್ಲಿ ಈ ಬಗ್ಗೆ ಅಧ್ಯಾಯನವೊಂದು ನಡೆದಿತ್ತು. 5.8 ಮಿಲಿಯನ್ ಜನರಲ್ಲಿ ಕೇವಲ ಒಬ್ಬ ವ್ಯಕ್ತಿಯಲ್ಲಿ ಮಾತ್ರ ಪಿಪಿ ರಕ್ತದ ಮಾದರಿ ಕಂಡು ಬಂದಿತ್ತು. ಸಮಯದ ಅಭಾವದಿಂದಾಗಿ ವಿದೇಶಗಳಿಂದ ರಕ್ತಗಳನ್ನು ಆಮದು ಮಾಡಿಕೊಳ್ಳುವುದು ಕಷ್ಟವಾಗುತ್ತದೆ. ತುರ್ತು ಸಮಯದಲ್ಲಿ, ನಾವು ನಮ್ಮದೇ ಆದ ರಾಷ್ಟ್ರೀಯ ನೊಂದಾವಣಿ ಮಾಡಿಕೊಳ್ಳಬೇಕಾಗುತ್ತದೆ ಎಂದು ಡಾ.ಶಮೀ ಶಾಸ್ತಿಯವರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶವಿರೋಧಿ ಚಟುವಟಿಕೆ ಆರೋಪ: ಕಾಶ್ಮೀರ ಟೈಮ್ಸ್ ದಿನಪತ್ರಿಕೆ ಕಚೇರಿಯ SIA ದಾಳಿ; Ak-47 ಕಾರ್ಟ್ರಿಡ್ಜ್‌, ಗ್ರೆನೇಡ್ ಲಿವರ್‌ ವಶಕ್ಕೆ!

ರೋಚಕ ಘಟ್ಟ ತಲುಪಿದ 'ಸಿಎಂ ಬದಲಾವಣೆ' ಚರ್ಚೆ: ಡಿಕೆಶಿ ಪರ ಶಾಸಕರು ದಿಢೀರ್ ದೆಹಲಿ ಯಾತ್ರೆ; ಹೈಕಮಾಂಡ್ ಮುಂದೆ ಶಕ್ತಿ ಪ್ರದರ್ಶನಕ್ಕೆ ಸಜ್ಜು!

ಅಕ್ರಮ ವಲಸಿಗರಿಗೆ ಅಸ್ಸಾಂ ಸರ್ಕಾರದ 'ಶಾಕ್': 'ಅತ್ಯಪರೂಪದ ಕಾನೂನು' ಜಾರಿ, 24 ಗಂಟೆಯೊಳಗೆ ಗಡಿಪಾರು!

"ಕೆಲಸದ ಹೊರೆ ನಿರ್ವಹಣೆ ಅಗತ್ಯವಿದ್ದರೆ, IPL ಬಿಡಿ": ಶುಭ್‌ಮನ್ ಗಿಲ್‌ಗೆ ಖಡಕ್ ಸಂದೇಶ!

ಭಾರತದ ಬೆನ್ನಿಗೆ ಚೂರಿ?: ದೆಹಲಿ ಬಾಂಬ್ ಸ್ಫೋಟಕ್ಕೂ ಅಫ್ಘಾನಿಸ್ತಾನಕ್ಕೂ ನಂಟು ಬಹಿರಂಗ; ಕರ್ನಾಟಕಕ್ಕೂ ಉಗ್ರನ ಭೇಟಿ!

SCROLL FOR NEXT