ಗೌರಿ ಲಂಕೇಶ್ 
ರಾಜ್ಯ

ಗೌರಿ ಲಂಕೇಶ್ ಹತ್ಯೆ ಪ್ರಕರಣ; ಸಾಕ್ಷ್ಯಾಧಾರಗಳನ್ನು ನಾಶಪಡಿಸಿದ್ದ ಆರೋಪಿ ಎಸ್ಐಟಿ ವಶಕ್ಕೆ

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳನ್ನು ನಾಶಪಡಿಸಿದ್ದ ಆರೋಪಿಯೊಬ್ಬನನ್ನು ವಿಶೇಷ ತನಿಖಾ ದಳ (ಎಸ್ಐಟಿ) ಅಧಿಕಾರಿಗಳು ಮಂಗಳವಾರ ವಶಕ್ಕೆ ಪಡೆದುಕೊಂಡಿದ್ದಾರೆ...

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳನ್ನು ನಾಶಪಡಿಸಿದ್ದ ಆರೋಪಿಯೊಬ್ಬನನ್ನು ವಿಶೇಷ ತನಿಖಾ ದಳ (ಎಸ್ಐಟಿ) ಅಧಿಕಾರಿಗಳು ಮಂಗಳವಾರ ವಶಕ್ಕೆ ಪಡೆದುಕೊಂಡಿದ್ದಾರೆ. 
ತುಮಕೂರಿನ ಸುರೇಶ್ (37) ಬಂಧಿತನಾಗಿದ್ದು, ಪ್ರಕರಣದ 11ನೇ ಆರೋಪಿಯಾಗಿದ್ದಾನೆ. ಹತ್ಯೆ ಪ್ರಕರಣದಲ್ಲಿ ಸುರೇಶ್ ಪ್ರಮುಖ ಪಾತ್ರವಹಿಸಿತ್ತು, ಸಾಕ್ಷ್ಯಗಳನ್ನು ನಾಶಪಡಿಸಿದ್ದಾನೆ. ಹೀಗಾಗಿ ಆರೋಪಿಯನ್ನು ವಶಕ್ಕೆ ನೀಡುವಂತೆ ಎಸ್ಐಟಿ ಪರ ಸರ್ಕಾರಿ ವಿಶೇಷ ಅಭಿಯೋಜಕರು ನ್ಯಾಯಾಲಯದ ಬಳಿ ಮನವಿ ಮಾಡಿಕೊಂಡಿದ್ದರು. 
ಈ ಸಂಬಂಧ ನಿನ್ನೆ ವಿಚಾರಣೆ ಮುಕ್ತಾಯಗೊಳಿಸಿದ್ದ ನ್ಯಾಯಾಲಯ ತೀರ್ಪು ಪ್ರಕಟಿಸಿ, 8 ದಿನಗಳ ಕಾಲ ವಶಕ್ಕೆ ನೀಡಿ ಆದೇಶಿಸಿತ್ತು. 
ಇದಕ್ಕೆ ಸುರೇಶ್ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿ, ತಮ್ಮ ಕಕ್ಷಿದಾರರಿಗೆ ತನಿಖಾಧಿಕಾರಿಗಳು ಬಹಳ ಹಿಂಸೆ ನೀಡಿದ್ದಾರೆ. ಹೀಗಾಗಿ 8 ದಿನಗಳ ಕಾಲ ಎಸ್ಐಟಿ ವಶಕ್ಕೆ ನೀಡಬಾರದು. ಮತ್ತೆ ಈತನ ಮೇಲೆ ಹಲ್ಲೆ ನಡೆಸುತ್ತಾರೆಂದು ವಾದ ಮಂಡಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT