ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸುತ್ತಿರುವ ಉತ್ತರ ಕರ್ನಾಟಕ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶಾಂತಿಯುತ ಮಾತುಕತೆ 
ರಾಜ್ಯ

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬೇಡಿಕೆ: ಸಿಎಂ ಭರವಸೆ ನಡುವೆಯೂ ಬಂದ್ ನಡೆಸಲು ನಿರ್ಧಾರ

ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸುತ್ತಿರುವ ಉತ್ತರ ಕರ್ನಾಟಕ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶಾಂತಿಯುತ ಮಾತುಕತೆ ನಡೆಸಿ ಭರವಸೆಗಳನ್ನು ನೀಡಿದ್ದು, ಭರವಸೆಗಳ ನಡುವೆಯೂ ಆಗಸ್ಟ್ 2 ರಂದು ಬಂದ್ ಆಚರಿಸಲು ಹೋರಾಟಗಾರರು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ...

ಬೆಂಗಳೂರು: ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸುತ್ತಿರುವ ಉತ್ತರ ಕರ್ನಾಟಕ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶಾಂತಿಯುತ ಮಾತುಕತೆ ನಡೆಸಿ ಭರವಸೆಗಳನ್ನು ನೀಡಿದ್ದು, ಭರವಸೆಗಳ ನಡುವೆಯೂ ಆಗಸ್ಟ್ 2 ರಂದು ಬಂದ್ ಆಚರಿಸಲು ಹೋರಾಟಗಾರರು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ. 
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ನಾಯಕರು ಮುಖ್ಯಮಂತ್ರಿಗಳ ಭರವಸೆಗಳನ್ನು ಸ್ವಾಗತಿಸಿದ್ದಾರೆ. ಆದರೂ, ಬಂದ್ ಕರೆಯನ್ನು ಹಿಂಪಡೆಯಲು ನಿರಾಕರಿಸಿದ್ದಾರೆ. 
ಉತ್ತರ ಕರ್ನಾಟಕ ಭಾಗದ ಜನರ ಆಗ್ರಗಳಿಗಾಗಿ ಬೆಳಗಾವಿಯ ಸುವರ್ಣಸೌಧದಲ್ಲಿ 15 ದಿನಗಳೊಳಗಾಗಿ ಮುಖ್ಯಮಂತ್ರಿಗಳು ಶಾಸಕರೊಂದಿಗೆ ಸಭೆಯನ್ನು ನಡೆಸಬೇಕೆಂದು ಹೋರಾಟಗಾರರು ಆಗ್ರಹಿಸಿದ್ದಾರೆ. 
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯ ಅಧ್ಯಕ್ಷ ಸೋಮಶೇಖರ್ ಕೊತ್ತಂಬಿ ಮಾತನಾಡಿ, ಪ್ರತ್ಯೇಕ ರಾಜ್ಯದ ಕೂಗು ಈಗಿನ ಸರ್ಕಾರದ ವಿರುದ್ಧವಲ್ಲ. 2007 ಇಸವಿಯಿಂದ ಈಚೆಗೆ ನಡೆಯುತ್ತಿದೆ. ಉತ್ತರ ಕರ್ನಾಟಕಕ್ಕೆ ಪ್ರೀತಿನಿಧ್ಯ ಕೊಡಿ. ಸುವರ್ಣಸೌಧವನ್ನು ಕಟ್ಟಿಸಿದ್ದೀರಾ. ಆದರೆ, ಅದು ನಿಷ್ಕ್ರಿಯವಾಗಿದೆ. ಅಧಿಕಾರ ವಿಕೇಂದ್ರೀಕರಣಗೊಳಿಸಿ ಎಂದು ಮನವಿ ಮಾಡಿಕೊಂಡರು. 
ಉತ್ತರ ಕರ್ನಾಟಕದ ಎಲ್ಲಾ ಸಮುದಾಯಗಳು ಬಂದ್'ಗೆ ಕರೆ ನೀಡಿವೆ. ಹೀಗಾಗಿ ಎಲ್ಲರೊಂದಿಗೂ ಮಾತುಕತೆ ನಡೆಸಬೇಕಿದೆ. ಮುಖ್ಯಮಂತ್ರಿಗಳ ಭರವಸೆಗಳು ನಮಗೆ ಸಂತಸವನ್ನು ತಂದಿದೆ. ಆದರೆ, ಬಂದ್ ನಿರ್ಧಾರ ಕುರಿತಂತೆ ಯಾವುದೇ ಬದಲಾವಣೆಗಳಿಲ್ಲ. ಬಂದ್ ಕರೆ ಕುರಿತಂತೆ ಶೀಘ್ರದಲ್ಲಿಯೇ ಘೋಷಣೆಗಳನ್ನು ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

SCROLL FOR NEXT