ಟೆಕ್ಕಿ ಅಜಿತಾಭ್ 
ರಾಜ್ಯ

ಟೆಕ್ಕಿ ಅಜಿತಾಭ್ ನಾಪತ್ತೆ ಪ್ರಕರಣ; ಸಿಬಿಐ ತನಿಖೆ ಕುರಿತು ಆ.2 ರಂದು 'ಹೈ' ನಿರ್ಧಾರ

ಟೆಕ್ಕಿ ಅಜಿತಾಭ್ ನಾಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ಪ್ರಕರಣವನ್ನು ಕೇಂದ್ರ ತನಿಖಾ ದಳ (ಸಿಬಿಐ)ಕ್ಕೆ ವಹಿಸುವ ಕುರಿತು ಆಗಸ್ಟ್.2 ರಂದು ನಿರ್ಧಾರ ಕೈಗೊಳ್ಳಲಿದೆ ಎಂದು ಬುಧವಾರ ತಿಳಿದುಬಂದಿದೆ...

ಬೆಂಗಳೂರು: ಟೆಕ್ಕಿ ಅಜಿತಾಭ್ ನಾಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ಪ್ರಕರಣವನ್ನು ಕೇಂದ್ರ ತನಿಖಾ ದಳ (ಸಿಬಿಐ)ಕ್ಕೆ ವಹಿಸುವ ಕುರಿತು ಆಗಸ್ಟ್.2 ರಂದು ನಿರ್ಧಾರ ಕೈಗೊಳ್ಳಲಿದೆ ಎಂದು ಬುಧವಾರ ತಿಳಿದುಬಂದಿದೆ. 
ನ್ಯಾಯಮೂರ್ತಿ ಅರವಿಂದ ಕುಮಾರ್ ಅವರು ಮಾತನಾಡಿ, ಪ್ರಕರಣದ ತನಿಖೆ ಯಾವ ಹಂತದಲ್ಲಿದೆ ಎಂಬುದರ ಮಾಹಿತಿಗಳ ಬಳಿಕ ನ್ಯಾಯಾಲಯ ನಿರ್ಧಾರ ಕೈಗೊಳ್ಳಲಿದೆ. ಪ್ರಕರಣದ ವಿಚಾರಣೆ ಗುರುವಾರ ನಡೆಯಲಿದ್ದು, ವಿಚಾರಣೆಗೂ ಮೊದಲು ಪ್ರಕರಣ ಕುರಿತು ಸಂಗ್ರಹಿಸಲಾಗಿರುವ ಎಲ್ಲಾ ದಾಖಲೆಗಳನ್ನೂ ಮುಚ್ಚಿನ ಲಕೋಟೆಯಲ್ಲಿ ಸಲ್ಲಿಸುವಂತೆ ಅಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಿದೆ ಎಂದು ಹೇಳಿದ್ದಾರೆ. 
ಪ್ರಕರಣ ಕುರಿತು ತನಿಖಾ ಪ್ರಗತಿಗಾಗಿ ಎರಡು ವಾರಗಳ ಕಾಲ ಕಾಲಾವಕಾಶ ನೀಡುವಂತೆ ರಾಜ್ಯ ಸರ್ಕಾರದ ನ್ಯಾಯಾಲಯದ ಬಳಿ ಮನವಿ ಮಾಡಿಕೊಂಡಿದೆ. ಆದರೆ, ಅಜಿತಾಭ್ ತಂದೆ ಅಶೋಕ್ ಕುಮಾರ್ ಸಿನ್ಹಾ ಅವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ರಾಜ್ಯದ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ ಎಂದು ಹೇಳಿರುವ ಹಿನ್ನಲೆಯಲ್ಲಿ ನ್ಯಾಯಾಲಯ ನಾಳೆ ಸಿಬಿಐ ತನಿಖೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಿದೆ. 
ಬೆಳ್ಳಂದೂರಿನ ಬ್ರಿಟಿಷ್ ಟೆಲಿಕಾಂನಲ್ಲಿ ಕಳೆದ 5 ವರ್ಷಗಳಿಂದ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಅಜಿತಾಭ್ ತನ್ನ ಸಿಯಾಜ್ ಕಾರನ್ನು ಮಾರಾಟ ಮಾಡುವ ಸಂಬಂಧ ಓಎಲ್ಎಕ್ಸ್ ನಲ್ಲಿ ಮಾಹಿತಿ ಹಾಕಿದ್ದರು. ಓಎಲ್ಎಕ್ಸ್ ನಲ್ಲಿ ಪ್ರಕಟಿಸಿದ ಬಳಿಕ ಅಜಿತಾಭ್ ಕರೆ ಬಂದಾಗಲೆಲ್ಲಾ ಕಾರು ಸಮೇತ ಹೊರ ಹೋಗಿ ಬರುತ್ತಿದ್ದರು. ಹೀಗೆ ಕಳೆದ ವರ್ಷ ಡಿಸೆಂಬರ್18 ರಂದು ಅವರ ಮೊಬೈಲ್'ಗೆ ಕರೆಯೊಂದು ಬಂದಿತ್ತು. ಹೊರಗೆ ಹೋದ ಅಜಿತಾಭ್ ಪುನಃ ವಾಪಸ್ ಆಗದೆ ನಿಗೂಢವಾಗಿ ನಾಪತ್ತೆಯಾಗಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?