ಭರಚುಕ್ಕಿ ಜಲಪಾತ 
ರಾಜ್ಯ

ಜಲಪಾತೋತ್ಸವಕ್ಕೆ ಸಿದ್ಧವಾಗುತ್ತಿವೆ ಚುಂಚನಕಟ್ಟೆ, ಭರಚುಕ್ಕಿ ಮತ್ತು ಗಗನಚುಕ್ಕಿ!

ರಾಜ್ಯದ ಹಲವೆಡೆ ಉತ್ತಮ ಮಳೆಯಾಗಿದ್ದು ಜಲಾಶಯಗಳು ತುಂಬಿರುವ ಹಿನ್ನೆಲೆಯಲ್ಲಿ ಪ್ರವಾಸೋದ್ಯಮವನ್ನು ಮತ್ತಷ್ಟು ಪ್ರೋತ್ಸಾಹಿಸುವ ಹಿನ್ನೆಲೆಯಲ್ಲಿ...

ಮೈಸೂರು: ರಾಜ್ಯದ ಹಲವೆಡೆ ಉತ್ತಮ ಮಳೆಯಾಗಿದ್ದು ಜಲಾಶಯಗಳು ತುಂಬಿರುವ ಹಿನ್ನೆಲೆಯಲ್ಲಿ ಪ್ರವಾಸೋದ್ಯಮವನ್ನು ಮತ್ತಷ್ಟು ಪ್ರೋತ್ಸಾಹಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಜಲಪಾತೋತ್ಸಕ್ಕೆ ಸಿದ್ಧತೆ ನಡೆಸಿದೆ.
ಚುಂಚನಕಟ್ಟೆ,ಗಗನಚುಕ್ಕಿ ಮತ್ತು ಭರಚುಕ್ಕಿ ಜಲಪಾತಗಳು ಕಳೆದ ಒಂದು ತಿಂಗಳಿಂದ ಸಾವಿರರು ಪ್ರವಾಸಿಗರನ್ನು ಆಕರ್ಷಿಸುತ್ತಿವೆ, ಹೀಗಾಗಿ ಆಗಸ್ಟ್ ತಿಂಗಳ ಅಂತ್ಯದಲ್ಲಿ ಜಲಪಾತೋತ್ಸವ ನಡೆಸಲು ತಯಾರಿ ನಡೆದಿದೆ.
ಮೈಸೂರು,ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳು ಜಲಪಾತೋತ್ಸವದಿಂದಾಗಿ ಪ್ರಮುಖ ಪ್ರವಾಸಿ ಸ್ಥಳಗಳಾಗಿದ್ದು, ಎಲ್ಲಾ ತಯಾರಿ ಅದ್ಧೂರಿಯಿಂದ ನಡೆಯುತ್ತಿದೆ. ಮಳೆಯಿಲ್ಲದ ಕಾರಣ ಕಳೆದ ಕೆಲವು ವರ್ಷಗಳಿಂದ ಜಲಪಾತೋತ್ಸವವನ್ನು ಸರ್ಕಾರ ನಡೆಸಿರಲಿಲ್ಲ.
ಆಗಸ್ಟ್11 ಮತ್ತು 12 ರಂದು ಕೆ.ಆರ್ ನಗರದಲ್ಲಿರುವ ಚುಂಚನಕಟ್ಟೆ ಫಾಲ್ಸ್ ನಲ್ಲಿ ಜಲಪಾತೋತ್ಸವ ನಡೆಯಲಿದೆ,  ಸ್ಥಳೀಯ ಜಾನಪಕ ಕಲಾವಿದರು ಹಾಗಬ ಸಿನಿಮಾ ಕಲಾವಿದರು ಪ್ರೇಕ್ಷಕರ ಮನರಂಜಿಸಲಿದ್ದಾರೆ, ಪ್ರವಾಸೋದ್ಯಮ ಸಚಿವ ಸಾ.ರಾ ಮಹೇಶ್ ಅವರ ತವರು ಕ್ಷೇತ್ರವಾದ ಕೆ.ಆರ್ ನಗರದಲ್ಲಿ ಇದಕ್ಕಾಗಿ ಎಲ್ಲ ವ್ಯವಸ್ಥೆ ನಡೆಯುತ್ತಿದೆ. 
ಜಲಪಾತೋತ್ಸವಕ್ಕಾಗಿ ಸರ್ಕಾರ 50 ಲಕ್ಷ ರು ಬಿಡುಗಡೆ ಮಾಡಿದೆ ಎಂದು ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಜನಾರ್ದನ ಹೇಳಿದ್ದಾರೆ, ದಸರಾ  ಮುನ್ನ ಇದೊಂದು ಅತಿ ದೊಡ್ಡ ಕಾರ್ಯಕ್ರಮವಾಗಲಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶಕ್ಕೆ ಸ್ವಾತಂತ್ರ್ಯ ಬಂದ 79 ವರ್ಷಗಳ ನಂತರ 'ವಂದೇ ಮಾತರಂ' ಚರ್ಚೆಯ ಅಗತ್ಯವೇನಿತ್ತು?: ಪ್ರಿಯಾಂಕಾ ಗಾಂಧಿ; Video

ಅಪ್ಪಿತಪ್ಪಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾದರೆ ಅವರ ಸಂಪುಟಕ್ಕೆ ಸೇರಲ್ಲ: Congress ಶಾಸಕ ಕೆಎನ್ ರಾಜಣ್ಣ

KPS ಶಾಲೆ ತೆರೆಯಲು ಕನ್ನಡ ಮಾಧ್ಯಮ ಶಾಲೆಗಳಿಗೆ ಬೀಗ: 'ಕನ್ನಡ ನನ್ನ ರಕ್ತ'ದಲ್ಲಿದೆ ಎಂದ ಶಿಕ್ಷಣ ಸಚಿವರು!

ಬೀದರ್: 'ಹಿಂದೂ' ಎನ್ನುವುದು ಧರ್ಮವೇ ಅಲ್ಲ, ಅದೊಂದು ಕೆಟ್ಟ ಬೈಗುಳ; ನಿವೃತ್ತ ನ್ಯಾಯಮೂರ್ತಿ

ನಿಮ್ಮ ಪತ್ನಿ ಭಾರತೀಯಳಲ್ಲವೇ? ವಲಸೆ ವಿಚಾರವಾಗಿ ಮತ್ತೆ 'ಅಪಹಾಸ್ಯ'ಕ್ಕೀಡಾದ ಅಮೆರಿಕಾದ ಉಪಾಧ್ಯಕ್ಷ ಜೆಡಿ ವ್ಯಾನ್ಸ್!

SCROLL FOR NEXT