ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ 
ರಾಜ್ಯ

ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ವಿಶೇಷ : ಭಾರತೀಯ ಸೇನಾಪಡೆಗೆ ಪುಷ್ಪನಮನ!

ಆಗಸ್ಟ್ 15 ಸ್ವಾತಂತ್ರ ದಿನಾಚರಣೆ ಪ್ರಯುಕ್ತ ಆ4 ರಿಂದ 15ರವರೆಗೆ ಫಲಪುಷ್ಪ ಪ್ರದರ್ಶನ ಹಮ್ಮಿಕೊಳ್ಳಲಾಗಿದ್ದು. ಪ್ರತಿ ವರ್ಷದಂತೆ ಈವರ್ಷವೂ ಲಾಲ್ ಬಾಗ್ ...

ಬೆಂಗಳೂರು: ಆಗಸ್ಟ್ 15 ಸ್ವಾತಂತ್ರ ದಿನಾಚರಣೆ ಪ್ರಯುಕ್ತ ಆ4 ರಿಂದ 15ರವರೆಗೆ ಫಲಪುಷ್ಪ ಪ್ರದರ್ಶನ ಹಮ್ಮಿಕೊಳ್ಳಲಾಗಿದ್ದು. ಪ್ರತಿ ವರ್ಷದಂತೆ ಈವರ್ಷವೂ ಲಾಲ್ ಬಾಗ್ ನಲ್ಲಿ ಹಲವಾರು ವಿಧ ವಿಧವಾದ ಪುಷ್ಟಗಳಿಂದ ಗ್ಲಾಸ್ ಹೌಸ್ ಅನ್ನು ಅಲಂಕರಿಸಲಾಗಿದೆ.
ಆಗಸ್ಟ್ 4 ರಂದು ಫಲಪುಷ್ಪ ಪ್ರದರ್ಶನಕ್ಕೆ  ಚಾಲನೆ ದೊರೆಯಲಿದ್ದು,  ಆಗಸ್ಟ್ 15 ರವ ವರೆಗೂ ವೀಕ್ಷಿಸಬಹುದಾಗಿದೆ,  ಈ ಬಾರಿ ಸ್ವಾತಂತ್ರ್ಯ ಹೋರಾಟದಲ್ಲಿ ಮಡಿದವರು ಹಾಗೂ ದೇಶವನ್ನು ರಕ್ಷಿಸುತ್ತಿರುವ ಯೋಧರು, ಭಾರತದ ರಕ್ಷಣಾ ಪಡೆಗೆ ಈ ಬಾರಿ ವಿಶೇಷ ನಮನ ಸಲ್ಲಿಸಲಾಗುತ್ತಿದೆ.
ವಾಯುಸೇನೆ, ಭೂ ಸೇನೆ, ನೌಕಾಸೇನೆಯನ್ನು ಗುಲಾಬಿ ಹೂವುಗಳಿಂದ ಸಿದ್ದಪಡಿಸಲಾಗಿದೆ.  ಸಿಯಾಚಿನ್ ಪ್ರದೇಶದಲ್ಲಿ 30 ಡಿಗ್ರಿ ಸೆಲ್ಸಿಯಸ್‍ನಲ್ಲಿ ನಮ್ಮ ಯೋಧರು ಹೇಗೆ ಕಾರ್ಯ ನಿರ್ವಹಿಸುತ್ತಾರೆ ಎಂಬ ಬಗ್ಗೆ ಹೂಗಳಿಂದಲೇ ಚಿತ್ರಿಸಿರುವುದು ವಿಶೇಷವಾಗಿದೆ.
ಪ್ರದರ್ಶನದ 15 ದಿನಗಳ ವೇಳೆಯೂ ಮೂರರಿಂದ ನಾಲ್ಕು ಬಾರಿ ಪುಷ್ಪಗಳನ್ನು ಬದಲಾಯಿಸಲಾಗುತ್ತದೆ. ಈ ಬದಲಾವಣೆಗೆ ಒಂದು ಸಲಕ್ಕೆ 40 ಸಾವಿರ ರೂ. ವೆಚ್ಚವಾಗುತ್ತದೆ. 1.20 ಲಕ್ಷ ಹೂಗಳನ್ನು ಈ ರೀತಿ ಬದಲಾವಣೆ ಮಾಡಲಾಗುತ್ತದೆ ಎಂದು ತೋಟಗಾರಿಕೆ ಇಲಾಖೆ ನಿರ್ದೇಶಕ ವೈ.ಎಸ್ ಪಾಟಿಲ್ ವಿವರಿಸಿದ್ದಾರೆ.
ಉಪಗ್ರಹ ಉಡಾವಣೆ ಪಿಎಸ್‍ಎಲ್‍ವಿ, ಜಿಎಸ್‍ಎಲ್‍ವಿಗಳನ್ನು ಹೂಗಳಿಂದ ರಚಿಸಲಾಗಿದೆ. ಕನ್ನಡ ಚಿತ್ರರಂಗದ 85ರ ಸವಿ ನೆನಪನ್ನು 15 ಸಾವಿರ ಗುಲಾಬಿ ಹೂಗಳನ್ನು ಬಳಸಿ ಸಿದ್ಧಪಡಿಸಲಾಗಿದೆ. ಜೊತೆಗೆ 8 ಅಡಿ 6ಅಡಿ ಉದ್ದದ ವಿಡಿಯೋ ಕ್ಯಾಮೆರಾವನ್ನು 7 ಸಾವಿರ ಗುಲಾಬಿ ಹೂವುಗಳಿಂದ ತಯಾರಿಸಲಾಗಿದೆ.
ಕಲಾವಿದ ಟಿ.ಎಸ್ ಜಗದೀಶ್ ಇಡೀ ಪ್ರಾಜೆಕ್ಟ್ ಜವಾಬ್ದಾರಿ ತೆಗೆದುಕೊಂಡಿದ್ದಾರೆ,  ಈ ಬಾರಿ ಪ್ರವೇಶ ಶುಲ್ಕ ಏರಿಕೆಯಾಗಿದ್ದು, ವಯಸ್ಕರಿಗೆ 70 ರು ಹಾಗೂ 12 ವರ್ಷ ಮೇಲ್ಪಟ್ಟ ಮಕ್ಕಳಿಗೆ 20 ರು ನಿಗದಿ ಪಡಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT