ಸಾರಾ ಮಹೇಶ್ 
ರಾಜ್ಯ

ಕೊಡಗು ದಸರಾ ಮಹೋತ್ಸವಕ್ಕೆ 1 ಕೋಟಿ ರೂ. ಅನುದಾನ ಬಿಡುಗಡೆ- ಸಾರಾ ಮಹೇಶ್

ಈ ಬಾರಿಯ ಕೊಡಗು ದಸರಾ ಮಹೋತ್ಸವಕ್ಕಾಗಿ 1 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಸಾರಾ ಮಹೇಶ್ ಭರವಸೆ ನೀಡಿದ್ದಾರೆ.

ಮಡಿಕೇರಿ: ಈ ಬಾರಿಯ ಕೊಡಗು ದಸರಾ ಮಹೋತ್ಸವಕ್ಕಾಗಿ    1 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡುವುದಾಗಿ  ಜಿಲ್ಲಾ ಉಸ್ತುವಾರಿ ಸಚಿವ ಸಾರಾ ಮಹೇಶ್ ಭರವಸೆ ನೀಡಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಮಡಿಕೇರಿಗೆ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ,  ದಸರಾ ಮಹೋತ್ಸವಕ್ಕೆ  ಜಿಲ್ಲಾಧಿಕಾರಿ 1 ಕೋಟಿ ರೂಪಾಯಿಗಳ ಪ್ರಸ್ತಾವನೆ ಸಲ್ಲಿಸಿದ್ದಾರೆ. ಅದನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಜಿಲ್ಲೆಯಲ್ಲಿ ಕಾನೂನುಬಾಹಿರವಾಗಿ ತಲೆ ಎತ್ತಿರುವ ಹೋಮ್ ಸ್ಟೇಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ  ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.  ಆಗಸ್ಟ್ 2 ರೊಳಗೆ ಹೋಮ್ ಸ್ಟೇ ನೋಂದಣಿ ಮಾಡಿಕೊಳ್ಳುವಂತೆ ಆದೇಶ ನೀಡಲಾಗಿದೆ. ನೋಂದಣಿ ಮಾಡಿಕೊಳ್ಳದ ಹೋಮ್ ಸ್ಟೇಗಳನ್ನು ಜಿಲ್ಲಾಡಳಿತದಿಂದ ನಿರ್ಬಂಧಿಸಲಾಗುವುದು ಎಂದು ಅವರು  ತಿಳಿಸಿದರು.

ಜಿಲ್ಲೆಯಲ್ಲಿನ ಸಮಸ್ಯೆ ಕುರಿತಂತೆ ಶಾಸಕರು , ವಿಧಾನಪರಿಷತ್ ಸದಸ್ಯರೊಂದಿಗೆ ಮಾತುಕತೆ ನಡೆಸಿದ್ದು, ಮಳೆ ಸಂಬಂಧಿತ ಪರಿಹಾರ ಕಾರ್ಯಗಳಿಗಾಗಿ 50 ಕೋಟಿ ರೂಪಾಯಿಯನ್ನು ಈಗಾಗಲೇ ಮುಖ್ಯಮಂತ್ರಿ ಬಿಡುಗಡೆ ಮಾಡಿದ್ದಾರೆ . ಪರಿಹಾರ ಕಾರ್ಯಗಳನ್ನು ಕ್ಷಿಪ್ರ ಗತಿಯಲ್ಲಿ ಕೈಗೊಂಡು ಪ್ರವಾಸೋದ್ಯಮ ಅಭಿವೃದ್ದಿಪಡಿಸಲಾಗುವುದು,ಜಿಲ್ಲೆಯಲ್ಲಿ ಸುಸ್ಥಿರ ಪರಿಸರ ಸ್ನೇಹಿ ಪ್ರವಾಸೋದ್ಯಮವನ್ನು  ಪ್ರೋತ್ಸಾಹಿಸುವುದಾಗಿ ಎಂದು ಸಾರಾ ಮಹೇಶ್ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT