ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ 
ರಾಜ್ಯ

ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಪೋಸ್ಟ್ : ವ್ಯಕ್ತಿಯ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಅವರ ವಿರುದ್ಧ ಅವಹೇಳನಕಾರಿ ಬರಹ ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ  ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಅವರ ವಿರುದ್ಧ ಅವಹೇಳನಕಾರಿ  ಬರಹ  ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕುಡ್ಲಾ ಟ್ರೋಲ್ಸ್  ಫೇಸ್ ಬುಕ್ ಅಡ್ಮಿನ್   ಪ್ರಶಾಂತ್ ಪೂಜಾರಿ ಬಂಧಿತ ಆರೋಪಿ.  ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ನಿಂದಿಸಿ ಇನ್ಸ್ ಟಾಗ್ರಾಂನಲ್ಲಿ  ಪೋಸ್ಟ್ ಹಾಕಿದ್ದ ಆರೋಪದ ಮೇರೆಗೆ ಈತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಭಾರತೀಯ ಅಪರಾಧ ಕಾಯ್ದೆ  ಸೆಕ್ಷನ್ 153 ಮತ್ತು 504 ರ ಅಡಿಯಲ್ಲಿ ಆತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

ಸಾಮಾಜಿಕ ಮಾಧ್ಯಮದಲ್ಲಿ ಕುಮಾರಸ್ವಾಮಿ ಮಾತ್ರವಲ್ಲ  , ಈ ಹಿಂದೆ ಅನೇಕ ರಾಜಕೀಯ ನಾಯಕರ ವಿರುದ್ಧ ನಿಂದನಾತ್ಮಕ ಬರಹಗಳನ್ನು ಹಾಕಲಾಗಿದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಕಳೆದ ತಿಂಗಳು ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಬರಹ  ಪ್ರಕಟಿಸಿದ್ದಕ್ಕಾಗಿ  ವ್ಯಕ್ತಿಯೊಬ್ಬನನ್ನು  ಆಗ್ರಾ ಪೊಲೀಸರು ಬಂಧಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT