ರಾಜ್ಯ

ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಪೋಸ್ಟ್ : ವ್ಯಕ್ತಿಯ ಬಂಧನ

Nagaraja AB

ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ  ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಅವರ ವಿರುದ್ಧ ಅವಹೇಳನಕಾರಿ  ಬರಹ  ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕುಡ್ಲಾ ಟ್ರೋಲ್ಸ್  ಫೇಸ್ ಬುಕ್ ಅಡ್ಮಿನ್   ಪ್ರಶಾಂತ್ ಪೂಜಾರಿ ಬಂಧಿತ ಆರೋಪಿ.  ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ನಿಂದಿಸಿ ಇನ್ಸ್ ಟಾಗ್ರಾಂನಲ್ಲಿ  ಪೋಸ್ಟ್ ಹಾಕಿದ್ದ ಆರೋಪದ ಮೇರೆಗೆ ಈತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಭಾರತೀಯ ಅಪರಾಧ ಕಾಯ್ದೆ  ಸೆಕ್ಷನ್ 153 ಮತ್ತು 504 ರ ಅಡಿಯಲ್ಲಿ ಆತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

ಸಾಮಾಜಿಕ ಮಾಧ್ಯಮದಲ್ಲಿ ಕುಮಾರಸ್ವಾಮಿ ಮಾತ್ರವಲ್ಲ  , ಈ ಹಿಂದೆ ಅನೇಕ ರಾಜಕೀಯ ನಾಯಕರ ವಿರುದ್ಧ ನಿಂದನಾತ್ಮಕ ಬರಹಗಳನ್ನು ಹಾಕಲಾಗಿದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಕಳೆದ ತಿಂಗಳು ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಬರಹ  ಪ್ರಕಟಿಸಿದ್ದಕ್ಕಾಗಿ  ವ್ಯಕ್ತಿಯೊಬ್ಬನನ್ನು  ಆಗ್ರಾ ಪೊಲೀಸರು ಬಂಧಿಸಿದ್ದರು.

SCROLL FOR NEXT