ಅನಧಿಕೃತ ಫ್ಲೆಕ್ಸ್ 
ರಾಜ್ಯ

ಬೆಂಗಳೂರು ನಗರವನ್ನು ಫ್ಲೆಕ್ಸ್ ನಿಂದ ದೂರವಿರಿಸಲು ರಾಜಕಾರಣಿಗಳಿಗೆ ಸಿಎಂ ಆಗ್ರಹ

ಬೆಂಗಳೂರು: ನಗರಾದ್ಯಂತ ರಾರಾಜಿಸುತ್ತಿರುವ ಅನಧಿಕೃತ ಫ್ಲೆಕ್ಸ್ ಗಳನ್ನು ತೆರವುಗೊಳಿಸಿ ಹೈಕೋರ್ಟ್ ಸೂಚನೆ ಪಾಲಿಸಲು ಎಲ್ಲಾ ರಾಜಕಾರಣಿಗಳು ಸಹಕಾರ ನೀಡಬೇಕೆಂದು ಸಿಎಂ ಕುಮಾರ ಸ್ವಾಮಿ ಹೇಳಿದ್ದಾರೆ.
ಮಾಲಿನ್ಯ ತಪ್ಪಿಸುವುದ ಜೊತೆಗೆ ನಗರದ ಸೌಂದರ್ಯ ಹೆಚ್ಚಿಸುವ ಸಲುವಾಗಿ ಫ್ಲೆಕ್ಸ್ ಗಳನ್ನು ದೂರ ಇರಿಸಿಬೇಕೆಂದು ಮುಖ್ಯಮಂತ್ರಿ ಕಚೇರಿಯ ಪ್ರಕಟಣೆ ನೀಡಿದೆ. ಹೀಗಾಗಿ ರಾಜಕಾರಣಿಗಳಿಗೆ ತಮ್ಮ ಪಕ್ಷದ ಕಾರ್ಯಕರ್ತರಿಗೆ ಹಾಗೂ ಎಲ್ಲಾ ಪಕ್ಷದ ರಾಜಕೀಯ ಮುಖಂಡರುಗಳಿಗೆ ಕೋರ್ಟ್ ನಿರ್ದೇಶನ ಪಾಲಿಸಿ ಸಹಕಾರ ನೀಡಬೇಕು ಎಂದು ಹೇಳಿಕೆ ಬಿಡುಗಡೆ ಮಾಡಲಾಗಿದೆ.
ಇನ್ನೂ ಕರ್ತವ್ಯದಲ್ಲಿ ಲೋಪ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ  ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರಿಗೆ ಸಿಎಂ ತಿಳಿಸಿದ್ದಾರೆ..
ಯಲಹಂಕ ಶಾಸಕ ಎಸ್, ಆರ್ ವಿಶ್ವನಾಥ್ ಅವರು ಕೂಡ ಎನ್ ಇಎಸ್ ರಸ್ತೆಯಲ್ಲಿ ಫ್ಲೆಕ್ಸ್ ಹಾಕಿದ್ದರು,. ಪಾಲಿಕೆ ಜಂಟಿ ಆಯುಕ್ತ, ಎಸ್ ನಾಗರಾಜ್ ಅಲ್ಲಿದ್ದ ಎಲ್ಲಾ ಫ್ಲೆಕ್ಸ್ ಗಳನ್ನು ತೆರವುಗೊಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT