ಸಿದ್ದರಾಮಯ್ಯ 
ರಾಜ್ಯ

ರಾಮನಗರಕ್ಕೆ ಫಿಲ್ಮಿಂ ಸಿಟಿ ಸ್ಥಳಾಂತರ : ಸಿದ್ದರಾಮಯ್ಯರಿಂದ ಮುಖ್ಯಮಂತ್ರಿಗೆ ಮತ್ತೊಂದು ಪತ್ರ

ಫಿಲ್ಮಿಂ ಸಿಟಿ ಯೋಜನೆಯನ್ನು ಮೈಸೂರಿನಿಂದ ರಾಮನಗರಕ್ಕೆ ಸ್ಥಳಾಂತರಿಸಬಾರದೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರಿಗೆ ಮತ್ತೊಂದು ಪತ್ರ ಬರೆದಿದ್ದಾರೆ.

ಬೆಂಗಳೂರು: ಈ ಬಾರಿಯ ಬಜೆಟ್ ನಲ್ಲಿ ಪ್ರಸ್ತಾವಿಸಿರುವಂತೆ  ಫಿಲ್ಮಿಂ ಸಿಟಿ ಯೋಜನೆಯನ್ನು ಮೈಸೂರಿನಿಂದ ರಾಮನಗರಕ್ಕೆ ಸ್ಥಳಾಂತರಿಸಬಾರದೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರಿಗೆ ಮತ್ತೊಂದು ಪತ್ರ ಬರೆದಿದ್ದಾರೆ.

ಮೈಸೂರಿನಲ್ಲಿ ಫಿಲ್ಮಿಂ ಸಿಟಿ  ಸ್ಥಾಪಿಸುವ ಸಂಬಂಧ ಹಿಂದಿನ ಕಾಂಗ್ರೆಸ್ ಸರ್ಕಾರ ನಿರ್ಧಾರ ಕೈಗೊಂಡಿದ್ದು, 100 ಎಕರೆ ಭೂಮಿಯನ್ನು ಹಂಚಿಕೆ ಮಾಡಲಾಗಿದೆ ಮೈಸೂರಿನಲ್ಲಿಯೇ ಫಿಲ್ಮಿಂ ಸಿಟಿ ಆಗಬೇಕೆಂಬುದು ವರನಟ ಡಾ. ರಾಜ್ ಕುಮಾರ್ ಅವರ ಅಭಿಲಾಷೆ ಆಗಿತ್ತು ಎಂದು ಪತ್ರದಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ.

1945ರಿಂದಲೂ ಮೈಸೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಿನಿಮಾ ಚಿತ್ರೀಕರಣವಾಗುತ್ತಿದೆ. ಈಗ ವಿಮಾನ ನಿಲ್ದಾಣ ಇರುವುದರಿಂದ ದೇಶ , ವಿದೇಶಗ ಚಿತ್ರ ನಿರ್ಮಾಪಕರು  ಬಂದು ಚಿತ್ರೀಕರಣ ಮಾಡಲು ಸುಲಭವಾಗಿದೆ. ಆದ್ದರಿಂದ ಫಿಲ್ಮಿಂ ಸಿಟಿ ಯೋಜನೆಯನ್ನು ಮೈಸೂರಿನಿಂದ ರಾಮನಗರಕ್ಕೆ ಸ್ಥಳಾಂತರ ಮಾಡುವ ನಿರ್ಧಾರವನ್ನು  ಬದಲಿಸುವಂತೆ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರನ್ನು ಬದಲಿಸದಂತೆ  ಹಾಗೂ  ಅನ್ನ ಭಾಗ್ಯ ಯೋಜನೆಯಲ್ಲಿ ಬಿಪಿಎಲ್ ಕಾರ್ಡ್ ದಾರರಿಗೆ ನೀಡುತ್ತಿರುವ ಅಕ್ಕಿಯ ಪ್ರಮಾಣವನ್ನು ಕಡಿಮೆ ಮಾಡದಂತೆ  ಕಳೆದ ತಿಂಗಳು ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪತ್ರ ಬರೆದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT