ಮೃತ ಅಂಜನಪ್ಪ (37) ಹಾಗೂ ವೆಂಕಟೇಶ್(18) 
ರಾಜ್ಯ

ಶಿವಮೊಗ್ಗ: ಮ್ಯಾನ್​ ಹೋಲ್'ಗಿಳಿದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವು

ಮ್ಯಾನ್​ಹೋಲ್​ ಸ್ವಚ್ಚಗೊಳಿಸಲು ಇಳಿದಿದ್ದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ...

ಶಿವಮೊಗ್ಗ: ಮ್ಯಾನ್​ಹೋಲ್​ ಸ್ವಚ್ಚಗೊಳಿಸಲು ಇಳಿದಿದ್ದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ ಸೋಮವಾರ ಶಿವಮೊಗ್ಗದಲ್ಲಿ ನಡೆದಿದೆ.
ಇಂದು ಮಧ್ಯಾಹ್ನ ನಗರದ ನ್ಯೂಮಂಡ್ಲಿಯ ಬೈಪಾಸ್ ಬಳಿ ಈ ಘಟನೆ ನಡೆದಿದ್ದು, ಮೃತರು ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿಳಚೋಡು ಗ್ರಾಮದ ಅಂಜನಪ್ಪ (37) ಹಾಗೂ ವೆಂಕಟೇಶ್(18) ಎಂದು ಗುರುತಿಸಲಾಗಿದೆ.
15 ಅಡಿ ಆಳವಿದ್ದ ಮ್ಯಾನ್ ಹೋಲ್ ನಲ್ಲಿ ನೀರು ತುಂಬಿಕೊಂಡಿತ್ತು. ಮ್ಯಾನ್ ಹೋಲ್ ಕ್ಲೀನ್ ಮಾಡಲು ಇಳಿದ ಈ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ..
ಅಗ್ನಿಶಾಮಕ ದಳದ ಸಿಬ್ಬಂದಿ ಮೃತ ದೇಹಗಳನ್ನು ಮೇಲೆತ್ತಿದ್ದು, ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮ್ಯಾನ್ ಹೋಲ್ ಕಾಮಗಾರಿಯನ್ನು ಪ್ರಸಾದ್ ಎನ್ನುವವರು ಗುತ್ತಿಗೆ ಪಡೆದಿದ್ದರು ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT