ಯು. ಟಿ. ಖಾದರ್ 
ರಾಜ್ಯ

60 ಸಾವಿರ ಮನೆಗಳಲ್ಲಿ 22 ಸಾವಿರ ಮನೆಗಳು ಉತ್ತರ ಕರ್ನಾಟಕಕ್ಕೆ ಮೀಸಲು- ಯು. ಟಿ. ಖಾದರ್

60 ಸಾವಿರ ಮನೆಗಳ ಪೈಕಿ 22 ಸಾವಿರ ಮನೆಗಳನ್ನು ಉತ್ತರ ಕರ್ನಾಟಕ ಭಾಗಕ್ಕೆ ಮೀಸಲಿರಿಸಲಾಗುವುದು ಎಂದು ವಸತಿ ಸಚಿವ ಯು. ಟಿ . ಖಾದರ್ ತಿಳಿಸಿದ್ದಾರೆ.

ಬೆಂಗಳೂರು: ಮುಂದಿನ ವರ್ಷದೊಳಗೆ  ಪ್ರಧಾನಮಂತ್ರಿ ಅವಾಸ್ ಯೋಜನೆಯನ್ನು ಮುಖ್ಯಮಂತ್ರಿ ವಸತಿ ಯೋಜನೆ ಎಂದು ಮರುನಾಮಕರಣಗೊಳಿಸಿ  ನಗರ ಪ್ರದೇಶದ ಬಡವರಿಗಾಗಿ 60 ಸಾವಿರ ಮನೆಗಳನ್ನು ನಿರ್ಮಿಸಲು  ಸಿದ್ದತೆ ನಡೆಸಲಾಗಿದೆ.

ಜೆಡಿಎಸ್ -ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇದೇ ಮೊದಲ ಬಾರಿಗೆ ವಸತಿ ಯೋಜನೆ ಜಾರಿಗೊಳಿಸಲಾಗುತ್ತಿದ್ದು. 60 ಸಾವಿರ ಮನೆಗಳ   ಪೈಕಿ 22 ಸಾವಿರ ಮನೆಗಳನ್ನು ಉತ್ತರ ಕರ್ನಾಟಕ ಭಾಗಕ್ಕೆ ಮೀಸಲಿರಿಸಲಾಗುವುದು ಎಂದು ವಸತಿ ಸಚಿವ ಯು. ಟಿ . ಖಾದರ್ ತಿಳಿಸಿದ್ದಾರೆ.

ಸಿದ್ದರಾಮಯ್ಯ ಅವರ ಆಡಳಿತಾವಧಿಯಲ್ಲಿ ಜಾರಿಗೊಳಿಸಲಾಗಿದ್ದ ಅನಿಲ ಭಾಗ್ಯ ಯೋಜನೆಯನ್ನು ಉಜ್ವಲಾ ಯೋಜನೆ ಎಂದು  ಕೇಂದ್ರದ ಬಿಜೆಪಿ ಸರ್ಕಾರ ಹೆಸರು ಬದಲಾಯಿಸಿದೆ ಎಂದು ಹೇಳಿದ ಅವರು, ಮನೆಗಳ ನಿರ್ಮಾಣಕ್ಕೆ ರಾಜ್ಯಸರ್ಕಾರ ಹೆಚ್ಚಿನ  ಅನುದಾನ ನೀಡುತ್ತಿದ್ದು, ಮುಖ್ಯಮಂತ್ರಿಗಳ ವಸತಿ ಯೋಜನೆ ಎಂದು ಏಕೆ ಮರುನಾಮಕರಣ ಮಾಡಬಾರದು ಎಂದು ಖಾದರ್ ಪ್ರಶ್ನಿಸಿದ್ದಾರೆ.

 ರಾಜೀವ್ ಗಾಂಧಿ ಅವಾಸ್  ಯೋಜನೆಯನ್ನು ಪ್ರಧಾನಮಂತ್ರಿ ಅವಾಸ್ ಯೋಜನೆ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಅವರು ಹೇಳಿದರು.

ಮುಖ್ಯಮಂತ್ರಿಗಳ ವಸತಿ ಯೋಜನೆಯಡಿ ನಗರ ಪ್ರದೇಶದ ಬಡವರ ವಸತಿ ನಿರ್ಮಾಣಕ್ಕಾಗಿ ಕೇಂದ್ರ  ಹಾಗೂ ರಾಜ್ಯಸರ್ಕಾರ ಶೇ, 30 ರಷ್ಟು ಅನುದಾನ ನೀಡಲಿವೆ. ಶೇ.10 ರಷ್ಟನ್ನು ಫಲಾನುಭವಿಗಳು ಭರಿಸಬೇಕಾಗುತ್ತದೆ. ಉಳಿದ ಶೇ.30 ರಷ್ಟನ್ನು  ಬ್ಯಾಂಕುಗಳು ಸಾಲ ನೀಡಲಿವೆ ಎಂದು ಖಾದರ್ ತಿಳಿಸಿದರು.

ಈ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅರ್ಜಿದಾರರಿಗೆ ಕೇಂದ್ರಸರ್ಕಾರ 1.5 ಲಕ್ಷ ನೆರವಿನ ಹಣ ನೀಡಿದ್ದರೆ, ರಾಜ್ಯಸರ್ಕಾರ 2 ಲಕ್ಷ ನೀಡಲಿದೆ. ಸಾಮಾನ್ಯ ವರ್ಗದವರಿಗೆ  ಕೇಂದ್ರಸರ್ಕಾರ 1.2 ಲಕ್ಷ ನೀಡಿದ್ದರೆ  ರಾಜ್ಯಸರ್ಕಾರ 1.5 ಲಕ್ಷ ನೀಡಲಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

SCROLL FOR NEXT