ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು; ನಗರದ ಪ್ರತಿಷ್ಠಿತ ದೇಗುಲದಲ್ಲಿ ಸರಗಳ್ಳತನ

ರಾಜಧಾನಿ ಬೆಂಗಳೂರಿನಲ್ಲಿ ಸರಗಳ್ಳತನದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ನಗರದ ಪ್ರತಿಷ್ಠಿತ ದೇಗುಲವೊಂದರಲ್ಲಿ ಹಾಡಹಗಲೇ ಕದೀಮರು ಮಹಿಳೆಯೊಬ್ಬರ ಸರ ಕದ್ದು ಪರರಾರಿಯಾಗಿರುವ ಘಟನೆ ನಡೆದಿದೆ...

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸರಗಳ್ಳತನದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ನಗರದ ಪ್ರತಿಷ್ಠಿತ ದೇಗುಲವೊಂದರಲ್ಲಿ ಹಾಡಹಗಲೇ ಕದೀಮರು ಮಹಿಳೆಯೊಬ್ಬರ ಸರ ಕದ್ದು ಪರರಾರಿಯಾಗಿರುವ ಘಟನೆ ನಡೆದಿದೆ. 
ದೇಗುದಲ್ಲಿ ನೂರಾರು ಭಕ್ತಾದಿಗಳು ಇರುವ ಸಂದರ್ಭದಲ್ಲಿಯೇ ಕಳ್ಳರು ತಮ್ಮ ಕೈಚಳಕವನ್ನು ತೋರಿಸಿದ್ದಾರೆ. ಶಾಂತಾ.ಪಿ ರೂ.1.8 ಲಕ್ಷ ಮೌಲ್ಯದ ಸರವನ್ನು ಕಳೆದುಕೊಂಡ ಮಹಿಳೆಯಾಗಿದ್ದಾರೆ. 
ಕಳೆದ ಶುಕ್ರವಾರ ಬೆಳಿಗ್ಗೆ 11.30ರ ಸುಮಾರಿಗೆ ಶಾಂತಾ ಅವರು ಬಸವನಗುಡಿಗೆ ಬಂದಿದ್ದಾರೆ. ಸಾಲಿನಲ್ಲಿ ನಿಂತಿದ್ದ ವೇಳೆ ಭಕ್ತರಂತೆ ನಿಂತಿದ್ದ ಕದೀಮರು ಸರವನ್ನು ಕಳ್ಳತನ ಮಾಡಿದ್ದಾರೆ. ಪೂಜೆ ಸಲ್ಲಿಸಿದ ಬಳಿಕ ದೇವಸ್ಥಾನದಿಂದ ಹೊರಬಂದ ಶಾಂತರವರಿಗೆ ತಮ್ಮ ಸರ ಕಳ್ಳತನವಾಗಿರುವುದು ತಿಳಿದಿದೆ. ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ. 
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳನ್ನು ತಪಾಸಣೆ ಮಾಡಿದ್ದು, 40 ವರ್ಷದ ವ್ಯಕ್ತಿಯೊಬ್ಬ ಸರಗಳ್ಳತನ ಮಾಡಿರಬಹುದು ಎಂಬುದಾಗಿ ತಿಳಿದುಬಂದಿದೆ. ಇದೀಗ ಕದೀಮನಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT