ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು; ನಗರದ ಪ್ರತಿಷ್ಠಿತ ದೇಗುಲದಲ್ಲಿ ಸರಗಳ್ಳತನ

ರಾಜಧಾನಿ ಬೆಂಗಳೂರಿನಲ್ಲಿ ಸರಗಳ್ಳತನದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ನಗರದ ಪ್ರತಿಷ್ಠಿತ ದೇಗುಲವೊಂದರಲ್ಲಿ ಹಾಡಹಗಲೇ ಕದೀಮರು ಮಹಿಳೆಯೊಬ್ಬರ ಸರ ಕದ್ದು ಪರರಾರಿಯಾಗಿರುವ ಘಟನೆ ನಡೆದಿದೆ...

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸರಗಳ್ಳತನದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ನಗರದ ಪ್ರತಿಷ್ಠಿತ ದೇಗುಲವೊಂದರಲ್ಲಿ ಹಾಡಹಗಲೇ ಕದೀಮರು ಮಹಿಳೆಯೊಬ್ಬರ ಸರ ಕದ್ದು ಪರರಾರಿಯಾಗಿರುವ ಘಟನೆ ನಡೆದಿದೆ. 
ದೇಗುದಲ್ಲಿ ನೂರಾರು ಭಕ್ತಾದಿಗಳು ಇರುವ ಸಂದರ್ಭದಲ್ಲಿಯೇ ಕಳ್ಳರು ತಮ್ಮ ಕೈಚಳಕವನ್ನು ತೋರಿಸಿದ್ದಾರೆ. ಶಾಂತಾ.ಪಿ ರೂ.1.8 ಲಕ್ಷ ಮೌಲ್ಯದ ಸರವನ್ನು ಕಳೆದುಕೊಂಡ ಮಹಿಳೆಯಾಗಿದ್ದಾರೆ. 
ಕಳೆದ ಶುಕ್ರವಾರ ಬೆಳಿಗ್ಗೆ 11.30ರ ಸುಮಾರಿಗೆ ಶಾಂತಾ ಅವರು ಬಸವನಗುಡಿಗೆ ಬಂದಿದ್ದಾರೆ. ಸಾಲಿನಲ್ಲಿ ನಿಂತಿದ್ದ ವೇಳೆ ಭಕ್ತರಂತೆ ನಿಂತಿದ್ದ ಕದೀಮರು ಸರವನ್ನು ಕಳ್ಳತನ ಮಾಡಿದ್ದಾರೆ. ಪೂಜೆ ಸಲ್ಲಿಸಿದ ಬಳಿಕ ದೇವಸ್ಥಾನದಿಂದ ಹೊರಬಂದ ಶಾಂತರವರಿಗೆ ತಮ್ಮ ಸರ ಕಳ್ಳತನವಾಗಿರುವುದು ತಿಳಿದಿದೆ. ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ. 
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳನ್ನು ತಪಾಸಣೆ ಮಾಡಿದ್ದು, 40 ವರ್ಷದ ವ್ಯಕ್ತಿಯೊಬ್ಬ ಸರಗಳ್ಳತನ ಮಾಡಿರಬಹುದು ಎಂಬುದಾಗಿ ತಿಳಿದುಬಂದಿದೆ. ಇದೀಗ ಕದೀಮನಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ