ಕರುಣಾನಿಧಿ 
ರಾಜ್ಯ

ಕರುಣಾನಿಧಿ ವಿಧಿವಶ : ಕರ್ನಾಟಕದಲ್ಲಿ ಒಂದು ದಿನ ಶೋಕಾಚರಣೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ವಿಧಿವಶ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಒಂದು ದಿನ ಶೋಕಾಚರಣೆ ನಡೆಸಲು ಸರ್ಕಾರ ನಿರ್ಧರಿಸಿದೆ.

ಬೆಂಗಳೂರು :ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ವಿಧಿವಶ ಹಿನ್ನೆಲೆಯಲ್ಲಿ  ಕರ್ನಾಟಕದಲ್ಲಿ ಒಂದು ದಿನ ಶೋಕಾಚರಣೆ ನಡೆಸಲು ಸರ್ಕಾರ ನಿರ್ಧರಿಸಿದೆ.

ಕರುಣಾನಿಧಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ ನಂತರ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಈ ನಿರ್ಧಾರ ಘೋಷಿಸಿದ್ದಾರೆ.  

ತಮಿಳುನಾಡು ಬೆಳವಣಿಗೆ ಹಾಗೂ ಡಿಎಂಕೆ ಪಕ್ಷವನ್ನು ಸದೃಢಗೊಳಿಸಲು ಕರುಣಾನಿಧಿ ತಮ್ಮ  ಜೀವಿತಾದುದ್ದಕ್ಕೂ ಶ್ರಮಿಸಿದ್ದರು. ಅನೇಕ ಬಾರಿ ಅವರನ್ನು ಭೇಟಿಯಾದ್ದಾಗ  ಪ್ರಾದೇಶಿಕ ಪಕ್ಷಗಳ ಪ್ರಾಮುಖ್ಯತೆಯನ್ನು ಅರ್ಥಮಾಡಿಸುತ್ತಿದ್ದರು  ಎಂದು  ಕುಮಾರಸ್ವಾಮಿ ಹೇಳಿದ್ದಾರೆ.

ಕರುಣಾನಿಧಿ ನಿಧನದಿಂದ ತಮಿಳುನಾಡು ದೂರದೃಷ್ಟಿವುಳ್ಳ ಒಬ್ಬ ನಾಯಕನನ್ನು ಕಳೆದುಕೊಂಡಂತಾಗಿದ್ದು, ದೇಶದ ರಾಜಕಾರಣದಲ್ಲಿ ಅನನ್ಯ ವ್ಯಕ್ತಿಯನ್ನು ಕಳೆದುಕೊಂಡಿದ್ದೇವೆ ಎಂದು ಸಂತಾಪ ಸೂಚಿಸಿದ್ದಾರೆ

ಐದು ಬಾರಿ ತಮಿಳುನಾಡು ಮುಖ್ಯಮಂತ್ರಿಯಾಗಿದ್ದ ಕರುಣಾನಿಧಿ ನಿಧನಕ್ಕೆ ಕರ್ನಾಟಕ ಸಂತಾಪ ಸೂಚಿಸಿದೆ. ಅವರು ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಉಭಯ ರಾಜ್ಯಗಳ ನಡುವೆ ಕಾವೇರಿ ನದಿ ನೀರಿನ ಹಂಚಿಕೆ ಸಂಬಂಧ ಹೋರಾಟ ಭುಗಿಲೆದ್ದಿತ್ತು.

ಯಾವುದೇ ಅಹಿತರ ವಾತಾವರಣದ ಮುಂಜಾಗ್ರತಾ ಕ್ರಮವಾಗಿ ಸರ್ಕಾರ ತಾತ್ಕಾಲಿಕವಾಗಿ ತಮಿಳುನಾಡಿಗೆ ಬಸ್ ಸೇವೆಯನ್ನು ರದ್ದುಗೊಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT