ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ ವಿದ್ಯಾರ್ಥಿಗಳ ನೆರವಿಗೆ 'ಕಲ್ಯಾಣ ಕೇಂದ್ರ' ಸಹಾಯವಾಣಿ 
ರಾಜ್ಯ

ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ ವಿದ್ಯಾರ್ಥಿಗಳ ನೆರವಿಗೆ 'ಕಲ್ಯಾಣ ಕೇಂದ್ರ' ಸಹಾಯವಾಣಿ

ಸಮಾಜ ಕಲ್ಯಾಣ ಇಲಾಖೆ ನಡೆಯುತ್ತಿರುವ ವಸತಿ ನಿಲಯದಲ್ಲಿ ನೀಡಲಾಗುತ್ತಿರುವ ಆಹಾರ ತಿನ್ನಲು ಯೋಗ್ಯವಾಗಿಲ್ಲವೇ? ಇಲಾಖೆ ನೀಡುತ್ತಿರುವ ವಿದ್ಯಾರ್ಥಿ ವೇತನದಲ್ಲಿ ಸಮಸ್ಯೆಗಳಾಗುತ್ತಿವೆಯೇ? ಒಂದು ವೇಳೆ ನಿಮ್ಮ ಉತ್ತರ ಹೌದು ಎಂದಾದರೆ...

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ನಡೆಯುತ್ತಿರುವ ವಸತಿ ನಿಲಯದಲ್ಲಿ ನೀಡಲಾಗುತ್ತಿರುವ ಆಹಾರ ತಿನ್ನಲು ಯೋಗ್ಯವಾಗಿಲ್ಲವೇ? ಇಲಾಖೆ ನೀಡುತ್ತಿರುವ ವಿದ್ಯಾರ್ಥಿ ವೇತನದಲ್ಲಿ ಸಮಸ್ಯೆಗಳಾಗುತ್ತಿವೆಯೇ? ಒಂದು ವೇಳೆ ನಿಮ್ಮ ಉತ್ತರ ಹೌದು ಎಂದಾದರೆ, ಸಮಸ್ಯೆ ಪರಿಹಾರಕ್ಕೆ ಕೂಡಲೇ 24*7 ಗಂಟೆಯ ಕಲ್ಯಾಣ ಕೇಂದ್ರ ಸಹಾಯವಾಣಿಗೆ ಕರೆ ಮಾಡಿ. 
ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಸಿಗಬೇಕಾದ ಸವಲತ್ತು ಪಾರದರ್ಶಕವಾಗಿ ಸಿಗಬೇಕೆಂದು ದೇಶದಲ್ಲಿಯೇ ಪ್ರಪ್ರಥಮ ಬಾರಿಗೆ ಕಲ್ಯಾಣ ಕೇಂದ್ರ ಸಹಾಯವಾಣಿಯನ್ನು ಆರಂಭಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ಯಾವುದೇ ಸಮಸ್ಯೆ, ಸೌಲಭ್ಯಗಳ ಕೊರತೆ, ಇಲಾಖೆ ಯೋಜನೆಗಳ ಕುರಿತು ಇಲ್ಲಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ದಿನದ 24 ಗಂಟೆಯೂ ಈ ಕೇಂದ್ರ ಸಾರ್ವಜನಿಕ ಸೇವೆಗೆ ಲಭ್ಯವಿರುತ್ತದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಹೇಳಿದ್ದಾರೆ. 
ಮಂಗಳವಾರ ನಗರದ ನೃಪತುಂಗ ರಸ್ತೆಯ ಯವನಿಕಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಹಾಯವಾಣಿ ಕೇಂದ್ರ ಲೋಕಾರ್ಪಣೆಗೊಳಿಸಿ ಪರಮೇಶ್ವರ್ ಅವರು ಮಾತನಾಡಿದ್ದಾರೆ. 
ರಾಜ್ಯಾದ್ಯಂತ ಇಲಾಖೆಯ 2,500 ವಿದ್ಯಾರ್ಥಿ ವಸತಿ ನಿಲಯಗಳಿದ್ದು, ಅಲ್ಲಿನ ಲೋಪದೋಷ, ಕುಂದು-ಕೊರತೆ, ವಿದ್ಯಾರ್ಥಿ ವೇತನ, ಕಮಿಷನ್ ಮುಂತಾದ ಸಮಸ್ಯೆಗಳ ಕುರಿತು ವಿದ್ಯಾರ್ಥಿಗಳು ಸಹಾಯವಾಣಿ ಕೇಂದ್ರಕ್ಕೆ ದೂರು ನೀಡಿದ ಕೂಡಲೇ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ. 
ದೂರು ನೀಡಿದ ನಂತರ ದೂರುದಾರರಿಗೆ ಒಂದು ಕ್ಷಿಪ್ರ ನೋಂದಣಿ ಸಂಖ್ಯೆ ನೀಡಲಾಗುತ್ತದೆ ಜೊತೆಗೆ ಸಾರ್ವಜನಿಕರ ಅಹವಾಲನ್ನು ಸ್ವೀಕರಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ಪರಿಹಾರಕ್ಕಾಗಿ ಕಾರ್ಯೋನ್ಮುಖರಾಗಲು ಸೂಚಿಸಲಾಗುವುದು ಎಂದು ತಿಳಿಸಿದ್ದಾರೆ. 
ಸಮಾಜ ಕಲ್ಯಾಣ ಇಲಾಖೆ ಸಹಾಯವಾಣಿ ಸಂಖ್ಯೆ 080-22634300, ವಾಟ್ಸ್ಆ್ಯಪ್ ಅಥವಾ ತೆಲಿಗ್ರಾಂ ಸಂಖ್ಯೆ 9901100000 ಆಗಿದ್ದು, ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದೆ. ಇಲಾಖೆಗೆ ಸಂಬಂಧಪಟ್ಟ ಯಾವುದೇ ಮಾಹಿತಿ, ದೂರುಗಳು ಇದ್ದಲ್ಲಿ ಈ ದೂರವಾಣಿ ಸಂಖ್ಯೆಗೆ ಕರೆ ಮಾಡಿ ದಾಖಲಿಸಬಹುದು ಎಂದು ಸಮಾಜಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT