ಕರ್ನಾಟಕ-ತಮಿಳುನಾಡು ಭಾಗದಲ್ಲಿರುವ ಪಲರ್ ನಲ್ಲಿ ಕಾವೇರಿ ನದಿ ತುಂಬಿ ಹರಿಯುತ್ತಿರುವುದು 
ರಾಜ್ಯ

ಮೇಕೆದಾಟು ಯೋಜನೆಗೆ ಕರ್ನಾಟಕ, ತಮಿಳುನಾಡು ಭಾಗದ ರೈತರ ಒತ್ತಾಯ

ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ಮತ್ತು ತಮಿಳು ನಾಡು ...

ಮೈಸೂರು: ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ಮತ್ತು ತಮಿಳು ನಾಡು ಸರ್ಕಾರಗಳು ಇನ್ನೂ ನಿಯಮ ರೂಪಿಸಿಲ್ಲ. ಯೋಜನೆ ಜಾರಿಗೆ ಬರುವ ಬಗ್ಗೆ ಗೊಂದಲದಲ್ಲಿದೆ. ಆದರೆ ಕಾವೇರಿ ನದಿ ತೀರದಲ್ಲಿರುವ ಗ್ರಾಮಸ್ಥರು ಮತ್ತು ರೈತರು ನೀರು ನಿಷ್ಪ್ರಯೋಜಕವಾಗುತ್ತಿದ್ದು, ಜಲಾಶಯ ನಿರ್ಮಿಸಿದರೆ ಒಳ್ಳೆಯದು ಎಂದು ಹೇಳುತ್ತಿದ್ದಾರೆ.

ಮೆಟ್ಟೂರು ಜಲಾಶಯದಿಂದ ಹೊರಬರುವ ನೀರು ನಿರುಪಯೋಗವಾಗಿ ಸಮುದ್ರ ಸೇರುತ್ತಿರುವುದು ನೋಡಿದರೆ ತೀರದ ರೈತರಿಗೆ ತೀವ್ರ ಬೇಸರ ತರುತ್ತದೆ. ಒಂದೆಡೆ ನೀರು ನಿಷ್ಪ್ರಯೋಜಕವಾಗಿ ಸಮುದ್ರ ಸೇರುತ್ತಿದ್ದರೆ ಕಾವೇರಿ ಜಲಾನಯನ ಪ್ರದೇಶದ ರೈತರು ನೀರಿಲ್ಲದೆ ಸರಿಯಾಗಿ ಬೆಳೆ ಬೆಳೆಯಲು ಆಗದೆ ಕಷ್ಟಪಡುತ್ತಿದ್ದಾರೆ.

ಕಬಿನಿ ಮತ್ತು ಕೆಆರ್ ಎಸ್ ಜಲಾಶಯಗಳಿಂದ ಕಳೆದ ಕೆಲ ವಾರಗಳಲ್ಲಿ ತಮಿಳುನಾಡಿಗೆ 155 ಟಿಎಂಸಿ ನೀರನ್ನು ಬಿಡಲಾಗಿದ್ದು ಕೊಡಗು ಮತ್ತು ಕೇರಳದ ವಯನಾಡಿನಲ್ಲಿ ಸತತ ಮಳೆಯಿಂದಾಗಿ ಜಲಾಶಯಗಳಿಂದ 1 ಲಕ್ಷ ಕ್ಯೂಸೆಕ್ಸ್ ನೀರು ಹೊರಹಾಕಲಾಗಿದೆ.
ಮೆಟ್ಟೂರು ಜಲಾಶಯದಲ್ಲಿ 93.47 ಟಿಎಂಸಿ ನೀರು ಸಂಗ್ರಹವಾಗಿದ್ದು, ಅದು ಕೆಆರ್ ಎಸ್ ಜಲಾಶಯದ ಸಾಮರ್ಥ್ಯಕ್ಕಿಂತ ದುಪ್ಪಟ್ಟಾಗಿದೆ. ನೀರಿನ ಒಳಹರಿವು ಅಧಿಕವಾಗಿರುವುದರಿಂದ ತಮಿಳುನಾಡು ರಾಜ್ಯದ ಅಧಿಕಾರಿಗಳು ಜುಲೈ 15ರಂದು ನೀರಿನ ಮಟ್ಟವನ್ನು ನಿಯಂತ್ರಿಸುವ ಬಾಗಿಲನ್ನು ತೆರೆದಿದ್ದರು. ಧಾರಾಕಾರ ಮಳೆಯಿಂದಾಗಿ ಜಲಾಶಯ ತುಂಬಿದ್ದರಿಂದ ಶ್ರೀರಂಗಪಟ್ಟಣ ಪಕ್ಷಿಧಾಮ ಮತ್ತು ಹೊಗೆನೆಕಲ್ ಜಲಪಾತವನ್ನು ಪ್ರವಾಸಿಗರಿಗೆ  ಮುಚ್ಚಲಾಗಿತ್ತು.

ಎರಡೂ ರಾಜ್ಯಗಳ ಸುಮಾರು 20 ಗ್ರಾಮಗಳ ರೈತರು ಕಾವೇರಿ ನದಿಗೆ ಆದಿ ಪೆರುಕ್ಕು ಪೂಜೆ ಸಲ್ಲಿಸಿದ್ದರು. 5 ವರ್ಷಗಳ ನಂತರ ಕಾವೇರಿ ನದಿ ತುಂಬಿ ಹರಿಯುತ್ತಿರುವುದು ನೋಡಿದರೆ ಖುಷಿಯಾಗುತ್ತಿದೆ. ನದಿ ನೀರನ್ನು ನಂಬಿರುವ ಲಕ್ಷಾಂತರ ರೈತರ ಸಮಸ್ಯೆಗಳನ್ನು ಬಗೆಹರಿಸುತ್ತದೆ ಎಂದು ನಾವು ಭಾವಿಸುತ್ತೇವೆ ಎಂದು ತಮಿಳುನಾಡು ಭಾಗದ ರೈತ ವೆಲ್ಲಿ ಹೇಳುತ್ತಾರೆ.

ಕೇಂದ್ರ ಸಚಿವ ಗಡ್ಕರಿ ಭೇಟಿ ಮಾಡಿದ ಶಿವಕುಮಾರ್: ಮೇಕೆದಾಟು ಕುಡಿಯುವ ನೀರು ಮತ್ತು ಜಲ ವಿದ್ಯುತ್ ಯೋಜನೆಯನ್ನು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಾರಿಗೆ ತರಲು ಕರ್ನಾಟಕ ಸರ್ಕಾರ ಮತ್ತೆ ಪ್ರಯತ್ನಿಸುತ್ತಿದೆ. ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ಕೇಂದ್ರ ನೀರಾವರಿ ಖಾತೆ ಸಚಿವ ನಿತಿನ್ ಗಡ್ಕರಿಯನ್ನು ಭೇಟಿ ಮಾಡಿ ಯೋಜನೆಯ ಸಾಧ್ಯತಾ ವರದಿಯನ್ನು ತ್ವರಿತವಾಗಿ ಅನುಮೋದನೆ ಮಾಡಬೇಕೆಂದು ಹೇಳಿದ್ದಾರೆ.

5,912 ಕೋಟಿ ರೂಪಾಯಿಗಳ ಯೋಜನೆ ಇದಾಗಿದ್ದು, ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಮೇಕೆದಾಟುವಿನಲ್ಲಿ 65 ಟಿಎಂಸಿ ನೀರು ಸಂಗ್ರಹಣೆ ಸಾಮರ್ಥ್ಯದ ಸಮಾನಾಂತರ ಜಲಾಶಯವನ್ನು ನಿರ್ಮಿಸುವುದು ಕೂಡ ಇದರಲ್ಲಿ ಸೇರಿದೆ. ಇದರಿಂದ ಬೆಂಗಳೂರು ಮತ್ತು ಸುತ್ತಮುತ್ತಲ ಪಟ್ಟಣಗಳಿಗೆ ಕುಡಿಯುವ ನೀರು ಒದಗಿಸುವುದು ಮಾತ್ರವಲ್ಲದೆ 400 ಮೆಗಾವ್ಯಾಟ್ ಸಾಮರ್ಥ್ಯದ ವಿದ್ಯುತ್ ನ್ನು ಉತ್ಪಾದಿಸಬಲ್ಲುದು. ತನ್ನ ಪಾಲಿನ ನೀರನ್ನು ಮಾತ್ರ ಇದಕ್ಕೆ ಬಳಸುವುದಾಗಿ ಕರ್ನಾಟಕ ಹೇಳುತ್ತಿದ್ದರೂ ತಮಿಳುನಾಡು ಸರ್ಕಾರ ಈ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದು, ಯೋಜನೆಗೆ ಅನುಮೋದನೆ ನೀಡಬಾರದೆಂದು ಹೇಳುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT