ಎಚ್ ಡಿ ಕುಮಾರಸ್ವಾಮಿ - ದಲೈ ಲಾಮಾ 
ರಾಜ್ಯ

ಟಿಬೆಟಿಯನ್ನರಿಗೆ ಆಶ್ರಯ ನೀಡಿದ ಕರ್ನಾಟಕಕ್ಕೆ ಧನ್ಯವಾದ: ದಲೈ ಲಾಮಾ

ಟಿಬೆಟಿಯನ್ನರಿಗೆ ರಾಜ್ಯದ ಐದು ಕಡೆ ಆಶ್ರಯ ನೀಡಿದ ಕರ್ನಾಟಕಕ್ಕೆ ನನ್ನ ಧನ್ಯವಾದಗಳು ಎಂದು ಟಿಬೆಟಿಯನ್...

ಬೆಂಗಳೂರು: ಟಿಬೆಟಿಯನ್ನರಿಗೆ ರಾಜ್ಯದ ಐದು ಕಡೆ ಆಶ್ರಯ ನೀಡಿದ ಕರ್ನಾಟಕಕ್ಕೆ ನನ್ನ ಧನ್ಯವಾದಗಳು ಎಂದು ಟಿಬೆಟಿಯನ್ ಧರ್ಮ ಗುರು ದಲೈ ಲಾಮಾ ಅವರು ಶುಕ್ರವಾರ ಹೇಳಿದ್ದಾರೆ.
'ಧನ್ಯವಾದ ಭಾರತ'ದ ಅಂಗವಾಗಿ ಇಂದು ನಗರದಲ್ಲಿ ಟಿಬೆಟಿಯನ್ನರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ದಲೈ ಲಾಮಾ ಅವರು, ಟಿಬೆಟಿಯನ್ನರ ಗಡಿಪಾರುಗೆ ಈಗ 60 ವರ್ಷ. ಇದನ್ನು ಕೃತಜ್ಞತಾ ವರ್ಷವಾಗಿ ಆಚರಿಸಲಾಗುತ್ತಿದ್ದು, ಇದು ಅವರ ಕೃತಜ್ಞತಾ ಭಾವವನ್ನು ತೋರಿಸುತ್ತದೆ ಎಂದರು.
ಇನ್ನು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು, ರಾಜ್ಯದಲ್ಲಿ ನೆಲೆಸಿರುವ ಟಿಬೆಟಿಯನ್ನರಿಗೆ ಅಗತ್ಯವಾದ ಎಲ್ಲ ನೆರವು ಹಾಗೂ ಸೌಲಭ್ಯ ನೀಡುವುದಾಗಿ ಭರವಸೆ ನೀಡಿದರು.
ಇತ್ತೀಚಿಗಷ್ಟೇ ಜವಾಹರ್ ಲಾಲ್ ನೆಹರೂ ಅವರದ್ದು ಸ್ವಾರ್ಥ ಸ್ವಭಾವ ಎಂದು ಹೇಳಿ, ಬಳಿಕ ಕ್ಷಮೆಯಾಚಿಸಿದ್ದ ದಲೈ ಲಾಮಾ ಅವರು ಇಂದು, ನೆಹರೂ ಅವರ ಸಲಹೆಯನ್ನು ನಾನು ಚೆನ್ನಾಗಿ ಬಳಸಿಕೊಂಡೆ. ಅವರು ಟಿಬೆಟಿಯನ್ ಸಂಸ್ಕೃತಿ ಬಗ್ಗೆ ಮತ್ತು ಟಿಬೆಟಿಯನ್ನರಿಗೆ ಪ್ರತ್ಯೇಕ ಶಾಲೆಗಳನ್ನು ಆರಂಭಿಸುವುದಕ್ಕೆ ಬೆಂಬಲ ನೀಡಿದ್ದರು ಎಂದು ಹೊಗಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಚಿನ್ನಸ್ವಾಮಿ ಮೈದಾನದಲ್ಲಿ CSK ಮಣಿಸಿದ RCB, ಚೆನ್ನೈಗೆ ಸತತ 3ನೇ ಸೋಲು!

ಗುಜರಾತ್ ಜನರು ಅನಕ್ಷರಸ್ಥರು..; ಮೋದಿ, ಪಿಣರಾಯಿ ವಿಜಯನ್ ಜನರ ದಾರಿ ತಪ್ಪಿಸಿದ್ದಾರೆ: Mallikarjun Kharge

ಟ್ರಂಪ್ 48 ಗಂಟೆಗಳ ಗಡುವು ಬೆನ್ನಲ್ಲೇ ಇರಾನ್‌ನ ಮತ್ತೊಬ್ಬ IRGC ಹಿರಿಯ ಕಮಾಂಡರ್ ಹತ್ಯೆಗೈದ ಇಸ್ರೇಲ್!

Operation Eagle Claw ವೈಫಲ್ಯ, ಮಣ್ಣು ಮುಕ್ಕಿದ್ದು ಮರೆತುಬಿಟ್ರಾ? 'ಈ ಸಂದೇಶ' ನೆನಪಿಡಿ: US Crazy Bast*rds ಪೋಸ್ಟ್ ಗೆ ಇರಾನ್ ವ್ಯಂಗ್ಯ!

IPL 2026: ಚಿನ್ನಸ್ವಾಮಿಯಲ್ಲಿ ಸಿಕ್ಸರ್​ಗಳ ಸುರಿಮಳೆ; CSK ವಿರುದ್ಧ ದಾಖಲೆಯ 250 ರನ್ ಪೇರಿಸಿದ RCB

SCROLL FOR NEXT