ಎಚ್ ಡಿ ಕುಮಾರಸ್ವಾಮಿ - ದಲೈ ಲಾಮಾ 
ರಾಜ್ಯ

ಟಿಬೆಟಿಯನ್ನರಿಗೆ ಆಶ್ರಯ ನೀಡಿದ ಕರ್ನಾಟಕಕ್ಕೆ ಧನ್ಯವಾದ: ದಲೈ ಲಾಮಾ

ಟಿಬೆಟಿಯನ್ನರಿಗೆ ರಾಜ್ಯದ ಐದು ಕಡೆ ಆಶ್ರಯ ನೀಡಿದ ಕರ್ನಾಟಕಕ್ಕೆ ನನ್ನ ಧನ್ಯವಾದಗಳು ಎಂದು ಟಿಬೆಟಿಯನ್...

ಬೆಂಗಳೂರು: ಟಿಬೆಟಿಯನ್ನರಿಗೆ ರಾಜ್ಯದ ಐದು ಕಡೆ ಆಶ್ರಯ ನೀಡಿದ ಕರ್ನಾಟಕಕ್ಕೆ ನನ್ನ ಧನ್ಯವಾದಗಳು ಎಂದು ಟಿಬೆಟಿಯನ್ ಧರ್ಮ ಗುರು ದಲೈ ಲಾಮಾ ಅವರು ಶುಕ್ರವಾರ ಹೇಳಿದ್ದಾರೆ.
'ಧನ್ಯವಾದ ಭಾರತ'ದ ಅಂಗವಾಗಿ ಇಂದು ನಗರದಲ್ಲಿ ಟಿಬೆಟಿಯನ್ನರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ದಲೈ ಲಾಮಾ ಅವರು, ಟಿಬೆಟಿಯನ್ನರ ಗಡಿಪಾರುಗೆ ಈಗ 60 ವರ್ಷ. ಇದನ್ನು ಕೃತಜ್ಞತಾ ವರ್ಷವಾಗಿ ಆಚರಿಸಲಾಗುತ್ತಿದ್ದು, ಇದು ಅವರ ಕೃತಜ್ಞತಾ ಭಾವವನ್ನು ತೋರಿಸುತ್ತದೆ ಎಂದರು.
ಇನ್ನು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು, ರಾಜ್ಯದಲ್ಲಿ ನೆಲೆಸಿರುವ ಟಿಬೆಟಿಯನ್ನರಿಗೆ ಅಗತ್ಯವಾದ ಎಲ್ಲ ನೆರವು ಹಾಗೂ ಸೌಲಭ್ಯ ನೀಡುವುದಾಗಿ ಭರವಸೆ ನೀಡಿದರು.
ಇತ್ತೀಚಿಗಷ್ಟೇ ಜವಾಹರ್ ಲಾಲ್ ನೆಹರೂ ಅವರದ್ದು ಸ್ವಾರ್ಥ ಸ್ವಭಾವ ಎಂದು ಹೇಳಿ, ಬಳಿಕ ಕ್ಷಮೆಯಾಚಿಸಿದ್ದ ದಲೈ ಲಾಮಾ ಅವರು ಇಂದು, ನೆಹರೂ ಅವರ ಸಲಹೆಯನ್ನು ನಾನು ಚೆನ್ನಾಗಿ ಬಳಸಿಕೊಂಡೆ. ಅವರು ಟಿಬೆಟಿಯನ್ ಸಂಸ್ಕೃತಿ ಬಗ್ಗೆ ಮತ್ತು ಟಿಬೆಟಿಯನ್ನರಿಗೆ ಪ್ರತ್ಯೇಕ ಶಾಲೆಗಳನ್ನು ಆರಂಭಿಸುವುದಕ್ಕೆ ಬೆಂಬಲ ನೀಡಿದ್ದರು ಎಂದು ಹೊಗಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT