ಜಿ. ಪರಮೇಶ್ವರ 
ರಾಜ್ಯ

ಎಲ್ಲಾ ಅಕ್ರಮ ವಲಸಿಗರನ್ನು ಗಡೀಪಾರು ಮಾಡಲು ನಾವು ಸಿದ್ದರಿದ್ದೇವೆ: ಜಿ. ಪರಮೇಶ್ವರ

ಕರ್ನಾಟಕದಲ್ಲಿ ವಾಸಿಸುತ್ತಿರುವ ಎಲ್ಲಾ ಅಕ್ರಮ ವಲಸಿಗರನ್ನು ರಾಜ್ಯದಿಂದ ಗಡೀಪಾರು ಮಾಡಲಾಗುತ್ತದೆ.ಎಂದು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ತಿಳಿಸಿದ್ದಾರೆ.

ಬೆಂಗಳೂರು: ಕರ್ನಾಟಕದಲ್ಲಿ ವಾಸಿಸುತ್ತಿರುವ ಎಲ್ಲಾ ಅಕ್ರಮ ವಲಸಿಗರನ್ನು ರಾಜ್ಯದಿಂದ ಗಡೀಪಾರು ಮಾಡಲಾಗುತ್ತದೆ.ಎಂದು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ತಿಳಿಸಿದ್ದಾರೆ. ಆಯಾ ದೇಶದ ರಾಯಭಾರಿಗಳಿಂದ ಸೂಕ್ತ ಮಾಹಿತಿ ಪಡೆದ ಬಳಿಕ ಈ ಕ್ರಮ ಜರುಗಿಸಲಾಗುತ್ತದೆ ಎಂದು ಅವರು ಹೇಳಿದರು. 
ಶುಕ್ರವಾರ ಮಾಧ್ಯಮ ಮಿತ್ರರ ಜತೆ ಮಾತನಾಡಿದ ಪರಮೇಶ್ವರ್ ರಾಜ್ಯದಲ್ಲಿ ಎಷ್ಟು ಅಕ್ರಮ ವಲಸಿಗರು ವೀಸಾ ಇಲ್ಲದೆ ಅಥವಾ ವೀಸಾ ಅವಧಿ ಮುಕ್ತಾಯದ ಬಳಿಕವೂ ಉಳಿದುಕೊಂಡಿದ್ದಾರೆ ಎನ್ನುವುದನ್ನು ರಾಜ್ಯ ಸರ್ಕಾರ ಅಂದಾಜಿಸಿದೆ ಎಂದಿದ್ದಾರೆ.
"ಅಧಿಕೃತ ವೀಸಾ  ಮತ್ತು ದಾಖಲೆಗಳಿಲ್ಲದ ಯಾವುದೇ ವಲಸಿಗರು ಅವರ ದೇಶಕ್ಕೆ ಹಿಂತಿರುಗಬೇಕಾಗುವುದು. ಇತ್ತೀಚೆಗೆ ಡ್ರಗ್ಸ್ ಮಾಫಿಯಾದಲ್ಲಿ ತೊಡಗಿಸಿಕೊಂಡ  107 ಆಫ್ರಿಕನ್ ರಾಷ್ಟ್ರಗಳ ಪ್ರಜೆಗಳು ವೀಸಾ ಇಲ್ಲದೆ ಅಥವಾ ತಮ್ಮ ವೀಸಾ ಅವಧಿ ಮುಗಿದ ಬಳಿಕ ಸಹ ಇಲ್ಲಿಯೇ ಉಳಿದಿದ್ದಾರೆ ಎನ್ನುವುದು ತಿಳಿದುಬಂದಿದೆ. ಅವರನ್ನು ಇನ್ನು ಕೆಲವೇ ದಿನಗಳಲ್ಲಿ ಗಡೀಪಾರು ಮಾಡುತ್ತೇವೆ
"ಅವರು ತಮ್ಮ ತಮ್ಮ ದೇಶಕ್ಕೆ ತೆರಳಲು ನಾವುಗಳೇ ವಿಮಾನ ನಿಲ್ದಾಣಕ್ಕೆ ತೆರಳುವ ಹಾಗೂ  ಟಿಕೆಟ್ ಖರ್ಚನ್ನು ಭರಿಸುತ್ತೇವೆ. ಇದಕ್ಕೆ ಮುನ್ನ ಸಂಬಂಧಪಟ್ಟ ದೂತಾವಾಸಕ್ಕೆ ಇವರ ಕುರಿತು ಮಾಹಿತಿ ನೀಡಲಿದ್ದೇವೆ.ಹೀಗೆ ಗಡೀಪಾರಿಗೆ ಖರ್ಚಾದ ವೆಚ್ಚವನ್ನು ಆಯಾ ರಾಷ್ಟ್ರಗಳ ರಾಯಬಾರಿಗಳಿಂದ ಸಂಗ್ರಹಿಸಲಾಗುತ್ತದೆ  " ಪರಮೇಶ್ವರ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel