ಜಿ. ಪರಮೇಶ್ವರ 
ರಾಜ್ಯ

ಎಲ್ಲಾ ಅಕ್ರಮ ವಲಸಿಗರನ್ನು ಗಡೀಪಾರು ಮಾಡಲು ನಾವು ಸಿದ್ದರಿದ್ದೇವೆ: ಜಿ. ಪರಮೇಶ್ವರ

ಕರ್ನಾಟಕದಲ್ಲಿ ವಾಸಿಸುತ್ತಿರುವ ಎಲ್ಲಾ ಅಕ್ರಮ ವಲಸಿಗರನ್ನು ರಾಜ್ಯದಿಂದ ಗಡೀಪಾರು ಮಾಡಲಾಗುತ್ತದೆ.ಎಂದು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ತಿಳಿಸಿದ್ದಾರೆ.

ಬೆಂಗಳೂರು: ಕರ್ನಾಟಕದಲ್ಲಿ ವಾಸಿಸುತ್ತಿರುವ ಎಲ್ಲಾ ಅಕ್ರಮ ವಲಸಿಗರನ್ನು ರಾಜ್ಯದಿಂದ ಗಡೀಪಾರು ಮಾಡಲಾಗುತ್ತದೆ.ಎಂದು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ತಿಳಿಸಿದ್ದಾರೆ. ಆಯಾ ದೇಶದ ರಾಯಭಾರಿಗಳಿಂದ ಸೂಕ್ತ ಮಾಹಿತಿ ಪಡೆದ ಬಳಿಕ ಈ ಕ್ರಮ ಜರುಗಿಸಲಾಗುತ್ತದೆ ಎಂದು ಅವರು ಹೇಳಿದರು. 
ಶುಕ್ರವಾರ ಮಾಧ್ಯಮ ಮಿತ್ರರ ಜತೆ ಮಾತನಾಡಿದ ಪರಮೇಶ್ವರ್ ರಾಜ್ಯದಲ್ಲಿ ಎಷ್ಟು ಅಕ್ರಮ ವಲಸಿಗರು ವೀಸಾ ಇಲ್ಲದೆ ಅಥವಾ ವೀಸಾ ಅವಧಿ ಮುಕ್ತಾಯದ ಬಳಿಕವೂ ಉಳಿದುಕೊಂಡಿದ್ದಾರೆ ಎನ್ನುವುದನ್ನು ರಾಜ್ಯ ಸರ್ಕಾರ ಅಂದಾಜಿಸಿದೆ ಎಂದಿದ್ದಾರೆ.
"ಅಧಿಕೃತ ವೀಸಾ  ಮತ್ತು ದಾಖಲೆಗಳಿಲ್ಲದ ಯಾವುದೇ ವಲಸಿಗರು ಅವರ ದೇಶಕ್ಕೆ ಹಿಂತಿರುಗಬೇಕಾಗುವುದು. ಇತ್ತೀಚೆಗೆ ಡ್ರಗ್ಸ್ ಮಾಫಿಯಾದಲ್ಲಿ ತೊಡಗಿಸಿಕೊಂಡ  107 ಆಫ್ರಿಕನ್ ರಾಷ್ಟ್ರಗಳ ಪ್ರಜೆಗಳು ವೀಸಾ ಇಲ್ಲದೆ ಅಥವಾ ತಮ್ಮ ವೀಸಾ ಅವಧಿ ಮುಗಿದ ಬಳಿಕ ಸಹ ಇಲ್ಲಿಯೇ ಉಳಿದಿದ್ದಾರೆ ಎನ್ನುವುದು ತಿಳಿದುಬಂದಿದೆ. ಅವರನ್ನು ಇನ್ನು ಕೆಲವೇ ದಿನಗಳಲ್ಲಿ ಗಡೀಪಾರು ಮಾಡುತ್ತೇವೆ
"ಅವರು ತಮ್ಮ ತಮ್ಮ ದೇಶಕ್ಕೆ ತೆರಳಲು ನಾವುಗಳೇ ವಿಮಾನ ನಿಲ್ದಾಣಕ್ಕೆ ತೆರಳುವ ಹಾಗೂ  ಟಿಕೆಟ್ ಖರ್ಚನ್ನು ಭರಿಸುತ್ತೇವೆ. ಇದಕ್ಕೆ ಮುನ್ನ ಸಂಬಂಧಪಟ್ಟ ದೂತಾವಾಸಕ್ಕೆ ಇವರ ಕುರಿತು ಮಾಹಿತಿ ನೀಡಲಿದ್ದೇವೆ.ಹೀಗೆ ಗಡೀಪಾರಿಗೆ ಖರ್ಚಾದ ವೆಚ್ಚವನ್ನು ಆಯಾ ರಾಷ್ಟ್ರಗಳ ರಾಯಬಾರಿಗಳಿಂದ ಸಂಗ್ರಹಿಸಲಾಗುತ್ತದೆ  " ಪರಮೇಶ್ವರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT