ಬ್ರಿಟಿಷ್ ಹೈಕಮಿಷನರ್ ಸರ್ ಡೊಮಿನಿಕ್ ಅಸ್ಕಿತ್ ಮತ್ತು ಅವರ ಪತ್ನಿ 
ರಾಜ್ಯ

ಸಾಮಾನ್ಯರಂತೆ ರೈಲಿನಲ್ಲಿ ಬಂದು ಹಂಪಿ ಸುತ್ತಾಡಿದ ಬ್ರಿಟಿಷ್ ಹೈ ಕಮಿಷನರ್ ದಂಪತಿ

ಸಾಮಾನ್ಯವಾಗಿ ಪ್ರಭಾವಿ ವ್ಯಕ್ತಿಗಳು, ದೊಡ್ಡ ದೊಡ್ಡ ಅಧಿಕಾರಿಗಳು ಒಡಾಡಲು ದುಬಾರಿ ವಾಹನಗಳನ್ನು ಅವಲಂಬಿಸಿರುತ್ತಾರೆ...

ಬಳ್ಳಾರಿ: ಸಾಮಾನ್ಯವಾಗಿ ಪ್ರಭಾವಿ ವ್ಯಕ್ತಿಗಳು, ದೊಡ್ಡ ದೊಡ್ಡ ಅಧಿಕಾರಿಗಳು ಒಡಾಡಲು ದುಬಾರಿ ವಾಹನಗಳನ್ನು ಅವಲಂಬಿಸಿರುತ್ತಾರೆ. ಆದರೆ ಭಾರತದ ಬ್ರಿಟಿಷ್ ಹೈ ಕಮಿಷನರ್ ಸರ್ ಡೊಮಿನಿಕ್ ಅಸ್ಕ್ವಿತ್ ಮತ್ತು ಅವರ ಪತ್ನಿ ಲೇಡಿ ಅಸ್ಕ್ವಿತ್ ಬೆಂಗಳೂರಿನಿಂದ ಹೊಸಪೇಟೆಗೆ ರೈಲಿನಲ್ಲಿ ಸಾಮಾನ್ಯರಂತೆ ಸಂಚರಿಸಿದರು. ವಿಶ್ವ ಪರಂಪರೆ ತಾಣ ಹಂಪಿಗೆ ಎರಡು ದಿನಗಳ ಖಾಸಗಿ ಭೇಟಿಗಾಗಿ ದಂಪತಿ ಆಗಮಿಸಿದ್ದರು.

ರಾತ್ರಿ ಹಂಪಿ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣ ಮಾಡಿ ನಿನ್ನೆ ಬೆಳಗ್ಗೆ ಹಂಪಿಗೆ ಆಗಮಿಸಿದರು. ನಂತರ ವಿರೂಪಾಕ್ಷ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಹಂಪಿಯಲ್ಲಿ ಕೂಡ ಸಾಮಾನ್ಯ ಪ್ರವಾಸಿಗರಂತೆ ಸುತ್ತಾಡಿದರು. ಇವರಿಗೆ ದೇವಾಲಯದ ಆಡಳಿತ ವರ್ಗದವರು ಭವ್ಯ ಸ್ವಾಗತ ನೀಡಿದರು.

ದೇವಸ್ಥಾನವಿಡೀ ಸುತ್ತುಬಂದ ದಂಪತಿ ನಂತರ ಹಂಪಿಯ ಪ್ರಮುಖ ಸ್ಥಳಗಳಿಗೆ ಭೇಟಿ ನೀಡಿದರು. ಇಲ್ಲಿನ ಸ್ಮಾರಕಗಳನ್ನು ನೋಡಿ ಸಂತೋಷಪಟ್ಟರು.

ಹಂಪಿಯ ಶಿವನ ದೇವಾಲಯ, ಆನೆಯ ಮೂರ್ತಿ, ತಾವರೆ ಅರಮನೆ, ರಾಣಿ ಸ್ನಾನಗೃಹ ಇತ್ಯಾದಿ ಸ್ಮಾರಕಗಳಿಗೆ ಭೇಟಿ ಕೊಟ್ಟರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬರೂ ಜೀವಿತಾವಧಿಯಲ್ಲಿ ಹಂಪಿಗೆ ಭೇಟಿ ನೀಡಬೇಕು ಎಂದು ಹೇಳಿದರು.

ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ರಂಗರಾಜನ್ ಮಾತನಾಡಿ, ಬ್ರಿಟನ್ ರಾಯಭಾರಿ ಮತ್ತು ಅವರ ಪತ್ನಿಗೆ ತೀವ್ರ ಭದ್ರತೆ ನೀಡಲಾಗಿತ್ತು. ದಂಪತಿ ಖಾಸಗಿ ರೆಸಾರ್ಟ್ ನಲ್ಲಿ ವಾಸಿಸಲಿದ್ದು ನಾಳೆಯವರೆಗೆ ಹಂಪಿಯಲ್ಲಿ ಇರಲಿದ್ದಾರೆ. ವಿದ್ಯಾನಗರ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ವಿಮಾನದಲ್ಲಿ ತೆರಳಲಿದ್ದಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT