ಸಾಂದರ್ಭಿಕ ಚಿತ್ರ 
ರಾಜ್ಯ

ಸರ್ಕಾರದ 'ಹಾಸನ ನೀತಿ ' ವಿರುದ್ಧ ಕೋಲಾರ- ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಆಕ್ರೋಶ ಸ್ಪೋಟ

ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸರ್ಕಾರದ ಹಾಸನ ಕೇಂದ್ರಿತ ನಡೆಯ ವಿರುದ್ಧ ಉತ್ತರ ಕರ್ನಾಟಕ ಮಾತ್ರವಲ್ಲಾ, ದಕ್ಷಿಣ ಭಾಗದ ಜನರು ಕೂಡಾ ಅಸಮಾಧಾನಗೊಂಡಿದ್ದಾರೆ.

ಕೋಲಾರ :ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸರ್ಕಾರದ ಹಾಸನ ಕೇಂದ್ರಿತ  ನಡೆಯ ವಿರುದ್ಧ ಉತ್ತರ  ಕರ್ನಾಟಕ ಮಾತ್ರವಲ್ಲಾ, ದಕ್ಷಿಣ ಭಾಗದ ಜನರು ಕೂಡಾ ಅಸಮಾಧಾನಗೊಂಡಿದ್ದಾರೆ.

ರಾಜ್ಯ ಹೆದ್ದಾರಿ ಅಭಿವೃದ್ದಿ ಯೋಜನೆ -ಕೆ-ಶಿಫ್ ಕಚೇರಿಯನ್ನು ಬೆಳಗಾವಿಯಿಂದ ಹಾಸನಕ್ಕೆ ಸ್ಥಳಾಂತರ ಮಾಡಿದ್ದಕ್ಕೆ  ಮುಂಬೈ- ಕರ್ನಾಟಕ ಭಾಗದ ಜನರು ವಿನಾಯಿತಿ ನೀಡಿದ ನಂತರ ಈಗ  ಕೋಲಾರ- ಚಿಕ್ಕಬಳ್ಳಾಪುರ ಜಿಲ್ಲೆಯ ರೈತರು ಹಾಸನ ನೀತಿಯ ವಿರುದ್ಧ ಆಕ್ರೋಶ ಗೊಂಡಿದ್ದಾರೆ.

ಕೋಲಾರ -ಚಿಕ್ಕಬಳ್ಳಾಪುರ ಜಿಲ್ಲೆ ಸಹಕಾರ ಹಾಲು ಉತ್ಪಾದಕರ ಒಕ್ಕೂಟ - ಕೊಮುಲ್ ಪ್ರತಿವರ್ಷ  80 ಲಕ್ಷ ಲೀಟರ್ ಹಾಲನ್ನು ಉತ್ತರ ಹಾಗೂ ದಕ್ಷಿಣ ಸಶಸ್ತ್ರ ಪಡೆ ಸಿಬ್ಬಂದಿಗೆ  ಪೂರೈಸುತ್ತದೆ.  ಇದನ್ನು ಭಾರತೀಯ  ರಾಷ್ಟ್ರೀಯ ಸಹಕಾರ ಹಾಲು  ಒಕ್ಕೂಟ ಮೇಲ್ವಿಚಾರಣೆ ನಡೆಸುತ್ತದೆ.

 80 ಲಕ್ಷ ಲೀಟರ್ ಹಾಲನ್ನು ಕೋಲಾರ - ಚಿಕ್ಕಬಳ್ಳಾಪುರ  ಹಾಗೂ ಹಾಸನ ಡೈರಿ ನಡುವೆ ಸಮಾನವಾಗಿ ಹಂಚಿಕೆ ಮಾಡುವಂತೆ  ರಾಜ್ಯ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರು ಎನ್ ಸಿಡಿಎಫ್ ಐಗೆ  ಪತ್ರ ಬರೆದಿದೆ.  ಇದಕ್ಕೆಲ್ಲಾ ಲೋಕೋಪಯೋಗಿ ಸಚಿವ ಹೆಚ್. ಡಿ. ರೇವಣ್ಣ ಅವರೇ ಕಾರಣ ಎಂದು ಹಾಲು ಉತ್ಪಾದಕರು ಆರೋಪಿಸಿದ್ದಾರೆ.

ಸರ್ಕಾರದ ಇತ್ತೀಚಿನ ನಡೆಯಿಂದ  ಹಾಲು ಉತ್ಪಾದಕರಿಗೆ ವಾರ್ಷಿಕ 23 ಕೋಟಿ ರೂಪಾಯಿ ವ್ಯವಹಾರ ನಷ್ಟವಾಗುತ್ತಿದೆ ಎಂದು ಕೊಮುಲ್  ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.  ಉಳಿದ 40 ಲಕ್ಷ ಲೀಟರ್  ಹಾಲನ್ನು ಹೇಗೆ  ಪೌಂಡರ್ ಆಗಿ ಹೇಗೆ ಪರಿವರ್ತಿಸುವುದು ಅನ್ನೋದು ಮತ್ತೊಂದು ಪ್ರಮುಖ ಸಮಸ್ಯೆ. ಇದಕ್ಕಾಗಿ 8 ರಿಂದ 9 ಲೀಟರ್ ಬೇಕಾಗುತ್ತದೆ. ಅಂದಾಜು 36 ಕೋಟಿ ನಷ್ಟವಾಗುತ್ತದೆ ಎಂದು ಅವರು ಹೇಳಿದ್ದಾರೆ.

ಈ ಮಧ್ಯೆ ರೇವಣ್ಣ ಅವರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಸರ್ಕಾರದ ಈ ನಿರ್ಧಾರವನ್ನು ಹಿಂತೆಗೆದುಕೊಳ್ಳದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಟೆಟ್ರಾ ಪ್ಯಾಕ್ ಘಟಕ ಕೋಲಾರದಲ್ಲಿ 1991ರಲ್ಲಿಯೇ ಸ್ಥಾಪನೆಗೊಂಡಿದ್ದರೆ ಕಳೆದ ಎರಡು ವರ್ಷಗಳ ಹಿಂದಷ್ಟೇ ಈ ಘಟಕ ಹಾಸನದಲೂ  ಆರಂಭಗೊಂಡಿದೆ. ಕಳೆದ 10 ವರ್ಷಗಳಿಂದ ಉತ್ತರ ಹಾಗೂ ಪಶ್ಚಿಮ ಕಮಾಂಡ್  ಕರೆಯಲ್ಪಡುತ್ತಿದ್ದ ಟೆಂಡರ್ ನಲ್ಲಿ ಕೆಎಂಫ್ ಪಾಲ್ಗೊಳ್ಳುತಿತ್ತು ಎಂದು ಕೊಮುಲ್  ಮತ್ತೊಬ್ಬ ಹಿರಿಯ ಅಧಿಕಾರಿ ಹೇಳಿದ್ದಾರೆ.

ಈ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ರೇವಣ್ಣ ಹಾಲು ಒಕ್ಕೂಟಗಳ ಅಭಿವೃದ್ದಿಗೆ ಮೆರೆಯಲಾಗದಂತ ಕೂಡುಗೆ ನೀಡಿದ್ದಾರೆ. ಪ್ರತಿಪಕ್ಷ ಬಿಜೆಪಿ  ಪ್ರಚಾರಕ್ಕಾಗಿ ಕೆಲ ವಿವಾದ ಸೃಷ್ಟಿಸುತ್ತಿದೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್​ಗೆ 61 ರನ್ ಗಳ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ್ದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT