ಸಾಂದರ್ಭಿಕ ಚಿತ್ರ 
ರಾಜ್ಯ

ಪೊಲೀಸರ ಮೇಲೆ ಹಲ್ಲೆ: ಕೆಪಿಎಲ್ ತಂಡದ ಮಾಲೀಕನ ಬಂಧನ

: ಕ್ಲಬ್ ನಲ್ಲಿ ಹೆಚ್ಚಿನ ಶಬ್ದದೊಂದಿಗೆ ಮ್ಯೂಸಿಕ್ ಹಾಕಿದ್ದನ್ನು ಪ್ರಶ್ನಿಸಿದ ಪೊಲೀಸರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಎಲ್ ಟಿ-20 ತಂಡq

ಬೆಂಗಳೂರು: ಕ್ಲಬ್ ನಲ್ಲಿ ಹೆಚ್ಚಿನ ಶಬ್ದದೊಂದಿಗೆ  ಮ್ಯೂಸಿಕ್ ಹಾಕಿದ್ದನ್ನು ಪ್ರಶ್ನಿಸಿದ ಪೊಲೀಸರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಕೆಪಿಎಲ್ ಟಿ-20 ತಂಡದ ಮಾಲೀಕನನ್ನು ಎಚ್ಎಎಲ್ ಪೊಲೀಸರು ಬಂಧಿಸಿದ್ದಾರೆ.
ಬಳ್ಳಾರಿ ಟಸ್ಕರ್ ಮಾಲೀಕ  ಅರವಿಂದ್  ವೆಂಕಟೇಶ್ ರೆಡ್ಡಿ  ಪುಲಕೇಶಿ ನಗರ ನಿವಾಸಿಯಾಗಿದ್ದು,  ಕುಂಡಲಹಳ್ಳಿಯಲ್ಲಿರುವ ಇ ಜೋನ್ ಕ್ಲಬ್ ನಲ್ಲಿ ಪಾರ್ಟಿ ಆಯೋಜಿಸಲಾಗಿತ್ತು. ಮಧ್ಯರಾತ್ರಿ 1 ಗಂಟೆಯಾದರೂ ಕ್ಲಬ್ ನಲ್ಲಿ ಜೋರಾಗಿ  ಮ್ಯೂಸಿಕ್ ಹಾಕಲಾಗಿತ್ತು.
ಇದರಿಂದಾಗಿ ಅಕ್ಕಪಕ್ಕದ ನಿವಾಸಿಗಳು ಹೊಯ್ಸಳ ಪೊಲೀಸರಿಗೆ ಮಾಹಿತಿ ನೀಡಿದ್ದರು. ಮುಖ್ಯಪೇದೆ ಆನಂದ್ ಮತ್ತು ಪೇದೆ ರಾಜುಗೌಡ ಕ್ಲಬ್ ಗೆ ಆಗಮಿಸಿ ಮ್ಯೂಸಿಕ್ ನಿಲ್ಲಿಸುವಂತೆ ಹೇಳಿದ್ದಾರೆ.
ಆದರೆ ಈ ವೇಳೆ ಪೊಲೀಸರಿಗೆ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ ಅವರ ಮೇಲೆ ಹಲ್ಲೆ ನಡೆಸಿದ್ದಾನೆ,  ಪೊಲೀಸರು ಹಿರಿಯ ಅಧಿಕಾರಿಳಿಗೆ ಮಾಹಿತಿ ನೀಡಿದ್ದಾರೆ,  ಹಿರಿಯ ಪೊಲೀಸ್ ಆಧಿಕಾರಿಗಳು ರೆಡ್ಡಿ ವಿರುದ್ಧ ಕೇಸು ದಾಖಲಿಸಿದ್ದಾರೆ, ಸರ್ಕಾರಿ ಅದಿಕಾರಿಗಳಿಗೆ ಕರ್ತವ್ಯ ನಿರ್ವಹಿಸಲು ಅಡ್ಡಿ ಹಾಗೂ ಹಲ್ಲೆ ಪ್ರಕರಣ ಸಂಬಂಧ ದೂರು ದಾಖಲಿಸಿದ್ದಾರೆ,  ಆತನನ್ನು  ಆಗಸ್ಟ್ 25 ವರಗೆ ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT