ರಾಜ್ಯ

ಮೈಸೂರು-ಬೆಂಗಳೂರು ರಸ್ತೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿ ನಾಲ್ವರ ಪತ್ತೆ, ಆಸ್ಪತ್ರೆಗೆ ದಾಖಲು

Sumana Upadhyaya

ಬೆಂಗಳೂರು: ಮೈಸೂರು-ಬೆಂಗಳೂರು ಮಾರ್ಗವಾಗಿ ಶ್ರೀರಂಗಪಟ್ಟಣದ ರಾಗಿಮುದ್ದನಹಳ್ಳಿ ಗೇಟ್ ಹೊರಗೆ ನಿಲುಗಡೆ ಮಾಡಿದ್ದ ಮಾರುತಿ ವ್ಯಾನ್ ಒಳಗೆ ಒಂದೇ ಕುಟುಂಬದ ನಾಲ್ವರು ಗಂಭೀರ ಸ್ಥಿತಿಯಲ್ಲಿರುವುದು ಪತ್ತೆಯಾಗಿದೆ. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದರು ಎಂದು ಸಂಶಯ ವ್ಯಕ್ತಪಡಿಸಲಾಗಿದೆ.

ಅವರನ್ನು ಮರಿಗೌಡ ಅವರ ಪತ್ನಿ ರಜನಿ ಮತ್ತು ಮಕ್ಕಳಾದ ಚಂದ್ರು ಮತ್ತು ಚೇತನ್ ಎಂದು ಗುರುತಿಸಲಾಗಿದೆ. ಇವರು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ದೊಡ್ಡಬ್ಯಾಡರಹಳ್ಳಿಯವರಾಗಿದ್ದಾರೆ. ನಂತರ ಅವರನ್ನು ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾರಿಹೋಕರು ದಾಖಲಿಸಿದರು. ಇವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

SCROLL FOR NEXT