2017ರ ಏರ್ ಇಂಡಿಯಾ ಶೋದ ಫೋಟೋ 
ರಾಜ್ಯ

ಏರ್ ಶೋ ಬೆಂಗಳೂರು ಕೈತಪ್ಪಿ ಹೋದರೆ ಹೊಟೇಲ್ ಉದ್ಯಮಕ್ಕೆ 500 ಕೋಟಿ ರೂ.ಗಳಷ್ಟು ನಷ್ಟ

ಭಾರತೀಯ ವೈಮಾನಿಕ ಪ್ರದರ್ಶನ ಈ ಬಾರಿ ಬೆಂಗಳೂರು ನಗರದ ಕೈತಪ್ಪಿ ಹೋಗುತ್ತಿರುವ ವಿಷಯ ಸದ್ಯ...

ಬೆಂಗಳೂರು: ಭಾರತೀಯ ವೈಮಾನಿಕ ಪ್ರದರ್ಶನ ಈ ಬಾರಿ ಬೆಂಗಳೂರು ನಗರದ ಕೈತಪ್ಪಿ ಹೋಗುತ್ತಿರುವ ವಿಷಯ ಸದ್ಯ ಬಿಸಿಬಿಸಿ ಚರ್ಚೆಯಾಗುತ್ತಿದ್ದು ಕೇಂದ್ರ ಸರ್ಕಾರ ಎಲ್ಲಿ ನಡೆಸುವುದು ಎಂದು ಘೋಷಣೆ ಮಾಡಲು ವಿಳಂಬ ತೋರುತ್ತಿದೆ. ಏರೋ ಇಂಡಿಯಾ ಶೋ ಬೆಂಗಳೂರು ಕೈತಪ್ಪಿ ಹೋದರೆ ಹೊಟೇಲ್ ಉದ್ಯಮದ ಮೇಲೆ ತೀವ್ರ ಹೊಡೆತ ಬೀಳಲಿದ್ದು ಸುಮಾರು 500 ಕೋಟಿ ರೂಪಾಯಿ ನಷ್ಟವಾಗಲಿದೆ ಎಂದು ಕೈಗಾರಿಕಾ ತಜ್ಞರು ಹೇಳುತ್ತಾರೆ.

ವಿದೇಶಿ ಕಂಪೆನಿಗಳು ಮತ್ತು ಉನ್ನತ ಕಂಪೆನಿಗಳ ಅಧಿಕಾರಿಗಳು, ಅಂತರಿಕ್ಷ ಕೈಗಾರಿಕೆಗಳ ಉದ್ಯಮಿಗಳು ಏರ್ ಶೋದಲ್ಲಿ ಭಾಗವಹಿಸುವುದರಿಂದ ಉದ್ಯಮಿಗಳು ಹೊಟೇಲ್ ನಲ್ಲಿ ಉಳಿದುಕೊಂಡು ವ್ಯಾಪಾರ ಹೆಚ್ಚಾಗುತ್ತದೆ. ವೈಮಾನಿಕ ಪ್ರದರ್ಶನಕ್ಕೆ ಬರುವ  ಉದ್ಯಮಿಗಳು ಕೆಲವು ತಿಂಗಳುಗಳ ಹಿಂದೆಯೇ ಹೊಟೇಲ್ ಗಳನ್ನು ಬುಕ್ಕಿಂಗ್ ಮಾಡುತ್ತಾರೆ. ಆದರೆ ಈ ಬಾರಿ ಎಲ್ಲಿ ನಡೆಯುತ್ತದೆ ಎಂಬ ಗೊಂದಲವಿರುವುದರಿಂದ ಕಂಪೆನಿಗಳ ಅಧಿಕಾರಿಗಳು, ಉದ್ಯಮಿಗಳು ಇನ್ನೂ ಬುಕ್ಕಿಂಗ್ ಮಾಡಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ನಗರದ ಹೊಟೇಲ್ ನ ಪ್ರಧಾನ ವ್ಯವಸ್ಥಾಪಕರು ಇದ್ದಾರೆ.

ಸಾರಿಗೆ ಉದ್ಯಮದಲ್ಲಿ ಕೂಡ ಇಂತಹದ್ದೇ ಪರಿಸ್ಥಿತಿಯಿದೆ. ವೈಮಾನಿಕ ಪ್ರದರ್ಶನಕ್ಕೆ ಮುನ್ನ ದುಬಾರಿ ಕಾರುಗಳನ್ನು ಕಾಯ್ದಿರಿಸಲು ಮನವಿಗಳು ಬರುತ್ತಿರುತ್ತದೆ. ಕೊನೆ ಕ್ಷಣದಲ್ಲಿ ರದ್ದುಪಡಿಸಿದರೆ ಉನ್ನತ ಅಧಿಕಾರಿಗಳು ಬರುವಾಗ ಮುಜುಗರವಾಗುತ್ತದೆ ಎನ್ನುತ್ತಾರೆ ಬೆಂಗಳೂರು ಪ್ರವಾಸಿಗರ ಟ್ಯಾಕ್ಸಿ ನಿರ್ವಾಹಕರ ಸಂಘದ ಅಧ್ಯಕ್ಷ ಕೆ ರಾಧಾಕೃಷ್ಣ ಹೊಳ್ಳ.

ವೈಮಾನಿಕ ಪ್ರದರ್ಶನವನ್ನು ಬೆಂಗಳೂರಿನಲ್ಲಿಯೇ ನಡೆಸಬೇಕೆಂದು ಅವರ ಸಂಘಟನೆ ಇತ್ತೀಚೆಗೆ ರಕ್ಷಣಾ ಸಚಿವರು ಮತ್ತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿತ್ತು.

ಈ ಬಗ್ಗೆ ನಿನ್ನೆ ಪ್ರತಿಕ್ರಿಯೆ ನೀಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ಎಸ್ ಯಡಿಯೂರಪ್ಪ, ಬೆಂಗಳೂರು ವೈಮಾನಿಕ ಪ್ರದರ್ಶನವನ್ನು ಉತ್ತರ ಪ್ರದೇಶದ ಲಕ್ನೊಗೆ ಸ್ಥಳಾಂತರಿಸುವುದಿಲ್ಲ. ವೈಮಾನಿಕ ಪ್ರದರ್ಶನವನ್ನು ಬೆಂಗಳೂರಿನಿಂದ ವರ್ಗಾಯಿಸಬಾರದೆಂದು ಬಿಜೆಪಿ ಶಾಸಕರು ಮತ್ತು ಸಂಸದರು ಮನವಿ ಮಾಡಿಕೊಂಡಿದ್ದೇವೆ, ನಿರ್ಮಲಾ ಸೀತಾರಾಮನ್ ಅವರು ನಮಗೆ ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT