ಜಖಂಗೊಂಡ ಕಾರು 
ರಾಜ್ಯ

ಯುವಕನ ಮೇಲೆ ಕಾರು ಓಡಿಸಿದ ಕೆಎಎಸ್ ಅಧಿಕಾರಿ ಮೇಲೆ ಹಲ್ಲೆ, ಕಾರು ಜಖಂ

ವಾಹನವನ್ನು ಯುವಕರ ಮೇಲೆ ಹತ್ತಿಸಿಕೊಂಡು ಹೋಗಿದ್ದಕ್ಕೆ ಜನರ ಗುಂಪೊಂದು ಹಿರಿಯ ಕೆಎಎಸ್ ...

ಬಳ್ಳಾರಿ: ವಾಹನವನ್ನು ಯುವಕರ ಮೇಲೆ ಹತ್ತಿಸಿಕೊಂಡು ಹೋಗಿದ್ದಕ್ಕೆ ಜನರ ಗುಂಪೊಂದು ಹಿರಿಯ ಕೆಎಎಸ್ ಅಧಿಕಾರಿಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಹರಗಿನದೋಳಿ ಗ್ರಾಮಕ್ಕೆ ಬೆಳೆಗೆ ನೀರೊದಗಿಸಬೇಕೆಂದು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಇದಕ್ಕೂ ಮುನ್ನ ಇದೇ ಕೆಎಎಸ್ ಅಧಿಕಾರಿಯಿಂದ ನಡೆದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ನಾಲ್ವರಿಗೆ ಗಾಯಗಳಾಗಿದ್ದವು. 
ಬಳ್ಳಾರಿ ಜಿಲ್ಲಾ ಪಂಚಾಯತ್ ಅಧಿಕಾರಿ ಕಚೇರಿ ಮುಂದೆ ಜಿಲ್ಲಾ ಖಜಾನೆ ಅಧಿಕಾರಿ ಎಂ ಎ ಝುಬೈರ್, ಯುವಕನೊಬ್ಬನ ಮೇಲೆ ಕಾರು ಹರಿಸಿದ್ದರು. ಆತ ತನ್ನ ಗ್ರಾಮಕ್ಕೆ ಹಿಂತಿರುಗಲು ಟ್ರಾಕ್ಟರ್ ಹತ್ತುತ್ತಿದ್ದ. ಕಾರು ಚಾಲಕ ಜುಬೈರ್ ಕೆಲ ತಿಂಗಳ ಹಿಂದೆ ಸೇವೆಯಿಂದ ಅಮಾನತುಗೊಂಡಿದ್ದರು ಎಂದು ಕೌಲ್ ಬಜಾರ್ ಪೊಲೀಸರು ತಿಳಿಸಿದ್ದಾರೆ.
ಅಪಘಾತದಿಂದ ಕ್ರೋಧಗೊಂಡ ಗುಂಪು ಜುಬೈರ್ ನನ್ನು ಅವಾಚ್ಯ ಮಾತುಗಳಿಂದ ಬೈದುದ್ದಲ್ಲದೆ ಚೆನ್ನಾಗಿ ಥಳಿಸಿದರು. ಜುಬೈರ್ ನನ್ನು ರಕ್ಷಿಸಲು ಹೋದವರನ್ನು ಕೂಡ ಕ್ರೋಧಗೊಂಡ ಗುಂಪಿನ ಸದಸ್ಯರು ಹಲ್ಲೆ ಮಾಡಿದರು. ಜುಬೈರ್ ಅವರ ಕಾರು ಸಂಪೂರ್ಣವಾಗಿ ಹಾನಿಯಾಗಿದೆ. ತೀವ್ರ ಗಾಯಗೊಂಡ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಇದುವರೆಗೆ ಯಾರೂ ಪ್ರಕರಣ ದಾಖಲಿಸಿಲ್ಲ.
ಆರು ತಿಂಗಳ ಹಿಂದೆ ಕಲಬುರಗಿಯ ಜುಬೈರ್ ಕ್ರೀಡಾ ಇಲಾಖೆಯಲ್ಲಿದ್ದಾಗ ಹಣವನ್ನು ದುರುಪಯೋಗಪಡಿಸಿದ ಆರೋಪದ ಮೇಲೆ ಸೇವೆಯಿಂದ ವಜಾಗೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; ಆ ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಖಡಕ್ ವಾರ್ನಿಂಗ್ ನೀಡಿದ ಇರಾನ್ ಸಂಸತ್ ಸ್ಪೀಕರ್!

ಪಶ್ಚಿಮ ಬಂಗಾಳ: ಇಬ್ಬರಿಗೆ ನಿಪಾ ವೈರಸ್ ಪಾಸಿಟಿವ್, ನರ್ಸ್‌ಗಳ ಸ್ಥಿತಿ ಗಂಭೀರ

ಲೂಟಿಕೋರನ ಭಯವೇ? ಖರ್ಗೆಯವರೇ, ಭಿಕ್ಷೆ ಬೇಡುವ 'ದಯನೀಯ ಸ್ಥಿತಿ' ಬರಬಾರದಿತ್ತು! ಜೆಡಿಎಸ್ ಟಾಂಗ್

SCROLL FOR NEXT