ಸಂಗ್ರಹ ಚಿತ್ರ 
ರಾಜ್ಯ

ಮುಂದುವರೆದ ಮುಂಗಾರು ಅಬ್ಬರ: ಕರ್ನಾಟಕದ 14 ಜಿಲ್ಲೆಗಳಲ್ಲಿ ಹೈ ಅಲರ್ಟ್

ದಕ್ಷಿಣ ಭಾರತದಲ್ಲಿ ಮುಂಗಾರು ಅಬ್ಬರ ಮುಂದುವರೆದಿದ್ದು, ಕೇರಳದಲ್ಲಿ ಅಬ್ಬರಿಸುತ್ತಿರುವ ಮುಂಗಾರು ಮಳೆ ಕರ್ನಾಟಕದ ಕರಾವಳಿಯಲ್ಲೂ ಅಬ್ಬರಿಸುತ್ತಿದೆ.

ಬೆಂಗಳೂರು: ದಕ್ಷಿಣ ಭಾರತದಲ್ಲಿ ಮುಂಗಾರು ಅಬ್ಬರ ಮುಂದುವರೆದಿದ್ದು, ಕೇರಳದಲ್ಲಿ ಅಬ್ಬರಿಸುತ್ತಿರುವ ಮುಂಗಾರು ಮಳೆ ಕರ್ನಾಟಕದ ಕರಾವಳಿಯಲ್ಲೂ ಅಬ್ಬರಿಸುತ್ತಿದೆ.
ಪರಿಣಾಮ ಕರ್ನಾಟಕದ ನದಿಗಳಲ್ಲಿನ ನೀರಿನ ಪ್ರಮಾಣ ಹೆಚ್ಚಾಗಿದ್ದು, ಪ್ರಮುಖವಾಗಿ ಕಾವೇರಿ ನದಿಯಲ್ಲಿ ಅಪಾರ ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ಕೊಡಗು, ಭಾಗಮಂಡಲದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕಾವೇರಿ ಉಕ್ಕಿ  ಹರಿಯುತ್ತಿದ್ದು, ಶಿವಮೊಗ್ಗ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ನದಿ ಉಕ್ಕಿ ಹರಿಯುತ್ತಿದೆ. 
ಕರ್ನಾಟಕದಲ್ಲಿ ಸುರಿಯುತ್ತಿರುವ ಭಾರಿ ಮಳೆ ಸುರಿಯುತ್ತಿರುವುದರಿಂದ ರಾಜ್ಯದ 14 ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ, ಕೊಡಗು, ಮೈಸೂರು, ಮಂಡ್ಯ, ದಾವಣಗೆರೆ, ಚಾಮರಾಜನಗರ, ಬೆಳಗಾವಿ, ಹಾವೇರಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಪ್ರಮುಖವಾಗಿ ಮಂಗಳೂರು, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಇಲ್ಲಿನ ಜನಜೀವನ ತೀವ್ರ ಅಸ್ತವ್ಯಸ್ಥಗೊಂಡಿದೆ. ರೈಲು ರಸ್ತೆ ಸಂಚಾರದಲ್ಲಿ ವ್ಯತ್ಯಯಲಾಗಿದ್ದು, ಮಂಗಳೂರು ವಿಮಾನ ನಿಲ್ದಾಣದಲ್ಲಿ ಹಲವು ವಿಮಾನಗಳ ಮಾರ್ಗಗಳನ್ನು ಬದಲಿಸಲಾಗಿದೆ.
ಇನ್ನು ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 237 ಕೋಟಿ ಹಣವನ್ನು ಮೀಸಲಿಟ್ಟಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT