ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯ 
ರಾಜ್ಯ

ವಿಶ್ವೇಶ್ವರಯ್ಯ ತಾಂತ್ರಿಕ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಕಡ್ಡಾಯ

ಎಂಜಿನಿಯರಿಂಗ್ ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಕಲಿಸುವ ಉದ್ದೇಶದಿಂದ ...

ಬೆಂಗಳೂರು: ಎಂಜಿನಿಯರಿಂಗ್ ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಕಲಿಸುವ ಉದ್ದೇಶದಿಂದ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ ಬೆಳಗಾವಿ ವಿದ್ಯಾರ್ಥಿಗಳನ್ನು ಎರಡು ವಿಭಾಗಗಳನ್ನಾಗಿ ಮಾಡಿದೆ. ಹತ್ತನೇ ತರಗತಿಯವರೆಗೆ ಕನ್ನಡ ಭಾಷೆ ಕಲಿತವರು ಅಥವಾ ಕನ್ನಡ ಸಾಹಿತ್ಯ ಪರಿಷತ್ ನಡೆಸುವ ಪರೀಕ್ಷೆ ತೇರ್ಗಡೆ ಮಾಡಿಕೊಂಡವರು ಕನ್ನಡ ಮನಸು ವಿಭಾಗದಲ್ಲಿ  ಮತ್ತು ಕನ್ನಡ ಭಾಷೆ ಓದಲು, ಬರೆಯಲು ಅಥವಾ ಮಾತನಾಡಲು ಬಾರದವರು ಕನ್ನಡ ಕಲಿ ಭಾಗದಲ್ಲಿ ಇರುತ್ತಾರೆ.

ಕನ್ನಡ ಬೋಧನೆ ಯೋಜನೆಯನ್ನು ಕಡ್ಡಾಯವಾಗಿ ಜಾರಿಗೆ ತರುವ ಸಂಬಂಧ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ ಅಧಿಕೃತ ಸುತ್ತೋಲೆಯನ್ನು ಹೊರಡಿಸಿದೆ. ಎಲ್ಲಾ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಅನುಸರಿಸುವಂತೆ ಪ್ರಾಂಶುಪಾಲರಿಗೆ ಸೂಚಿಸಲಾಗಿದೆ.

ಈಗಾಗಲೇ ಕನ್ನಡ ಭಾಷೆ ತಿಳಿದಿರುವರಿಗೆ ಕಲಿಸುವ ಅಗತ್ಯವಿಲ್ಲ, ಹಾಗಾಗಿ ನಾವು ವಿಭಾಗ ಮಾಡಿದ್ದೇವೆ ಎಂದು ವಿದ್ಯಾಲಯದ ರಿಜಿಸ್ಟ್ರಾರ್ ಪ್ರೊ ಜಗನ್ನಾಥ್ ರೆಡ್ಡಿ.ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಶಿಫಾರಸಿನ ಮೇರೆಗೆ ಕನ್ನಡ ಭಾಷೆಯ ಕಡ್ಡಾಯವನ್ನು ಜಾರಿಗೆ ತರಲಾಗಿದೆ. ವಿಶ್ವವಿದ್ಯಾಲಯ ಮಟ್ಟದಲ್ಲಿ ಮಾನವೀಯ ಮತ್ತು ವಿಜ್ಞಾನ ಮಂಡಳಿ ಸಿಲೆಬಸ್ ತಯಾರಿಸಿದೆ. ಕನ್ನಡ ಭಾಷೆ ಬೋಧಕರನ್ನು ನೇಮಕ ಮಾಡಲು ಸಾಧ್ಯವಾಗದಿರುವುದರಿಂದ ಅತಿಥಿ ಉಪನ್ಯಾಸಕರನ್ನು ನೇಮಿಸಲಿದೆ.

ವಾರದಲ್ಲಿ ಎರಡು ಗಂಟೆಗಳ ಕಾಲ 16 ವಾರಗಳವರೆಗೆ ಕನ್ನಡ ಭಾಷೆ ಕಲಿಸುವ ತರಗತಿ ನಡೆಸಲಾಗುತ್ತದೆ ಎಂದು ರಿಜಿಸ್ಟ್ರಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT