ಡಿ. ಕೆ. ಶಿವಕುಮಾರ್ 
ರಾಜ್ಯ

ಮಹದಾಯಿ ನ್ಯಾಯಾಧೀಕರಣ ತೀರ್ಪು ವಿರುದ್ಧ ಸುಪ್ರೀಂಕೋರ್ಟ್ ಗೆ ಮೇಲ್ಮನವಿ - ಡಿಕೆ ಶಿವಕುಮಾರ್

ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ನ್ಯಾಯಾಧೀಕರಣ ನೀಡುವ ತೀರ್ಪಿನ ವಿರುದ್ಧ ರಾಜ್ಯಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಿದೆ ಎಂದು ಜಲಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು:ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ನ್ಯಾಯಾಧೀಕರಣ ನೀಡುವ ತೀರ್ಪಿನ ವಿರುದ್ಧ  ರಾಜ್ಯಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಿದೆ ಎಂದು ಜಲಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.

ಉತ್ತರ ಕರ್ನಾಟಕ ಭಾಗದ ಜನರ ಅನುಕೂಲಕ್ಕಾಗಿ 36.55 ಟಿಎಂಸಿ ನೀರು ಹಂಚಿಕೆ ಮಾಡುವಂತೆ ಕರ್ನಾಟಕ ಸರ್ಕಾರದಿಂದ ಬೇಡಿಕೆ ಹಾಕಲಾಗಿತ್ತು. ಆದರೆ,  ನ್ಯಾಯಾಧೀಕರಣ 13.42 ಟಿಎಂಸಿ ನೀರನ್ನು ಮಾತ್ರ ಹಂಚಿಕೆ ಮಾಡಿದೆ. ಆದ್ದರಿಂದ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಸಂಬಂಧ ಕಾನೂನು ತಜ್ಞರ ಜೊತೆಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

 ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಆಗಸ್ಟ್ 14 ರಂದು ತೀರ್ಪು ನೀಡಿದ  ನ್ಯಾಯಾಧೀಕರಣ ಕರ್ನಾಟಕಕ್ಕೆ  13.42 ಟಿಎಂಸಿ ನೀರು ಹಂಚಿಕೆ ಮಾಡಿತ್ತು. ಇದರ ವಿರುದ್ಧ ಗೋವಾ ಸರ್ಕಾರ ಕೂಡಾ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದೆ.

ಕೆಆರ್ ಎಸ್ , ಕಬಿನಿ, ತುಂಗಭದ್ರಾ ಜಲಾಶಯಗಳ ನೀರಿನ ಒಳಹರಿವು ಹೆಚ್ಚಳದಿಂದ ಅಲ್ಪಪ್ರಮಾಣದ ಹಾನಿಯಾಗಿದ್ದು, ಕಾಲುವೆ ದುರಸ್ಥಿಗೊಳಿಸಿ ಕೆರೆಗಳನ್ನು ಭರ್ತಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಡಿ ಕೆ ಶಿವಕುಮಾರ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಡಗುಗಳ ಮೇಲೆ ಇರಾನ್ ದಾಳಿ: 'ಕದನ ವಿರಾಮ ಉಲ್ಲಂಘನೆ ಮೂರ್ಖತನ-ಟ್ರಂಪ್ ಕೆಂಡಾಮಂಡಲ!

Bidadi Township Project: ಸಿಎಂ ಡಿಕೆ ಶಿವಕುಮಾರ್ ಗಾಗಿ ಭೈರಮಂಗಲದಲ್ಲಿ ನಾಳೆ ಸಂಜೆಯವರೆಗೂ ಕಾಯುವೆ- ಕುಮಾರಸ್ವಾಮಿ

Op Sindoor: ವರ್ಷದ ಬಳಿಕ ಮಹತ್ವದ ಮಾಹಿತಿ ಬಹಿರಂಗಪಡಿಸಿದ ಕೇಂದ್ರ ಸರ್ಕಾರ, ಆರು ಹುತಾತ್ಮ ಯೋಧರ ಹೆಸರು ಪ್ರಕಟ!

ದೆಹಲಿಗೆ ತಮಿಳುನಾಡು ವಿಶೇಷ ಪ್ರತಿನಿಧಿಯಾಗಿ ಜನ ನಾಯಗನ್ ನಿರ್ಮಾಪಕನ ನೇಮಕ!

ಮುಂದಿನ ಚುನಾವಣೆಯಲ್ಲಿ ನೀನು ಸೋತರೆ HDK ಮನೆಯ ವಾಚ್ ಮೆನ್ ಆಗ್ತೀಯಾ? ಪ್ರದೀಪ್ ಈಶ್ವರ್ ಗೆ JDS ಶಾಸಕನ ಸವಾಲು