ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಒಂಟಿ ವೃದ್ಧರ ಮನೆಯನ್ನೇ ಗುರಿ ಮಾಡುತ್ತಿದ್ದ ದರೋಡೆಕೋರರ ಬಂಧನ

ನಗರದಲ್ಲಿ ಏಕಾಂಗಿಯಾಗಿ ನೆಲೆಸಿರುವ ವೃದ್ದರ ಮನೆಗಳನ್ನೇ ಗುರಿ ಮಾಡಿಕೊಂಡು ದರೋಡೆ ನಡೆಸುತ್ತಿದ್ದ ಗೌರಿ ಬಿದನೂರು ಗ್ಯಾಂಗ್'ನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧನಕ್ಕೊಪಡಿಸಿದ್ದಾರೆ...

ಬೆಂಗಳೂರು: ನಗರದಲ್ಲಿ ಏಕಾಂಗಿಯಾಗಿ ನೆಲೆಸಿರುವ ವೃದ್ದರ ಮನೆಗಳನ್ನೇ ಗುರಿ ಮಾಡಿಕೊಂಡು ದರೋಡೆ ನಡೆಸುತ್ತಿದ್ದ ಗೌರಿ ಬಿದನೂರು ಗ್ಯಾಂಗ್'ನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧನಕ್ಕೊಪಡಿಸಿದ್ದಾರೆ. 
ಗೌರಿಬಿದನೂರು ತಾಲೂಕಿನ ಪಿ.ನಾಗೇನಹಳ್ಳಿ ಗ್ರಾಮದ ಎನ್.ವೈ. ನಾಗರಾಜ್, ರವಿ ಕುಮಾರ್, ಗಂಗಾಧರ್, ಗಂಗಾರಾಜು ಹಾಗೂ ಕೊರಟೆಗೆ ತಾಲೂಕಿನ ಬಸವನಹಳ್ಳಿಯ ಬಸರವಾಜ್ ಬಂಧಿತ ದರೋಡೆಕೋರರಾಗಿದ್ದಾರೆ. 
ಆರೋಪಿಗಳಿಂದ ಪೊಲೀಸರು ರೂ.25 ಲಕ್ಷ ಮೊಲ್ಯದ 750 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ. 
ಇತ್ತೀಚೆಗಷ್ಟೇ ದೇಶಬಂಧು ನಗರದಲ್ಲಿ 85 ವರ್ಷದ ಇಲಾ ಚಂದ್ರಶೇಖರ್ ಅವರ ಮನೆಗೆ ನುಗ್ಗಿದ್ದ ಈ ಗ್ಯಾಂಗ್ ದರೋಡೆ ನಡೆಸಿತ್ತು. ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು, ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಹಾಗೂ ಮೊಬೈಲ್ ಕರೆಗಳ ಮಾಹಿತಿ ಆಧರಿಸಿ ದರೋಡೆಕೋರರನ್ನು ಬಂಧನಕ್ಕೊಳಪಡಿಸಿದ್ದಾರೆ. 
ದರೋಡೆ ನಡೆಸುವ ಸಲುವಾಗಿಯೇ ಈ ಗ್ಯಾಂಗ್ ನಗರಕ್ಕೆ ಬರುತ್ತಿತ್ತು. ಹಗಲು ಹೊತ್ತಿನಲ್ಲಿ ವಸತಿ ಪ್ರದೇಶಗಳಲ್ಲಿ ಸಂಚರಿಸಿ ವೃದ್ದರ ಮನೆಗಳ ಕುರಿತು ಮಾಹಿತಿ ಕಲೆ ಹಾಕುತ್ತಿದ್ದರು. ಬಳಿಕ ಪೂರ್ವ ನಿಗದಿತ ಮನೆಗಳಿಗೆ ರಾತ್ರಿ ವೇಳೆ ನುಗ್ಗುತ್ತಿದ್ದ ಅವರು, ಮನೆಯಲ್ಲಿ ವೃದ್ಧರಿಗೆ ಜೀವ ಬೆದರಿಕೆ ಹಾಕಿ ನಗ-ನಾಣ್ಯ ದೋಚಿ ಪರಾರಿಯಾಗುತ್ತಿದ್ದರು. 
ಇದೇ ರೀತಿಯಲ್ಲಿಯೇ ಕೆಲ ದಿನಗಳ ಹಿಂದಷ್ಟೇ ವಿದ್ಯಾರಣ್ಯಪುರ ದೇಶಬಂಧು ನಗರದಲ್ಲಿಯೂ 85 ವರ್ಷದ ಇಲಾ ಚಂದ್ರಶೇಖರ್ ಹಾಗೂ ನ್ಯಾಯಾಂಗ ಬಡಾವಣೆಯಲ್ಲಿ ಮತ್ತೊಂದು ಮನೆಯಲ್ಲಿ ದರೋಡೆ ಎಸಗಿದ್ದರು. ಅಲ್ಲದೆ, ಈ ತಂಡವು ಹೆಚ್ಚಾಗಿ ನಗರದ ಹೊರವಲಯದ ಮನೆಗಳನ್ನೇ ಹೆಚ್ಚು ಗುರಿ ಮಾಡಿಕೊಳ್ಳುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ. 
ಮನೆಯಲ್ಲಿ ನಾನು ಒಬ್ಬನೇ ಇದ್ದೆ. ಈ ವೇಳೆ ಮನೆಗೆ ನುಗ್ಗಿದ ಗುಂಪೊಂದು ನನ್ನ ಬಾಯಿಯನ್ನು ಕಟ್ಟಿ ಹಾಕಿ, ಮಾರಾಕಾಸ್ತ್ರಗಳಿಂದ ಬೆದರಿಕೆ ಹಾಕಿದರು. ಬಳಿಕ ಮನೆಯಲ್ಲಿದ್ದ ಹಣ ಹಾಗೂ ಚಿನ್ನವನ್ನು ದೋಚಿ ಪರಾರಿಯಾದರು. ಘಟನೆ ಬಳಿಕ ನಾನು ಭೀತಿಗೊಳಗಾಗಿದ್ದೆ. ಬಳಿಕ ನೆರೆಮನೆಯವರ ಸಹಾಯದೊಂದಿಗೆ ಪೊಲೀಸರಿಗೆ ದೂರು ನೀಡಿದ್ದೆ ಎಂದು ಇಲಾ ಚಂದ್ರಶೇಖರ್ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT