ಪ್ರವಾಹ ಪೀಡಿತ ಕೊಡಗು ಜಿಲ್ಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವ ಭದ್ರತಾ ಪಡೆಗಳು 
ರಾಜ್ಯ

ಕೊಡಗು ಜಿಲ್ಲೆಯಲ್ಲಿ ಮತ್ತೆ ಭಾರೀ ಮಳೆ: ಕಾರ್ಯಾಚರಣೆಗೆ ಅಡ್ಡಿ, ಹಲವರು ನಾಪತ್ತೆ

ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ ಮತ್ತೆ ಮುಂದುವರೆದಿದ್ದು, ಹಲವೆಡೆ ಭೂಕುಸಿತ ಸಂಭವಿಸಿದೆ. ಭೂಕುಸಿತ ಹಿನ್ನಲೆಯಲ್ಲಿ ಹಲವರು ನಾಪತ್ತೆಯಾಗಿದ್ದು, ನಾಪತ್ತೆಯಾಗಿರುವವರು ಬದುಕುಳಿದಿರುವ ಬಗ್ಗೆ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ...

ಮಡಿಕೇರಿ; ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ ಮತ್ತೆ ಮುಂದುವರೆದಿದ್ದು, ಹಲವೆಡೆ ಭೂಕುಸಿತ ಸಂಭವಿಸಿದೆ. ಭೂಕುಸಿತ ಹಿನ್ನಲೆಯಲ್ಲಿ ಹಲವರು ನಾಪತ್ತೆಯಾಗಿದ್ದು, ನಾಪತ್ತೆಯಾಗಿರುವವರು ಬದುಕುಳಿದಿರುವ ಬಗ್ಗೆ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ. 
ಸ್ಥಳೀಯ ಮೂಲಗಳ ಪ್ರಕಾರ, ಜಿಲ್ಲೆಯು ಸಂಪರ್ಕವನ್ನು ಕಳೆದುಕೊಂಡಿದ್ದು, ಬಹಳಷ್ಟು ಜನರ ಸಾವುಗಳು ವರದಿಯೇ ಆಗಿಲ್ಲ ಎಂದು ತಿಳಿಸಿವೆ. 
ಮುಕ್ಕೊಡ್ಲು ಮತ್ತು ಕಾಲೂರು ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಪ್ರವಾಹದ ನೀರಿನ ಮಟ್ಟ ಕೂಡ ಏರಿಕೆಯಾಗಿದೆ. ಇದರಿಂದ ರಕ್ಷಣಾ ಕಾರ್ಯಾಚರಣೆಗೆ ಭಾರೀ ತೊಡಕುಂಟಾಗಿದೆ. ಭಾರೀ ಮಳೆಯ ನಡುವೆಯೂ ಭದ್ರತಾ ಪಡೆಗಳು ಮುಕ್ಕೊಡ್ಲುವಿನಲ್ಲಿ ಹಗ್ಗ ಕಟ್ಟಿ ಜನ್ನರನ್ನು ರಕ್ಷಣೆ ಮಾಡುತ್ತಿದೆ. 
ಎನ್'ಡಿಆರ್'ಎಫ್, ಭಾರತೀಯ ಸೇನೆ, ನಾಗರೀಕ ಭದ್ರತಾ ಪಡೆ, ಎಸ್'ಡಿಆರ್'ಎಫ್, ಸ್ಥಳೀಯ ಪೊಲೀಸರ ತಂಡ ಜಂಟಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಈವರೆಗೂ ಮುಕ್ಕೊಡ್ಲು ಪ್ರದೇಶದ 60 ಗ್ರಾಮಸ್ಥರನ್ನು ರಕ್ಷಣೆ ಮಾಡಿದ್ದಾರೆ. ಎಮ್ಮೆಥಾಡು ಗ್ರಾಮದಲ್ಲಿ 300 ಎಕರೆ ಭೂಮು ಸಂಪೂರ್ಣವಾಗಿ ನಾಶಗೊಂಡಿದೆ. ಆದರೆ, ಗ್ರಾಮಸ್ಥರನ್ನು ರಕ್ಷಣೆ ಮಾಡಿ ನಿರಾಶ್ರಿತ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದೆ. 
ಕಾಲೂರಿನಲ್ಲಿ ಇನ್ನು ಕೆಲ ಗ್ರಾಮಸ್ಥರಿದ್ದು, ರಕ್ಷಣೆಗಾಗಿ ಎದುರು ನೋಡುತ್ತಿದ್ದಾರೆ. ಅರಣ್ಯ ಪ್ರದೇಶದಲ್ಲಿ ಟ್ರೆಕ್ಕಿಂಗ್ ಮೂಲಕ ಮಡಿಕೇರಿ ತಲುಪಿದ್ದೆ. ಈ ವೇಳೆ 20ಮಂದಿ ಗ್ರಾಮಸ್ಥರು ಸಂಕಷ್ಟದಲ್ಲಿರುವುದು ಕಂಡು ಬಂದಿತ್ತು. ಆ ಪ್ರದೇಶ ಮಡಿಕೇರಿಯಿಂದ 13 ಕಿಮೀ ದೂರದಲ್ಲಿದೆ. ಸಂಕಷ್ಟದಲ್ಲಿದ್ದ 20 ಮಂದಿಯ ಪೈಕಿ ಓರ್ವ ವ್ಯಕ್ತಿಯನ್ನು ಸಂಪರ್ಕಿಸಿದ್ದೆ. ಈ ವೇಳೆ ಆ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿರುವ ವಿಚಾರ ತಿಳಿಯಿತು ಎಂದು ಕಾಲೂರು ಪ್ರದೇಶದ ಗ್ರಾಮಸ್ಥ ಚೆನ್ನಪಂಡ ನಿತಿನ್ ಹೇಳಿದ್ದಾರೆ. 
ಮಳೆಯ ನಡುವೆಯೂ ಸೇನಾಪಡೆಗಳು ರಕ್ಷಣಾ ಕಾರ್ಯಾಚರಣೆಗಳನ್ನು ಮುಂದುವರೆಸಿದ್ದು, ಮುಕ್ಕೊಡ್ಲು ಗ್ರಾಮದಿಂದ ಜೋಡುಪಾಲ 2ನೇ ಮೊನ್ನಗೇರಿ ಮತ್ತು ಕತಕೇರಿ ಪ್ರದೇಶ ತಲುಪಿದೆ. ಭಾರತೀಯ ಸೇನೆ ಹಾಗೂ ನಾಗರೀಕ ರಕ್ಷಣಾ ಪಡೆಗಳು ಕಾಲೂರು ಹಾಗೂ ದೇವಸ್ತುರುಗಳಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ಎಸ್'ಡಬ್ಲ್ಯೂಎಟಿ ತಂಡ, ಪೊಲೀಸ್ ಪಡೆಗಳು ತಂತಿಪಾಲ ಗ್ರಾಮದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. 
ಭದ್ರತಾ ಪಡೆಗಳು ಪ್ರವಾಹ ಪೀಡಿತ ಪ್ರತೀ ಪ್ರದೇಶಗಳನ್ನು ತಲುಪಲು ಯತ್ನ ನಡೆಸುತ್ತಿದೆ ಎಂದು ಎಡಿಜಿಪಿ ಭಾಸ್ಕರ್ ರಾವ್ ಅವರು ಹೇಳಿದ್ದಾರೆ. 
ಕಾರ್ಯಾಚರಣೆ ವೇಳೆ ಕೆಲ ಹಿರಿಯ ನಾಗರೀಕರು ತಮ್ಮ ಮನೆಗಳನ್ನು ಬಿಟ್ಟು ಬರುವುದಿಲ್ಲ ಎಂದು ಹೇಳುತ್ತಿದ್ದರು. ನಂತರ ಅವರ ಮನವೊಲಿಸಿ ಭದ್ರತಾ ಕ್ರಮಗಳೊಂದಿಗೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಯಿತು. ಹವಾಮಾನ ಇಲಾಖೆ ಇನ್ನೂ 36 ಗಂಟೆಗಳು ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ. ಹೀಗಾಗಿ ಹೆಲಿಕಾಪ್ಟರ್ ಕಾರ್ಯಾಚರಣೆಗೆ ತಡೆಯುಂಟಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT