ಬಿಸ್ಕೆಟ್ ಎಸೆದ ರೇವಣ್ಣ 
ರಾಜ್ಯ

ನಿರಾಶ್ರಿತರ ಶಿಬಿರದಲ್ಲಿ ಸಚಿವರ ದರ್ಪದ ವರ್ತನೆ: ಎಚ್.ಡಿ ರೇವಣ್ಣ ಮಾಡಿದ್ದೇನು?

ನಿರಾಶ್ರಿತ ಕೇಂದ್ರಕ್ಕೆ ಭೇಟಿ ನೀಡಿದ್ದ ಸಚಿವ ಎಚ್.ಡಿ.ರೇವಣ್ಣ ಅವರು ಪ್ರಾಣಿಗಳಿಗೆ ಎಸೆದಂತೆ ನಿರಾಶ್ರಿತರಿಗೆ ಬಿಸ್ಕೆಟ್ ಎಸೆದಿರುವುದು ಭಾರೀ ಆಕ್ರೋಶ ಹಾಗೂ ...

ಬೆಂಗಳೂರು: ನಿರಾಶ್ರಿತ ಕೇಂದ್ರಕ್ಕೆ ಭೇಟಿ ನೀಡಿದ್ದ ಸಚಿವ ಎಚ್.ಡಿ.ರೇವಣ್ಣ ಅವರು ಪ್ರಾಣಿಗಳಿಗೆ ಎಸೆದಂತೆ ನಿರಾಶ್ರಿತರಿಗೆ ಬಿಸ್ಕೆಟ್ ಎಸೆದಿರುವುದು ಭಾರೀ ಆಕ್ರೋಶ ಹಾಗೂ ಟೀಕೆಗೆ ಕಾರಣವಾಗಿದೆ.
ಭಾನುವಾರ ರಾಮನಾಥಪುರದಲ್ಲಿ ನಿರಾಶ್ರಿತ ಸಮಸ್ಯೆ ಆಲಿಸಲು ಬಂದ ಸಚಿವ ರೇವಣ್ಣ ನಿರಾಶ್ರಿತರೊಂದಿಗೆ ನಡೆದುಕೊಂಡ ರೀತಿ ವ್ಯಾಪಕ ಟೀಕೆಗೆ ಗುರಿಯಾಗಿದೆ.  ಪ್ರವಾಹ ನಿರಾಶ್ರಿತರಿಗೆ ಬಿಸ್ಕೆಟ್ ಎಸೆಯುವ ಮೂಲಕ ಅಮಾನವೀಯತೆಯನ್ನು ಮೆರೆದಿದ್ದಾರೆ. ಶನಿವಾರ ರೇವಣ್ಣ ಮತ್ತು ಎ.ಟಿ. ರಾಮಸ್ವಾಮಿ ಅವರು ಹಾಸನ ಜಿಲ್ಲೆಯ ರಾಮನಾಥಪುರದ ಸಂತ್ರಸ್ತರ ಶಿಬಿರಕ್ಕೆ ಭೇಟಿ ನೀಡಿದ್ದರು. ಆದರೆ ಅಲ್ಲಿ ಪ್ರವಾಹ ಸಂತ್ರಸ್ತರಿಗೆ ಸಚಿವ ರೇವಣ್ಣ ಆಹಾರವನ್ನು ಪ್ರಾಣಿಗಳಿಗೆ ಎಸೆಯೋ ರೀತಿ ಬಿಸ್ಕೆಟ್ ಎಸೆದಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಶತಮಾನದ ದಾಖಲೆ ಮಳೆಗೆ ಕಂಗಾಲಾದ ಜನರಿಗೆ ಜಿಲ್ಲೆಯ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಹಾಸನ ಕೆಎಂಎಫ್​ನಿಂದ ಉಚಿತವಾಗಿ ಸಾವಿರಾರು ಲೀಟರ್ ಹಾಲು ಮತ್ತು ಬಿಸ್ಕೆಟ್ ಸರಬರಾಜು ಮಾಡಿ ಮಾನವೀಯತೆ ಮೆರೆದಿದ್ದರು. ಆದರೆ, ಭಾನುವಾರ ಗಂಜಿ ಕೇಂದ್ರಕ್ಕೆ ತೆರಳಿದ್ದ ವೇಳೆ  ನಿರಾಶ್ರಿತರನ್ನು ಸಚಿವರು ಉಪಚರಿಸಿದ ರೀತಿ ವ್ಯಾಪಕ ಟೀಕೆಗೆ ಗುರಿಯಾಗಿದೆ.
ಮನೆ, ನೆಲ ಕಳೆದು ಕೊಂಡು ಆಸರೆಯ ನಿರೀಕ್ಷೆಯಲ್ಲಿರುವ ಜನರು ತಾವು  ಗೆಲ್ಲಿಸಿರುವ ಜನಪ್ರತಿನಿಧಿಗಳು ನಮಗೆ ಸಹಾಯ ಮಾಡುತ್ತಾರೆ ಎಂದು ಸಚಿವರನ್ನು ಸುತ್ತುವರೆದಿದ್ದರು. ಆದರೆ, ಮಾನವೀಯತೆ ಮರೆತ ಸಚಿವರು ಸಂತ್ರಸ್ತರೆಡೆಗೆ ಬಿಸ್ಕೆಟ್​ ಎಸೆಯುವ ಮೂಲಕ ಪ್ರಾಣಿಗಳಂತೆ ಉಪಚರಿಸಿದ್ದಾರೆ. ತಮ್ಮನ್ನು ಗೆಲ್ಲಿಸಿದ ಇದೇ ಮತದಾರರು ಎಂಬುದನ್ನು ಮರೆತ ರೇವಣ್ಣ ಹೀಗೆ ವರ್ತಿಸಿದ್ದು ಎಷ್ಟು ಸರಿ ಎಂಬ ಟೀಕೆಗಳು ಕೇಳಿಬರುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ದೇಶದ ಮೇಲೆ ಯುದ್ಧದ ಪರಿಣಾಮ ತಗ್ಗಿಸಲು ಕೇಂದ್ರ ಸಜ್ಜು; ಪ್ರಧಾನಿ ಮೋದಿ ಮಹತ್ವದ ಸಭೆ, LPG-LNG ಲಭ್ಯತೆ ಖಚಿತಪಡಿಸಲು ಖಡಕ್ ಸೂಚನೆ

'13 ರೂ. ಮೌಲ್ಯದ ಚೀಲಗಳನ್ನು 52 ರೂ.ಗೆ ಖರೀದಿ’: IAS ಅಧಿಕಾರಿ ರೋಹಿಣಿ ಸಿಂಧೂರಿಗೆ ಹೈಕೋರ್ಟ್ ಶಾಕ್, ತನಿಖೆಗೆ ಅನುಮತಿ

SSLC ಯಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್: ಸರ್ಕಾರದ ನಿರ್ಧಾರ ವಿರುದ್ಧ ಹೈಕೋರ್ಟ್ ಗೆ ಅರ್ಜಿ

ಸಾಂಸ್ಕೃತಿಕ ವೈಭವಕ್ಕೆ ಸಾಕ್ಷಿಯಾದ ಬೆಂಗಳೂರು: ಧರ್ಮರಾಯಸ್ವಾಮಿ ದೇವಸ್ಥಾನದಿಂದ ವೈಭವದ ಕರಗ ಆರಂಭ, ಲಕ್ಷಾಂತರ ಭಕ್ತರು ಸಾಕ್ಷಿ

Iran ನಲ್ಲಿ ಕೊನೆಗೂ ಆಡಳಿತ ಬದಲಾವಣೆ! ಅಮೆರಿಕ, ಇಸ್ರೇಲ್ ಬಯಸಿದ್ದೇ ಒಂದು, ಆಗಿದ್ದು ಇನ್ನೊಂದು!

SCROLL FOR NEXT