ಬಿಸ್ಕೆಟ್ ಎಸೆದ ರೇವಣ್ಣ 
ರಾಜ್ಯ

ನಿರಾಶ್ರಿತರ ಶಿಬಿರದಲ್ಲಿ ಸಚಿವರ ದರ್ಪದ ವರ್ತನೆ: ಎಚ್.ಡಿ ರೇವಣ್ಣ ಮಾಡಿದ್ದೇನು?

ನಿರಾಶ್ರಿತ ಕೇಂದ್ರಕ್ಕೆ ಭೇಟಿ ನೀಡಿದ್ದ ಸಚಿವ ಎಚ್.ಡಿ.ರೇವಣ್ಣ ಅವರು ಪ್ರಾಣಿಗಳಿಗೆ ಎಸೆದಂತೆ ನಿರಾಶ್ರಿತರಿಗೆ ಬಿಸ್ಕೆಟ್ ಎಸೆದಿರುವುದು ಭಾರೀ ಆಕ್ರೋಶ ಹಾಗೂ ...

ಬೆಂಗಳೂರು: ನಿರಾಶ್ರಿತ ಕೇಂದ್ರಕ್ಕೆ ಭೇಟಿ ನೀಡಿದ್ದ ಸಚಿವ ಎಚ್.ಡಿ.ರೇವಣ್ಣ ಅವರು ಪ್ರಾಣಿಗಳಿಗೆ ಎಸೆದಂತೆ ನಿರಾಶ್ರಿತರಿಗೆ ಬಿಸ್ಕೆಟ್ ಎಸೆದಿರುವುದು ಭಾರೀ ಆಕ್ರೋಶ ಹಾಗೂ ಟೀಕೆಗೆ ಕಾರಣವಾಗಿದೆ.
ಭಾನುವಾರ ರಾಮನಾಥಪುರದಲ್ಲಿ ನಿರಾಶ್ರಿತ ಸಮಸ್ಯೆ ಆಲಿಸಲು ಬಂದ ಸಚಿವ ರೇವಣ್ಣ ನಿರಾಶ್ರಿತರೊಂದಿಗೆ ನಡೆದುಕೊಂಡ ರೀತಿ ವ್ಯಾಪಕ ಟೀಕೆಗೆ ಗುರಿಯಾಗಿದೆ.  ಪ್ರವಾಹ ನಿರಾಶ್ರಿತರಿಗೆ ಬಿಸ್ಕೆಟ್ ಎಸೆಯುವ ಮೂಲಕ ಅಮಾನವೀಯತೆಯನ್ನು ಮೆರೆದಿದ್ದಾರೆ. ಶನಿವಾರ ರೇವಣ್ಣ ಮತ್ತು ಎ.ಟಿ. ರಾಮಸ್ವಾಮಿ ಅವರು ಹಾಸನ ಜಿಲ್ಲೆಯ ರಾಮನಾಥಪುರದ ಸಂತ್ರಸ್ತರ ಶಿಬಿರಕ್ಕೆ ಭೇಟಿ ನೀಡಿದ್ದರು. ಆದರೆ ಅಲ್ಲಿ ಪ್ರವಾಹ ಸಂತ್ರಸ್ತರಿಗೆ ಸಚಿವ ರೇವಣ್ಣ ಆಹಾರವನ್ನು ಪ್ರಾಣಿಗಳಿಗೆ ಎಸೆಯೋ ರೀತಿ ಬಿಸ್ಕೆಟ್ ಎಸೆದಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಶತಮಾನದ ದಾಖಲೆ ಮಳೆಗೆ ಕಂಗಾಲಾದ ಜನರಿಗೆ ಜಿಲ್ಲೆಯ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಹಾಸನ ಕೆಎಂಎಫ್​ನಿಂದ ಉಚಿತವಾಗಿ ಸಾವಿರಾರು ಲೀಟರ್ ಹಾಲು ಮತ್ತು ಬಿಸ್ಕೆಟ್ ಸರಬರಾಜು ಮಾಡಿ ಮಾನವೀಯತೆ ಮೆರೆದಿದ್ದರು. ಆದರೆ, ಭಾನುವಾರ ಗಂಜಿ ಕೇಂದ್ರಕ್ಕೆ ತೆರಳಿದ್ದ ವೇಳೆ  ನಿರಾಶ್ರಿತರನ್ನು ಸಚಿವರು ಉಪಚರಿಸಿದ ರೀತಿ ವ್ಯಾಪಕ ಟೀಕೆಗೆ ಗುರಿಯಾಗಿದೆ.
ಮನೆ, ನೆಲ ಕಳೆದು ಕೊಂಡು ಆಸರೆಯ ನಿರೀಕ್ಷೆಯಲ್ಲಿರುವ ಜನರು ತಾವು  ಗೆಲ್ಲಿಸಿರುವ ಜನಪ್ರತಿನಿಧಿಗಳು ನಮಗೆ ಸಹಾಯ ಮಾಡುತ್ತಾರೆ ಎಂದು ಸಚಿವರನ್ನು ಸುತ್ತುವರೆದಿದ್ದರು. ಆದರೆ, ಮಾನವೀಯತೆ ಮರೆತ ಸಚಿವರು ಸಂತ್ರಸ್ತರೆಡೆಗೆ ಬಿಸ್ಕೆಟ್​ ಎಸೆಯುವ ಮೂಲಕ ಪ್ರಾಣಿಗಳಂತೆ ಉಪಚರಿಸಿದ್ದಾರೆ. ತಮ್ಮನ್ನು ಗೆಲ್ಲಿಸಿದ ಇದೇ ಮತದಾರರು ಎಂಬುದನ್ನು ಮರೆತ ರೇವಣ್ಣ ಹೀಗೆ ವರ್ತಿಸಿದ್ದು ಎಷ್ಟು ಸರಿ ಎಂಬ ಟೀಕೆಗಳು ಕೇಳಿಬರುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!