ಬಿಸ್ಕೆಟ್ ಎಸೆದ ರೇವಣ್ಣ 
ರಾಜ್ಯ

ನಿರಾಶ್ರಿತರ ಶಿಬಿರದಲ್ಲಿ ಸಚಿವರ ದರ್ಪದ ವರ್ತನೆ: ಎಚ್.ಡಿ ರೇವಣ್ಣ ಮಾಡಿದ್ದೇನು?

ನಿರಾಶ್ರಿತ ಕೇಂದ್ರಕ್ಕೆ ಭೇಟಿ ನೀಡಿದ್ದ ಸಚಿವ ಎಚ್.ಡಿ.ರೇವಣ್ಣ ಅವರು ಪ್ರಾಣಿಗಳಿಗೆ ಎಸೆದಂತೆ ನಿರಾಶ್ರಿತರಿಗೆ ಬಿಸ್ಕೆಟ್ ಎಸೆದಿರುವುದು ಭಾರೀ ಆಕ್ರೋಶ ಹಾಗೂ ...

ಬೆಂಗಳೂರು: ನಿರಾಶ್ರಿತ ಕೇಂದ್ರಕ್ಕೆ ಭೇಟಿ ನೀಡಿದ್ದ ಸಚಿವ ಎಚ್.ಡಿ.ರೇವಣ್ಣ ಅವರು ಪ್ರಾಣಿಗಳಿಗೆ ಎಸೆದಂತೆ ನಿರಾಶ್ರಿತರಿಗೆ ಬಿಸ್ಕೆಟ್ ಎಸೆದಿರುವುದು ಭಾರೀ ಆಕ್ರೋಶ ಹಾಗೂ ಟೀಕೆಗೆ ಕಾರಣವಾಗಿದೆ.
ಭಾನುವಾರ ರಾಮನಾಥಪುರದಲ್ಲಿ ನಿರಾಶ್ರಿತ ಸಮಸ್ಯೆ ಆಲಿಸಲು ಬಂದ ಸಚಿವ ರೇವಣ್ಣ ನಿರಾಶ್ರಿತರೊಂದಿಗೆ ನಡೆದುಕೊಂಡ ರೀತಿ ವ್ಯಾಪಕ ಟೀಕೆಗೆ ಗುರಿಯಾಗಿದೆ.  ಪ್ರವಾಹ ನಿರಾಶ್ರಿತರಿಗೆ ಬಿಸ್ಕೆಟ್ ಎಸೆಯುವ ಮೂಲಕ ಅಮಾನವೀಯತೆಯನ್ನು ಮೆರೆದಿದ್ದಾರೆ. ಶನಿವಾರ ರೇವಣ್ಣ ಮತ್ತು ಎ.ಟಿ. ರಾಮಸ್ವಾಮಿ ಅವರು ಹಾಸನ ಜಿಲ್ಲೆಯ ರಾಮನಾಥಪುರದ ಸಂತ್ರಸ್ತರ ಶಿಬಿರಕ್ಕೆ ಭೇಟಿ ನೀಡಿದ್ದರು. ಆದರೆ ಅಲ್ಲಿ ಪ್ರವಾಹ ಸಂತ್ರಸ್ತರಿಗೆ ಸಚಿವ ರೇವಣ್ಣ ಆಹಾರವನ್ನು ಪ್ರಾಣಿಗಳಿಗೆ ಎಸೆಯೋ ರೀತಿ ಬಿಸ್ಕೆಟ್ ಎಸೆದಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಶತಮಾನದ ದಾಖಲೆ ಮಳೆಗೆ ಕಂಗಾಲಾದ ಜನರಿಗೆ ಜಿಲ್ಲೆಯ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಹಾಸನ ಕೆಎಂಎಫ್​ನಿಂದ ಉಚಿತವಾಗಿ ಸಾವಿರಾರು ಲೀಟರ್ ಹಾಲು ಮತ್ತು ಬಿಸ್ಕೆಟ್ ಸರಬರಾಜು ಮಾಡಿ ಮಾನವೀಯತೆ ಮೆರೆದಿದ್ದರು. ಆದರೆ, ಭಾನುವಾರ ಗಂಜಿ ಕೇಂದ್ರಕ್ಕೆ ತೆರಳಿದ್ದ ವೇಳೆ  ನಿರಾಶ್ರಿತರನ್ನು ಸಚಿವರು ಉಪಚರಿಸಿದ ರೀತಿ ವ್ಯಾಪಕ ಟೀಕೆಗೆ ಗುರಿಯಾಗಿದೆ.
ಮನೆ, ನೆಲ ಕಳೆದು ಕೊಂಡು ಆಸರೆಯ ನಿರೀಕ್ಷೆಯಲ್ಲಿರುವ ಜನರು ತಾವು  ಗೆಲ್ಲಿಸಿರುವ ಜನಪ್ರತಿನಿಧಿಗಳು ನಮಗೆ ಸಹಾಯ ಮಾಡುತ್ತಾರೆ ಎಂದು ಸಚಿವರನ್ನು ಸುತ್ತುವರೆದಿದ್ದರು. ಆದರೆ, ಮಾನವೀಯತೆ ಮರೆತ ಸಚಿವರು ಸಂತ್ರಸ್ತರೆಡೆಗೆ ಬಿಸ್ಕೆಟ್​ ಎಸೆಯುವ ಮೂಲಕ ಪ್ರಾಣಿಗಳಂತೆ ಉಪಚರಿಸಿದ್ದಾರೆ. ತಮ್ಮನ್ನು ಗೆಲ್ಲಿಸಿದ ಇದೇ ಮತದಾರರು ಎಂಬುದನ್ನು ಮರೆತ ರೇವಣ್ಣ ಹೀಗೆ ವರ್ತಿಸಿದ್ದು ಎಷ್ಟು ಸರಿ ಎಂಬ ಟೀಕೆಗಳು ಕೇಳಿಬರುತ್ತಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೋದಿ ನಡೆ 'ಹೇಡಿತನದ ಪರಮಾವಧಿ'; ನರವಾಣೆ ಪುಸ್ತಕ 56 ಇಂಚಿನ ಎದೆಯೊಳಗಿನ ಪುಕ್ಕಲುತನ ಬಯಲು ಮಾಡಿದೆ!

ಮಾಜಿ ಸೇನಾ ಮುಖ್ಯಸ್ಥ ನರವಾಣೆ ಅಪ್ರಕಟಿತ ಪುಸ್ತಕ ಪ್ರಸಾರ: ದೆಹಲಿ ಪೊಲೀಸರಿಂದ FIR, ರಾಹುಲ್ ಗಾಂಧಿ ವಿಚಾರಣೆ?

ನರವಾಣೆ ಪುಸ್ತಕಕ್ಕೆ ಹೆದರಿ ಮೋದಿ ಲೋಕಸಭೆಗೆ ಗೈರು, ಭದ್ರತಾ ಕಾರಣದಿಂದ ಅಲ್ಲ: ರಾಹುಲ್ ಗಾಂಧಿ

ನಮ್ಮ ಮುಂದೆ ನಡೆಯಲ್ಲ ಬಹಿಷ್ಕಾರದ ಆಟ: ಪಾಕಿಸ್ತಾನದ ಷರತ್ತುಗಳನ್ನು ತಿರಸ್ಕರಿಸಿದ ICC; ಅಡಕತ್ತರಿಯಲ್ಲಿ ಬಾಂಗ್ಲಾ!

ಕ್ಯಾಂಪಸ್‌ನಲ್ಲಿ ಮರ-ಗಿಡಗಳ ಕೊರತೆ ಇರುವ ಕಾಲೇಜುಗಳಿಗೆ ದಂಡ! ಎಲ್ಲಿ..? ಹೇಗೆ?

SCROLL FOR NEXT