ರಾಷ್ಟ್ರಪತಿ ರಾಮನಾಥ್ ಕೋವಿಂದ್ 
ರಾಜ್ಯ

ಮಳೆಯ ಆರ್ಭಟಕ್ಕೆ ತತ್ತರಿಸಿದ ಕೊಡಗು: ಪ್ರವಾಹ ಸ್ಥಿತಿಗತಿ ವಿಚಾರಿಸಿದ ರಾಷ್ಟ್ರಪತಿ ಕೋವಿಂದ್

ಭಾರೀ ಮಳೆ ಮತ್ತು ಪ್ರವಾಹದಿಂದಾಗಿ ತತ್ತರಿಸಿ ಹೋಗಿರುವ ಕೊಡಗು ಜಿಲ್ಲೆಯ ಸ್ಥಿತಿಗತಿಗಳ ಬಗ್ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರಿಂದ ಭಾನುವಾರ ಮಾಹಿತಿ ಪಡೆದುಕೊಂಡಿದ್ದಾರೆ...

ನವದೆಹಲಿ: ಭಾರೀ ಮಳೆ ಮತ್ತು ಪ್ರವಾಹದಿಂದಾಗಿ ತತ್ತರಿಸಿ ಹೋಗಿರುವ ಕೊಡಗು ಜಿಲ್ಲೆಯ ಸ್ಥಿತಿಗತಿಗಳ ಬಗ್ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರಿಂದ ಭಾನುವಾರ ಮಾಹಿತಿ ಪಡೆದುಕೊಂಡಿದ್ದಾರೆ. 
ಮುಖ್ಯಮಂತ್ರಿ ಕುಮಾರಸ್ವಾಮಿಯವರು ನಿನ್ನೆ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸುತ್ತಿದ್ದ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ದೂರವಾಣಿ ಕರೆ ಮಾಡಿದ್ದು, ಈ ವೇಳೆ ಕೊಡಗು ಜಿಲ್ಲೆಯ ಪರಿಸ್ಥಿತಿಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. 
ಪ್ರವಾಹಕ್ಕೆ ಸಿಲುಕಿರುವ ಕೊಡಗು ಜನರ ರಕ್ಷಣೆ ಮತ್ತು ಪರಿಹಾರ ಕಾರ್ಯವನ್ನು ಎನ್'ಡಿಆರ್'ಎಫ್, ಭಾರತೀಯ ಸೇನೆ ಹಾಗೂ ಇತರ ರಕ್ಷಣಾ ದಳಗಳ ಜೊತೆಗೆ ಜಿಲ್ಲಾಡಳಿತ ಸಮರ್ಥವಾಗಿ ನಿಭಾಯಿಸುತ್ತಿದೆ. ಇದೂವರೆಗೂ 3500ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ ಎಂದು ರಾಷ್ಟ್ರಪತಿಗಳಿಗೆ ಕರ್ನಾಟಕ ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!