ಸಾಂದರ್ಭಿಕ ಚಿತ್ರ 
ರಾಜ್ಯ

ರೈತರ ಸಹಕಾರಿ ಬ್ಯಾಂಕ್ ಸಾಲ ಮನ್ನಾಗೆ ಕುಟುಂಬ ಸದಸ್ಯರ ಮಿತಿ ತೆಗೆದುಹಾಕಿದ ಸರ್ಕಾರ

ಸಹಕಾರಿ ಸಂಘ ಸಂಸ್ಥೆಗಳಿಂದ ಸಾಲ ಪಡೆದುಕೊಂಡ ರೈತರಿಗೆ ಖುಷಿಯ ವಿಚಾರವಿದು. ರೈತರ ಸಾಲಮನ್ನಾಗೆ...

ಬೆಂಗಳೂರು: ಸಹಕಾರಿ ಸಂಘ ಸಂಸ್ಥೆಗಳಿಂದ ಸಾಲ ಪಡೆದುಕೊಂಡ ರೈತರಿಗೆ ಖುಷಿಯ ವಿಚಾರವಿದು. ರೈತರ ಸಾಲಮನ್ನಾಗೆ ಸರ್ಕಾರ ವಿಧಿಸಿದ್ದ ಒಂದು ಕುಟುಂಬ, ಒಂದು ಸಾಲ ಷರತ್ತನ್ನು ತೆಗೆದುಹಾಕಿದೆ. ಪರಿಷ್ಕೃತ ಆದೇಶವನ್ನು ಸರ್ಕಾರ ಇನ್ನು ಕೆಲ ದಿನಗಳಲ್ಲಿ ಹೊರಡಿಸಲಿದೆ ಎಂದು ಸಹಕಾರ ಖಾತೆ ಸಚಿವ ಬಂಡೆಪ್ಪ ಕಾಶೆಂಪುರ ತಿಳಿಸಿದ್ದಾರೆ.

ರಾಜ್ಯ ಸಚಿವ ಸಂಪುಟ ಕಳೆದ ವಾರ ನಡೆಸಿದ ಸಭೆಯಲ್ಲಿ, ರೈತರ ಸಾಲಮನ್ನಾಗೆ ಕುಟುಂಬವನ್ನು ಒಂದು ಘಟಕವೆಂದು ಪರಿಗಣಿಸಬೇಕೆಂದು ನಿರ್ಧರಿಸಲಾಯಿತು. ಕುಟುಂಬದಲ್ಲಿ ಎಷ್ಟು ಮಂದಿಯ ಹೆಸರಲ್ಲಿ ಸಹಕಾರಿ ಬ್ಯಾಂಕುಗಳಿಂದ ಸಾಲ ಪಡೆದುಕೊಂಡರೂ ಸಹ 1 ಲಕ್ಷದವರೆಗೆ ರೈತ ಸಾಲಮನ್ನಾವನ್ನು ಮನ್ನಾ ಮಾಡಲು ನಿರ್ಧರಿಸಲಾಯಿತು.

ಮಾಜಿ ಮುಖ್ಯಮಂತ್ರಿ ಡಿ ದೇವರಾಜ್ ಅರಸ್ ಅವರ 103ನೇ ಜನ್ಮ ದಿನಾಚರಣೆ ಸಂದರ್ಭದಲ್ಲಿ ಗೌರವ ನಮನ ಸಲ್ಲಿಸಿ ಮಾತನಾಡಿದ ಸಚಿವ ಬಂಡೆಪ್ಪ ವಾಣಿಜ್ಯ ಬ್ಯಾಂಕುಗಳಿಂದ ರೈತರು ಪಡೆದಿರುವ ಸಾಲ ಎಷ್ಟು ಪ್ರಮಾಣದಲ್ಲಿ ಮನ್ನಾ ಆಗಲಿದೆ ಎಂದು ಸದ್ಯದಲ್ಲಿಯೇ ನಿರ್ಧರಿಸಲಾಗುವುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT