ಅಟಲ್ ಬಿಹಾರಿ ವಾಜಪೇಯಿ 
ರಾಜ್ಯ

ಆ.23ಕ್ಕೆ ಕಾವೇರಿ ನದಿಯಲ್ಲಿ ವಾಜಪೇಯಿ ಚಿತಾಭಸ್ಮ ಸಮರ್ಪಣೆ

ಮಾಜಿ ಪ್ರಧಾನಿ ವಾಜಪೇಯಿಯವರ ಚಿತಾಭಸ್ಮವನ್ನು ಕಾವೇರಿ ನದಿಯಲ್ಲಿ ವಿಸರ್ಜಿಸಲು ರಾಜ್ಯ ಬಿಜೆಪಿ ಘಟಕ ತೀರ್ಮಾನಿಸಿದ್ದು ಇದೇ ಆ.23ಕ್ಕೆ ವಾಜಪೇಯಿ ಚಿತಾಭಸ್ಮವನ್ನು.....

ಮೈಸೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಚಿತಾಭಸ್ಮವನ್ನು ಕಾವೇರಿ ನದಿಯಲ್ಲಿ ವಿಸರ್ಜಿಸಲು ರಾಜ್ಯ ಬಿಜೆಪಿ ಘಟಕ ತೀರ್ಮಾನಿಸಿದ್ದು ಇದೇ ಆ.23ಕ್ಕೆ ವಾಜಪೇಯಿ ಚಿತಾಭಸ್ಮವನ್ನು ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ಸಮರ್ಪಿಸಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
"ದೇಶದ ಎಲ್ಲಾ ಪವಿತ್ರ ನದಿಗಳಲ್ಲಿ ಅಟಲ್ ಬಿಹಾರಿ ವಾಜಪೇಯಿಯವರ ಅಸ್ಥಿ ವಿಸರ್ಜನೆ ಕಾರ್ಯಕ್ರಮ ಇದೆ. ಇದರ ಅಂಗವಾಗಿ ಶ್ರೀರಂಗಪಟ್ಟಣದ ಕಾವೇರಿ ನದಿಯಲ್ಲಿ ಸಹ ಅವರ ಚಿತಾಭಸ್ಮ ಸಮರ್ಪಣೆ ಮಾಡಲಾಗುತ್ತದೆ." ಯಡಿಯೂರಪ್ಪ ಹೇಳಿದ್ದಾರೆ.
ದೆಹಲಿ ಬಿಜೆಪಿ ಕಛೇರಿಯಲ್ಲಿರುವ ಮಾಜಿ ಪ್ರಧಾನಿಗಳ ಅಸ್ಥಿಯನ್ನು ಬೆಂಗಳೂರಿಗೆ ತರಲಾಗುವುದು, ಅದನ್ನು ಶ್ರೀರಂಗಪಟ್ಟಣಕ್ಕೆ ಕೊಂಡೊಯ್ದು ಅಲ್ಲಿ ಕಾವೇರಿಯಲ್ಲಿ ವಿಸರ್ಜಿಸಲಾಗುತ್ತದೆ.
ಮಹಾತ್ಮಾ ಗಾಂಧಿ ಸೇರಿ ದೇಶದ ನಾನಾ ಗಣ್ಯರ ಚಿತಾಭಸ್ಮವನ್ನು ಕಾವೇರಿ ನದಿಯಲ್ಲಿ ಹರಿದು ಬಿಡಲಾಗಿದೆ.
ಆ. 23ರ ಕಾರ್ಯಕ್ರಮದಲ್ಲಿ ಯಡಿಯೂರಪ್ಪ, ಆರ್. ಅಶೋಕ್ ಸೇರಿ ಅನೇಕ ನಾಯಕರು ಭಾಗವಹಿಸಲಿದಾರೆ.
ಗಂಗಾ-ಕಾವೇರಿ ಜೋಡಣೆ ವಾಜಪೇಯಿಯವರ ಕನಸಾಗಿತ್ತು. ಇದಕ್ಕಾಗಿ ಅವರ ಚಿತಾಭಸ್ಮವನ್ನು ಕಾವೇರಿಉ ನದಿಯಲ್ಲಿ ವಿಸರ್ಜಿಸುತ್ತಿದ್ದೇವೆ ಎಂದು ಮೈಸೂರು ಜಿಲ್ಲಾ ಬಿಜೆಪಿ ಮುಖಂಡರು ಹೇಳಿದ್ದಾರೆ.
ಇನ್ನು ರಾಜ್ಯದಲ್ಲಿನ ಪ್ರಮುಖ ನದಿಗಳಾದ ನೇತ್ರಾವತಿ, ಶರಾವತಿ, ಕಾರಂಜ, ಭದ್ರಾ, ತುಂಗಾ, ಮಲಪ್ರಭಾ, ಕೃಷ್ಣಾ  ನದಿಗಳಲ್ಲಿ ಸಹ ಅಟಲ್ ಅವರ ಸ್ಥಿ ವಿಸರ್ಜನೆ ಕಾರ್ಯಕ್ರಮ ನಡೆಯಲಿದೆ ಎಂದು ಪಕ್ಷದ ಮೂಲಗಳು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NCERT Row: 'ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ': ಕೇಂದ್ರ ಶಿಕ್ಷಣ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

SCROLL FOR NEXT