ಸಾಂದರ್ಭಿಕ ಚಿತ್ರ 
ರಾಜ್ಯ

ನಿರಾಶ್ರಿತರಿಗೆ ಸರ್ಕಾರದಿಂದ ತಾತ್ಕಾಲಿಕ ಪಡಿತರ ಚೀಟಿ ವಿತರಣೆ

ತೀವ್ರ ಮಳೆಗೆ ತತ್ತರಿಸಿ ಹೋಗಿರುವ ಕೊಡಗು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮನೆ ...

ಬೆಂಗಳೂರು: ತೀವ್ರ ಮಳೆಗೆ ತತ್ತರಿಸಿ ಹೋಗಿರುವ ಕೊಡಗು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮನೆ ಕಳೆದುಕೊಂಡು ಗುರುತಿನ ಚೀಟಿಯೂ ಸೇರಿದಂತೆ ಸರ್ಕಾರದ ಯಾವುದೇ ದಾಖಲೆ ಪತ್ರ ಇಲ್ಲದವರಿಗೆ ಪಡಿತರ ಚೀಟಿ ನೀಡಲು ಸರ್ಕಾರ ನಿರ್ಧರಿಸಿದೆ. 
ಮತದಾರರ ಗುರುತಿನ ಚೀಟಿ, ಆಧಾರ್‌ ಕಾರ್ಡ್‌, ಆಸ್ತಿ-ಪಾಸ್ತಿ ಸೇರಿ ಎಲ್ಲ ರೀತಿಯ ದಾಖಲೆ ಕಳೆದುಕೊಂಡಿರುವವರಿಗೆ ತಕ್ಷಣಕ್ಕೆ ಫೋಟೋ ಸಹಿತ ಪಡಿತರ ಚೀಟಿ ನೀಡಿ ಮುಂದೆ ಇತರೆ ಅಗತ್ಯ ಗುರುತಿನ ಚೀಟಿ ಮಾಡಿಕೊಳ್ಳಲು ಅನುಕೂಲ ಮಾಡಿಕೊಡಲು ಸರ್ಕಾರ ನಿರ್ಧರಿಸಿದೆ.
ಮನೆ ಬಿಟ್ಟು ನೆಂಟರ ಮನೆಯಲ್ಲಿ ಆಶ್ರಯ ಪಡೆದಿರುವವರು, ನಿರಾಶ್ರಿತರ ಶಿಬಿರದಲ್ಲಿರುವ ಸಂತ್ರಸ್ತರಿಗೆ ತಾತ್ಕಾಲಿಕ ಪಡಿತರ ಚೀಟಿ ನೀಡಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸೆಪ್ಟೆಂಬರ್ 1 ರಿಂದ ಒಂದು ತಿಂಗಳ ಅಭಿಯಾನ ಕೈಗೊಳ್ಳಲಿದೆ. ನಿರಾಶ್ರಿತರು ಸೇರಿ ಅಗತ್ಯ ಇರುವವರಿಗೆಲ್ಲಾ ಪಡಿತರ ಚೀಟಿ ವಿತರಿಸಿ ಮೂರ್‍ನಾಲ್ಕು ತಿಂಗಳು ಉಚಿತ ಪಡಿತರ ವಿತರಿಸುವುದು. ಇದಕ್ಕಾಗಿ ಪಡಿತರ ಮಳಿಗೆಗಳನ್ನೂ ಇಲಾಖೆಯಿಂದಲೇ ಸ್ಥಾಪಿಸುವುದು ಸರ್ಕಾರದ ಉದ್ದೇಶವಾಗಿದೆ.
ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ವತಿಯಿಂದ ಸಚಿವರ ನೇತೃತ್ವದ ತಂಡ ಶನಿವಾರದಿಂದ ನಾಲ್ಕು ದಿನ ಕೊಡಗು ಪ್ರವಾಸ ಬೆಳೆಸಲಿದೆ. ಇಲ್ಲಿನ ಜನರಿಗೆ ಅತ್ಯಂತ ಅಗತ್ಯವಿರುವ ಬ್ಲಾಂಕೆಟ್‌, ಬಕೆಟ್‌, ಜಗ್‌, ನೈಟಿ, ಸ್ಯಾನಿಟರಿ ನ್ಯಾಪ್ಕಿನ್‌, 500 ಟನ್‌ ಅಕ್ಕಿ, 100 ಕ್ವಿಂಟಾಲ್‌ ಸಕ್ಕರೆ, ಸಾಂಬಾರ್‌ ಪುಡಿ ಪ್ಯಾಕೆಟ್‌ ನಿರಾಶ್ರಿತರ ಶಿಬಿರಕ್ಕೆ ನೀಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇದೆಲ್ಲಾ ಒಂದೆರಡು ತಿಂಗಳಷ್ಟೆ, ಭಾರತ ಮತ್ತೆ ಮಾತುಕತೆಗೆ ಬರಲಿದೆ, ಕ್ಷಮೆಯಾಚಿಸುತ್ತದೆ: ಅಮೆರಿಕ ವಾಣಿಜ್ಯ ಸಚಿವ ಲುಟ್ನಿಕ್

'ಇಸ್ಲಾಂಗೆ ವಿರುದ್ಧ': ದರ್ಗಾದ ಫಲಕದಲ್ಲಿನ ಅಶೋಕ ಲಾಂಛನ ವಿರೂಪಗೊಳಿಸಿದ ಸ್ಥಳೀಯರು!: Video

ಕರಾಳ ಚೀನಾಕ್ಕೆ ಭಾರತವನ್ನು ಕಳೆದುಕೊಂಡಂತೆ ಅನಿಸಿದೆ: ಜಗತ್ತಿನ ಗಮನ ಸೆಳೆದ ಡೊನಾಲ್ಡ್ ಟ್ರಂಪ್ ಪೋಸ್ಟ್!

GST ವ್ಯಾಪ್ತಿಗೆ ಪೆಟ್ರೋಲ್, ಡೀಸೆಲ್ ಏಕಿಲ್ಲ?: GST 3.0 ಬಗ್ಗೆ Nirmala Sitharaman ಹೇಳಿದ್ದೇನು?

"GST ಇಳಿಕೆಯ ಲಾಭ ಗ್ರಾಹಕರಿಗೆ ತಲುಪಿಸಲು ಬದ್ಧ": TATA ಕಾರುಗಳ ಬೆಲೆಯಲ್ಲಿ ಭಾರಿ ಇಳಿಕೆ: ವಿವರ ಇಂತಿದೆ..

SCROLL FOR NEXT