ಧೂದ್ಸಾಗರ ಫಾಲ್ಸ್ ಬಳಿ ಗುಡ್ಡ ಕುಸಿತ: ರೈಲು ಸ್ಥಗಿತ 
ರಾಜ್ಯ

ಧೂದ್ಸಾಗರ ಫಾಲ್ಸ್ ಬಳಿ ಗುಡ್ಡ ಕುಸಿತ: ರೈಲು ಸಂಚಾರ ಸ್ಥಗಿತ

ಬೆಳಗಾವಿ ಮತ್ತು ಖಾನಾಪುರ ಅರಣ್ಯ ಪ್ರದೇಶಗಳಲ್ಲಿ ಮಳೆ ಅಬ್ಬರ ಮಂಗಳವಾರ ಕೂಡ ಮುಂದುವರೆದಿದ್ದು, ಗೋವಾ ರಾಜ್ಯ ವ್ಯಾಪ್ತಿಯ ಧೂದ್ ಸಾಗರ ಜಲಪಾತದ ಬಳಿ ಗುಡ್ಡವೊಂದು ಕುಸಿದುಬಿದ್ದಿದೆ...

ಬೆಳಗಾವಿ: ಬೆಳಗಾವಿ ಮತ್ತು ಖಾನಾಪುರ ಅರಣ್ಯ ಪ್ರದೇಶಗಳಲ್ಲಿ ಮಳೆ ಅಬ್ಬರ ಮಂಗಳವಾರ ಕೂಡ ಮುಂದುವರೆದಿದ್ದು, ಗೋವಾ ರಾಜ್ಯ ವ್ಯಾಪ್ತಿಯ ಧೂದ್ ಸಾಗರ ಜಲಪಾತದ ಬಳಿ ಗುಡ್ಡವೊಂದು ಕುಸಿದುಬಿದ್ದಿದೆ. 
ಗುಡ್ಡ ಕುಸಿದು ಬಿದ್ದ ಪರಿಣಾಮ ನಿಜಾಮುದ್ದೀನ್-ವಾಸ್ಕೋ ರೈಲು ಸಂಚರ ರದ್ದುಗೊಂಡಿದೆ. ಲೋಂಡಾ-ಬೆಳಗಾವಿ-ಮಿರಜ್ ರೈಲು ಹಳಿ ಮಾರ್ಗ 37/800ರಿಂದ 900 ಮೀಟರ್ ವ್ಯಾಪ್ತಿಯಲ್ಲಿ ಗುಡ್ಡ ಕುಸಿದಿದೆ. ಹೀಗಾಗಿ ನಿಜಾಮುದ್ದೀನ್ ಲಿಂಕ್ ಎಕ್ಸ್'ಪ್ರೆಸ್ ಮತ್ತು ವಿಎಸ್'ಜಿ-ಎಸ್'ಬಿಸಿ ಎಕ್ಸ್'ಪ್ರೆಸ್ ರೈಲುಗಳ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಸುರಿಯುತ್ತಿರುವ ಮಳೆಯ ನಡೆಯುವೆಯೇ ಮಣ್ಣು ಮತ್ತು ಕಲ್ಲುಗಳನ್ನು ತೆರವುಗೊಳಿಸುವ ಕಾರ್ಯ ನಡೆದಿದೆ. ಗೋವಾದಿಂದ ರೈಲು ಪ್ರಯಾಣಿಕರು ಬಸ್ ಮೂಲಕ ಬೆಳಗಾವಿಗೆ ಬರುತ್ತಿದ್ದಾರೆ. 
ರೈಲು ಹಳಿಗಳನ್ನು ಸಿಬ್ಬಂದಿಗಳು ಪರಿಶೀಲನೆ ನಡೆಸುತ್ತಿದ್ದ ವೇಳೆ ನಿನ್ನೆ ಬೆಳಿಗ್ಗೆ 11 ಗಂಟೆ ಸುಮಾರಿಗೆ ಗುಡ್ಡ ಕುಸಿಯುತ್ತಿರುವುದನ್ನು ಗಮನಿಸಿದ್ದಾರೆ. ಕೂಡಲೇ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಅಧಿಕಾರಿಗಳು ಅಗತ್ಯ ಪರಿಕರಗಳಾದ ಆಹಾರ, ಟೆಂಟ್ ಹಾಗೂ ಟಾರ್ಚ್ ಗಳನ್ನು ತೆಗೆದುಕೊಂಡು ಹಳಿಗಳನ್ನು ಸರಿಪಡಿಸಲು ಸ್ಥಳಕ್ಕೆ ಧಾವಿಸಿದ್ದಾರೆ. ಹಳಿಗಳನ್ನು ಸರಿಪಡಿಸಲು 6-8 ಗಂಟೆಗಳು ಕಾಲಾವಕಾಶ ಬೇಕೆಂದು ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT