ಸಾಂದರ್ಭಿಕ ಚಿತ್ರ 
ರಾಜ್ಯ

ಮಂಡ್ಯ: ಕೇಳಿದ್ದು ತಂದೆಯ ಡೆತ್ ಸರ್ಟಿಫಿಕೇಟ್, ಸಿಕ್ಕಿದ್ದು ಮಗನ ಸಾವಿನ ಪ್ರಮಾಣಪತ್ರ!

ತಂದೆಯ ಮರಣ ಪ್ರಮಾಣಪತ್ರ (ಡೆತ್ ಸರ್ಟಿಫಿಕೇಟ್) ಕೇಳಿದ್ದ ವ್ಯಕ್ತಿಗೆ ಉಪ ತಹಸೀಲ್ದಾರ್ ಅಧಿಕಾರಿಗಳು ಅವನದೇ ಮರಣ ಪ್ರಮಾಣ ಪತ್ರ ನೀಡಿರುವ ಆಘಾತಕಾರಿ ಘಟನೆಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

ಮಂಡ್ಯ: ತಂದೆಯ ಮರಣ ಪ್ರಮಾಣಪತ್ರ (ಡೆತ್ ಸರ್ಟಿಫಿಕೇಟ್) ಕೇಳಿದ್ದ ವ್ಯಕ್ತಿಗೆ ಉಪ ತಹಸೀಲ್ದಾರ್ ಅಧಿಕಾರಿಗಳು ಅವನದೇ ಮರಣ ಪ್ರಮಾಣ ಪತ್ರ ನೀಡಿರುವ ಆಘಾತಕಾರಿ ಘಟನೆಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.
ಶ್ರೀರಂಗಪಟ್ಟಣದ ಚಿಕ್ಕ ಹಾರೋಹಳ್ಳಿ ಗ್ರಾಮ ನಿವಾಸಿಯಾದ ರಾಮೇಗೌಡ ತಮ್ಮ ತಂದೆ ದೊಡ್ಡಹೈದೇಗೌಡ ತೀರಿ ಹೋಗಿದ್ದಾರೆಂದು ಮರಣ ಪ್ರಮಾಣಪತ್ರ ಪಡೆಯಲು  ಅರಕೆರೆ ಉಪ ತಹಸೀಲ್ದಾರ್ ಅವರಿಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ಅಧಿಕಾರಿಗಳು ರಾಮೇಗೌಡ ಹೆಸರಿನಲ್ಲೇ ಮರಣ ಪ್ರಮಾಣಪತ್ರ ನೀಡಿ ಎಡವಟ್ಟು ಮಾಡಿದ್ದಾರೆ.
ಅಷ್ಟೇ ಅಲ್ಲದೆ ಈ ರೀತಿ ತಪ್ಪಾಗಿ ನೀಡಿದ್ದ ಪ್ರಮಾಣಪತ್ರ ರದ್ದುಗೊಳಿಸಿ ಸರಿಯಾದ ಹೆಸರಿನಲ್ಲಿ ಮರಳಿ ನೀಡುವಂತೆ ಕೇಳಿದರೂ ರಾಮೇಗೌಡರ ಮನವಿಗೆ ಉಪ ತಹಶೀಲ್ದಾರ್ ಕಛೇರಿ ಅಧಿಕಾರಿಗಳು ಮಾತ್ರ ಕ್ಯಾರೇ ಅನ್ನುತ್ತಿಲ್ಲ.
ಕಳೆದ ಮೂರು ವರ್ಷಗಳಿಂದ ಈ ಸಂಬಂಧ ಸಮಸ್ಯೆಗೆ ಸಿಲುಕಿರುವ ರಾಮೇಗೌಡ ಇದೀಗ ಮಂಡ್ಯ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಸಮಸ್ಯೆ ಬಗೆಹರಿಸಬೇಕೆಂದು ಕೋರಿದ್ದಾರೆ.
ಬದುಕಿರುವ ರಾಮೇಗೌಡ ಹೆಸರಲ್ಲಿ ಮರಣ ಪ್ರಮಾಣಪತ್ರ ನೀಡಿರುವ ಕಾರಣ ಅವರು ಮತದಾನದ ಹಕ್ಕು ಸೇರಿ ಎಲ್ಲಾ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ.
ಸಧ್ಯ ಉಪ ತಹಶೀಲ್ದಾರ್ ಕಛೇರಿ ಅಧಿಕಾರಿಗಳು ಮಾಡಿದ ಕೆಲಸಕ್ಕೆ ಜಿಲ್ಲಾಧಿಕಾರಿಗಳಿಂದಾದರೂ ಪರಿಹಾರ ಸಿಗಲಿದೆಯೇ ಎನ್ನುವುದನ್ನು ಇನ್ನಷ್ಟೇ ನೋಡಬೇಕಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT