ಸಾಂದರ್ಭಿಕ ಚಿತ್ರ 
ರಾಜ್ಯ

ಮಂಡ್ಯ: ಕೇಳಿದ್ದು ತಂದೆಯ ಡೆತ್ ಸರ್ಟಿಫಿಕೇಟ್, ಸಿಕ್ಕಿದ್ದು ಮಗನ ಸಾವಿನ ಪ್ರಮಾಣಪತ್ರ!

ತಂದೆಯ ಮರಣ ಪ್ರಮಾಣಪತ್ರ (ಡೆತ್ ಸರ್ಟಿಫಿಕೇಟ್) ಕೇಳಿದ್ದ ವ್ಯಕ್ತಿಗೆ ಉಪ ತಹಸೀಲ್ದಾರ್ ಅಧಿಕಾರಿಗಳು ಅವನದೇ ಮರಣ ಪ್ರಮಾಣ ಪತ್ರ ನೀಡಿರುವ ಆಘಾತಕಾರಿ ಘಟನೆಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

ಮಂಡ್ಯ: ತಂದೆಯ ಮರಣ ಪ್ರಮಾಣಪತ್ರ (ಡೆತ್ ಸರ್ಟಿಫಿಕೇಟ್) ಕೇಳಿದ್ದ ವ್ಯಕ್ತಿಗೆ ಉಪ ತಹಸೀಲ್ದಾರ್ ಅಧಿಕಾರಿಗಳು ಅವನದೇ ಮರಣ ಪ್ರಮಾಣ ಪತ್ರ ನೀಡಿರುವ ಆಘಾತಕಾರಿ ಘಟನೆಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.
ಶ್ರೀರಂಗಪಟ್ಟಣದ ಚಿಕ್ಕ ಹಾರೋಹಳ್ಳಿ ಗ್ರಾಮ ನಿವಾಸಿಯಾದ ರಾಮೇಗೌಡ ತಮ್ಮ ತಂದೆ ದೊಡ್ಡಹೈದೇಗೌಡ ತೀರಿ ಹೋಗಿದ್ದಾರೆಂದು ಮರಣ ಪ್ರಮಾಣಪತ್ರ ಪಡೆಯಲು  ಅರಕೆರೆ ಉಪ ತಹಸೀಲ್ದಾರ್ ಅವರಿಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ಅಧಿಕಾರಿಗಳು ರಾಮೇಗೌಡ ಹೆಸರಿನಲ್ಲೇ ಮರಣ ಪ್ರಮಾಣಪತ್ರ ನೀಡಿ ಎಡವಟ್ಟು ಮಾಡಿದ್ದಾರೆ.
ಅಷ್ಟೇ ಅಲ್ಲದೆ ಈ ರೀತಿ ತಪ್ಪಾಗಿ ನೀಡಿದ್ದ ಪ್ರಮಾಣಪತ್ರ ರದ್ದುಗೊಳಿಸಿ ಸರಿಯಾದ ಹೆಸರಿನಲ್ಲಿ ಮರಳಿ ನೀಡುವಂತೆ ಕೇಳಿದರೂ ರಾಮೇಗೌಡರ ಮನವಿಗೆ ಉಪ ತಹಶೀಲ್ದಾರ್ ಕಛೇರಿ ಅಧಿಕಾರಿಗಳು ಮಾತ್ರ ಕ್ಯಾರೇ ಅನ್ನುತ್ತಿಲ್ಲ.
ಕಳೆದ ಮೂರು ವರ್ಷಗಳಿಂದ ಈ ಸಂಬಂಧ ಸಮಸ್ಯೆಗೆ ಸಿಲುಕಿರುವ ರಾಮೇಗೌಡ ಇದೀಗ ಮಂಡ್ಯ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಸಮಸ್ಯೆ ಬಗೆಹರಿಸಬೇಕೆಂದು ಕೋರಿದ್ದಾರೆ.
ಬದುಕಿರುವ ರಾಮೇಗೌಡ ಹೆಸರಲ್ಲಿ ಮರಣ ಪ್ರಮಾಣಪತ್ರ ನೀಡಿರುವ ಕಾರಣ ಅವರು ಮತದಾನದ ಹಕ್ಕು ಸೇರಿ ಎಲ್ಲಾ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ.
ಸಧ್ಯ ಉಪ ತಹಶೀಲ್ದಾರ್ ಕಛೇರಿ ಅಧಿಕಾರಿಗಳು ಮಾಡಿದ ಕೆಲಸಕ್ಕೆ ಜಿಲ್ಲಾಧಿಕಾರಿಗಳಿಂದಾದರೂ ಪರಿಹಾರ ಸಿಗಲಿದೆಯೇ ಎನ್ನುವುದನ್ನು ಇನ್ನಷ್ಟೇ ನೋಡಬೇಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT