ಲಕ್ಷ್ಮೀವರ ತೀರ್ಥ ಸ್ವಾಮೀಜಿ 
ರಾಜ್ಯ

ಅನುಮಾನಗಳಿಗೆ ತೆರೆ: ಶಿರೂರು ಲಕ್ಷ್ಮೀವರತೀರ್ಥ ಸ್ವಾಮೀಜಿ ಅವರದ್ದು ಸಹಜ ಸಾವು!

ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರದ್ಧು ಸಹಜ ಸಾವು ಎಂದು ಪೊಲೀಸ್ ತನಿಖೆಯಿಂದ ಸ್ಪಷ್ಟವಾಗಿದೆ...

ಮಂಗಳೂರು: ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರದ್ಧು ಸಹಜ ಸಾವು ಎಂದು ಪೊಲೀಸ್ ತನಿಖೆಯಿಂದ ಸ್ಪಷ್ಟವಾಗಿದೆ. 
ಶಿರೂರು ಶ್ರೀಗಳು ಅನಾರೋಗ್ಯದಿಂದ ಸಾವನ್ನಪ್ಪಿದ್ದು ಯಾವುದೇ ವಿಷ ಪ್ರಾಶನವಾಗಿಲ್ಲ. ಸ್ವಾಮೀಜಿ ಸಾವಿನ ಕುರಿತಂತೆ ಮರಣೋತ್ತರ ಪರೀಕ್ಷೆ ಹಾಗೂ ವಿಧಿವಿಜ್ಞಾನ ವರದಿಗಳು ಪೊಲೀಸರ ಕೈ ಸೇರಿದ್ದು ಅದನ್ನು ಅನುಸರಿಸಿ ಮಣಿಪಾಲ ಕೆಎಂಸಿ ಆಸ್ಪತ್ರೆ ಅಂತಿಮ ವರದಿ ಸಲ್ಲಿಸಿದೆ. 
ಸ್ವಾಮೀಜಿ ಲಿವರ್(ಯಕೃತ್) ಸಿರೋಸಿಸ್ ಕಾಯಿಲೆ ಉಲ್ಬಣಿಸಿ ಸಾವನ್ನಪ್ಪಿದ್ದಾರೆ ಎಂದು ಅಂತಿಮ ಷರಾ ಬರೆಯಲಾಗಿದೆ. ಇದು ಎಲ್ಲ ಅನುಮಾನಗಳಿಗೆ ಅಂತ್ಯ ಹಾಡಲಿದೆ. ಇನ್ನು ಮರಣೋತ್ತರ ಪರೀಕ್ಷೆ ಬಂದಿದ್ದರೂ ಎಫ್ಎಸ್ಎಲ್ ವರದಿ ಬಳಿಕವಷ್ಟೆ ಅಂತಿಮ ತೀರ್ಮಾನ ಸಾಧ್ಯ ಎನ್ನುವುದು ಪೊಲೀಸರ ವಾದವಾಗಿತ್ತು. ವೈದ್ಯರು ಕೂಡ ಪ್ರಾಥಮಿಕ ವರದಿಯಲ್ಲಿ ಅದನ್ನೇ ಪ್ರತಿಪಾದಿಸಿದ್ದರು. 
ಇನ್ನು ಕಳೆದ ವಾರ ಬಂದಿದ್ದ ಎಫ್ಎಸ್ಎಲ್ ವರದಿ ಮತ್ತು ಮರಣೋತ್ತರ ಪರೀಕ್ಷೆ ವರದಿ ಎರಡನ್ನು ತಾಳೆ ಹಾಕಿರುವ ವೈದ್ಯರು ಸ್ವಾಮೀಜಿ ಲಿವರ್ ಸಿರೋಸಿಸ್ ಕಾಯಿಲೆಯಿಂದ ಮೃತರಾಗಿರುವುದನ್ನು ದೃಢಪಡಿಸಿದ್ದಾರೆ. ಎರಡೂ ವರದಿಗಳಲ್ಲಿ ಎಲ್ಲಿಯೂ ವಿಷ ಕುರಿತಂತೆ ಪ್ರಸ್ತಾಪವಾಗಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT