ಲಕ್ಷ್ಮೀವರ ತೀರ್ಥ ಸ್ವಾಮೀಜಿ 
ರಾಜ್ಯ

ಅನುಮಾನಗಳಿಗೆ ತೆರೆ: ಶಿರೂರು ಲಕ್ಷ್ಮೀವರತೀರ್ಥ ಸ್ವಾಮೀಜಿ ಅವರದ್ದು ಸಹಜ ಸಾವು!

ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರದ್ಧು ಸಹಜ ಸಾವು ಎಂದು ಪೊಲೀಸ್ ತನಿಖೆಯಿಂದ ಸ್ಪಷ್ಟವಾಗಿದೆ...

ಮಂಗಳೂರು: ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರದ್ಧು ಸಹಜ ಸಾವು ಎಂದು ಪೊಲೀಸ್ ತನಿಖೆಯಿಂದ ಸ್ಪಷ್ಟವಾಗಿದೆ. 
ಶಿರೂರು ಶ್ರೀಗಳು ಅನಾರೋಗ್ಯದಿಂದ ಸಾವನ್ನಪ್ಪಿದ್ದು ಯಾವುದೇ ವಿಷ ಪ್ರಾಶನವಾಗಿಲ್ಲ. ಸ್ವಾಮೀಜಿ ಸಾವಿನ ಕುರಿತಂತೆ ಮರಣೋತ್ತರ ಪರೀಕ್ಷೆ ಹಾಗೂ ವಿಧಿವಿಜ್ಞಾನ ವರದಿಗಳು ಪೊಲೀಸರ ಕೈ ಸೇರಿದ್ದು ಅದನ್ನು ಅನುಸರಿಸಿ ಮಣಿಪಾಲ ಕೆಎಂಸಿ ಆಸ್ಪತ್ರೆ ಅಂತಿಮ ವರದಿ ಸಲ್ಲಿಸಿದೆ. 
ಸ್ವಾಮೀಜಿ ಲಿವರ್(ಯಕೃತ್) ಸಿರೋಸಿಸ್ ಕಾಯಿಲೆ ಉಲ್ಬಣಿಸಿ ಸಾವನ್ನಪ್ಪಿದ್ದಾರೆ ಎಂದು ಅಂತಿಮ ಷರಾ ಬರೆಯಲಾಗಿದೆ. ಇದು ಎಲ್ಲ ಅನುಮಾನಗಳಿಗೆ ಅಂತ್ಯ ಹಾಡಲಿದೆ. ಇನ್ನು ಮರಣೋತ್ತರ ಪರೀಕ್ಷೆ ಬಂದಿದ್ದರೂ ಎಫ್ಎಸ್ಎಲ್ ವರದಿ ಬಳಿಕವಷ್ಟೆ ಅಂತಿಮ ತೀರ್ಮಾನ ಸಾಧ್ಯ ಎನ್ನುವುದು ಪೊಲೀಸರ ವಾದವಾಗಿತ್ತು. ವೈದ್ಯರು ಕೂಡ ಪ್ರಾಥಮಿಕ ವರದಿಯಲ್ಲಿ ಅದನ್ನೇ ಪ್ರತಿಪಾದಿಸಿದ್ದರು. 
ಇನ್ನು ಕಳೆದ ವಾರ ಬಂದಿದ್ದ ಎಫ್ಎಸ್ಎಲ್ ವರದಿ ಮತ್ತು ಮರಣೋತ್ತರ ಪರೀಕ್ಷೆ ವರದಿ ಎರಡನ್ನು ತಾಳೆ ಹಾಕಿರುವ ವೈದ್ಯರು ಸ್ವಾಮೀಜಿ ಲಿವರ್ ಸಿರೋಸಿಸ್ ಕಾಯಿಲೆಯಿಂದ ಮೃತರಾಗಿರುವುದನ್ನು ದೃಢಪಡಿಸಿದ್ದಾರೆ. ಎರಡೂ ವರದಿಗಳಲ್ಲಿ ಎಲ್ಲಿಯೂ ವಿಷ ಕುರಿತಂತೆ ಪ್ರಸ್ತಾಪವಾಗಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT