ಬೂ ಕುಸಿತದಿಂದ ಹಾನಿಗೊಳಗಾದ ರಸ್ತೆ 
ರಾಜ್ಯ

ಕೊಡಗು: ಮತ್ತಷ್ಟು ಮೃತದೇಹ ಪತ್ತೆ, ಸತ್ತವರ ಸಂಖ್ಯೆ 15ಕ್ಕೆ ಏರಿಕೆ

: ನೈಸರ್ಗಿಕ ವಿಕೋಪದಿಂದ ತತ್ತರಿಸಿರುವ ಕೊಡಗು ಜಿಲ್ಲೆಯಲ್ಲಿ ಆಗಸ್ಟ್ 15 ರಿಂದ ಇಲ್ಲಿಯವರೆಗೂ ಎನ್ ಡಿಆರ್ ಎಫ್ ಮತ್ತು ಭಾರತೀಯ ಸೇನೆ ವಿವಿಧ ಪ್ರದೇಶಗಳಲ್ಲಿ ...

ಮಡಿಕೇರಿ: ನೈಸರ್ಗಿಕ ವಿಕೋಪದಿಂದ ತತ್ತರಿಸಿರುವ ಕೊಡಗು ಜಿಲ್ಲೆಯಲ್ಲಿ ಆಗಸ್ಟ್ 15 ರಿಂದ ಇಲ್ಲಿಯವರೆಗೂ ಎನ್ ಡಿಆರ್ ಎಫ್ ಮತ್ತು ಭಾರತೀಯ ಸೇನೆ ವಿವಿಧ ಪ್ರದೇಶಗಳಲ್ಲಿ ಉಂಟಾದ ಭೂ ಕುಸಿತಕ್ಕೆ ಬಲಿಯಾದ ಸುಮಾರು 15 ಮಂದಿ ಶವಗಳನ್ನು ಹೊರತೆಗೆದಿದ್ದಾರೆ.
ಈ ಸಂಬಂಧ ಜಿಲ್ಲಾಡಳಿತ ವರದಿ ಬಿಡುಗಡೆ ಮಾಡಿದ್ದು ಅದರಲ್ಲಿ ಸತ್ತವ ಸಂಖ್ಯೆ 15 ಎಂದು ಹೇಳಿದೆ.
ಆಗಸ್ಟ್ 8 ರಂದು ನೀರಿನಲ್ಲಿ ಮುಳುಗಿ ಓರ್ವ ಸಾವನ್ನಪ್ಪಿದ್ದ, ಮತ್ತಿಬ್ಬರು ಮರ ಮೇಲೆ ಬಿದ್ದುಿ ಸಾವನ್ನಪ್ಪಿದ್ದರು, ಉಳಿದ 12 ಮಂದಿ ಭೂ ಕುಸಿತಕ್ಕೆ ಬಲಿಯಾಗಿದ್ದಾರೆ. 
ಆಂಧ್ರ ಪ್ರದೇಶದಿಂದ ಬಂದಿರುವ ಎನ್ ಡಿ ಆರ್ ಎಫ್ 10ನೇ ಬೆಟಾಲಿಯನ್ ನ 30 ಸದಸ್ಯರ ತಂಡ ಬುಧವಾರ ದಿನಗೂಲಿ ನೌಕರ ಪವನ್ ಎಂಬುವರ ಶವ ಹೊರತೆಗೆಯಲಾಗಿದೆ.500 ಮೀಟರ್ ಮಣ್ಣಿನ ಪದರದೊಳಗೆ ಪವನ್ ದೇಹ ಸಿಲಕಿತ್ತು, ಸುಮಾರು 2 ಗಂಟೆ ಕಾರ್ಯಾಚರಣೆ ಇದಾಗಿತ್ತು. 
ಸ್ಥಳೀಯರಿಂದ ಅಲ್ಲಿನ ಪ್ರದೇಶಗಳ ಬಗ್ಗೆ ಮಾಹಿತಿ ಪಡೆದು, ಶವ ಹೊರತೆಗೆದವು, ಮಂಡಿವರೆಗೂ  ಮುಳುಗುವ ನೀರಿನಲ್ಲಿ ಹಗ್ಗ ಕಟ್ಟಿಕೊಂಡು ಹೊರ ತೆಗೆದಿದ್ದಾರೆ,. 
ಇನ್ನು ಮತ್ತೊಂದು ಕಾರ್ಯಾಚರಣೆ ಮಕ್ಕಂದೂರು ಗ್ರಾಮದಲ್ಲಿ ಭಾರತೀಯ ಸೇನೆ ನಡೆಸಿದೆ, ಭೂ ಕುಸಿತದಿಂದ ಸಾವನ್ನಪ್ಪಿದ್ದ 2 ದೇಹಗಳನ್ನು ಹೊರೆ ತೆಗದಿದ್ದಾರೆ, ಚಂದ್ರಾವತಿ ಮತ್ತು ಆಕೆ ಪುತ್ರ ಉಮೇಶ್ ರೈ ಎಂಬುವರ ಶವಗಳಾಗಿವೆ, ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ ಮಹೇಶ್ ವೈಮಾನಿಕ ,ಸಮೀಕ್ಷೆ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಧಾನಸಭೆ ಕಲಾಪ: ಸ್ಪೀಕರ್ ಯುಟಿ ಖಾದರ್ ಸಿಟ್ಟಿಗೆ ಮೂವರು ಅಧಿಕಾರಗಳ ತಲೆದಂಡ!

West Asia conflict: ದುಬೈ ಏರ್‌ಪೋರ್ಟ್‌ ಬಳಿ ಡ್ರೋನ್‌ ದಾಳಿ; ವಿಮಾನ ಸಂಚಾರ ತಾತ್ಕಾಲಿಕ ಸ್ಥಗಿತ, 'Hormuz' ರಕ್ಷಣೆಗೆ NATO ನೆರವು ಕೋರಿದ ಟ್ರಂಪ್

ಆಪರೇಷನ್ ಸಿಂಧೂರ್ ಬಗ್ಗೆ ಪೋಸ್ಟ್‌: ಪ್ರೊ ಅಲಿ ಖಾನ್ ವಿರುದ್ಧದ ಕೇಸ್ ಕೈಬಿಟ್ಟ ಹರಿಯಾಣ ಸರ್ಕಾರ

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ!

ಹಾರ್ಮುಜ್ ನಿಂದ ದೇಶಕ್ಕೆ ತೈಲ ಹಡಗುಗಳ ಸುಗಮ ಸಂಚಾರ: ಇರಾನ್ ನ ಭಾರತ ಒಪ್ಪಿಸಿದ್ದು ಹೇಗೆ?: ಜೈಶಂಕರ್ ಬಿಚ್ಚಿಟ್ಟ ಮಾಹಿತಿ ಇದು...

SCROLL FOR NEXT