ಸಂಗ್ರಹ ಚಿತ್ರ 
ರಾಜ್ಯ

ಕೊಡಗು ಸಂತ್ರಸ್ತರಿಗೆ ನೆರವಾಗಲು ಮಾಂಸಾಹಾರ ತ್ಯಾಗ ಮಾಡಿದ ಕೈದಿಗಳು!

ಮಹಾ ಜಲಪ್ರಳಯಕ್ಕೆ ಕೊಡಗು ನಲುಗಿದ್ದು ಸಂತ್ರಸ್ತರ ನೆರವಿಗಾಗಿ ರಾಜ್ಯಾದ್ಯಂತ ನೆರವಿನ ಮಹಾಪೂರವೇ ಹರಿಸುತ್ತಿದ್ದಾರೆ...

ಬೆಂಗಳೂರು: ಮಹಾ ಜಲಪ್ರಳಯಕ್ಕೆ ಕೊಡಗು ನಲುಗಿದ್ದು ಸಂತ್ರಸ್ತರ ನೆರವಿಗಾಗಿ ರಾಜ್ಯಾದ್ಯಂತ ನೆರವಿನ ಮಹಾಪೂರವೇ ಹರಿಸುತ್ತಿದ್ದಾರೆ. 
ಇನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೈದಿಗಳು ಸಹ ತಮ್ಮ ಕೈಯಲ್ಲಿ ಆಗುವ ಸಣ್ಣ ಪ್ರಮಾಣದ ಸಹಾಯಕ್ಕೆ ಮುಂದಾಗಿದ್ದು ಈ ವಾರ ನೀಡಲಾಗುವ ಮಾಂಸಾಹಾರವನ್ನು ನಿಲ್ಲಿಸುವಂತೆ ಜೈಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. 
ತಮ್ಮ ಈ ವಾರದ ಮಾಂಸಾಹಾರವನ್ನು ತ್ಯಾಗ ಮಾಡಿರುವ ಸುಮಾರು 4,500 ಕೈದಿಗಳು ಆ ಹಣವನ್ನು ಅಂದರೆ ಸುಮಾರು 2 ಲಕ್ಷ ರುಪಾಯಿಯನ್ನು ಕೊಡಗು ಸಂತ್ರಸ್ತರಿಗೆ ನೆರವಾಗಲು ಮುಖ್ಯಮಂತ್ರಿ ಪರಿಹಾರ ನಿಧಿಗೆ ಕಳುಹಿಸುವಂತೆ ಪತ್ರ ಬರೆದಿರುವುದಾಗಿ ಎಡಿಜಿಪಿ(ಕಾರಾಗೃಹ) ಎನ್ ಎಸ್ ಮೇಘರಿಕ್ ಅವರು ತಿಳಿಸಿದ್ದಾರೆ. 
ಕೊಡಗಿನಲ್ಲಿ ಸಂಭವಿಸಿದ ಪ್ರವಾಹ, ಭೂಕುಸಿತದಲ್ಲಿ ಇಲ್ಲಿಯವರೆಗೂ 15 ಮಂದಿ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT