ನಿರ್ಮಲಾ ಸೀತಾರಾಮನ್ 
ರಾಜ್ಯ

ನನಗೂ ಕನ್ನಡ ಬರುತ್ತೇ, ಕನ್ನಡದಲ್ಲೇ ನಿಮ್ಮ ಸಂಕಷ್ಟವನ್ನು ಹೇಳಿ; ಕೊಡಗು ಸಂತ್ರಸ್ತರಿಗೆ ನಿರ್ಮಲಾ

ಮಹಾಮಳೆ ಮತ್ತು ಭೂಕುಸಿತದಿಂದ ನಲುಗಿರುವ ಕೊಡಗಿಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭೇಟಿ ನೀಡಿ ಕೊಡಗಿನ ಪರಿಸ್ಥಿತಿಯನ್ನು ಅವಲೋಕಿಸಿದರು...

ಮಡಿಕೇರಿ: ಮಹಾಮಳೆ ಮತ್ತು ಭೂಕುಸಿತದಿಂದ ನಲುಗಿರುವ ಕೊಡಗಿಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭೇಟಿ ನೀಡಿ ಕೊಡಗಿನ ಪರಿಸ್ಥಿತಿಯನ್ನು ಅವಲೋಕಿಸಿದರು. 
ಇನ್ನು ನಿರಾಶ್ರಿತಗೊಂಡಿರುವ ಕೊಡಗು ಜನತೆ ನಿರಾಶ್ರಿತರ ಕೇಂದ್ರಗಳಲ್ಲಿ ಆಶ್ರಯ ನೀಡಲಾಗಿದೆ. ಇನ್ನು ಇಲ್ಲಿನ ನಿರಾಶ್ರಿತರ ಕೇಂದ್ರಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್ ಅವರು ಸಂತ್ರಸ್ತರ ಅಳಲನ್ನು ಆಲಿಸಿದರು. 
ಇದೇ ವೇಳೆ ನನಗೂ ಕನ್ನಡ ಬರುತ್ತದೆ ನೀವು ನಿಮ್ಮ ಸಂಕಷ್ಟವನ್ನು ಕನ್ನಡದಲ್ಲೇ ಹೇಳಿ ಎಂದು ನಿರ್ಮಲಾ ಸೀತಾರಾಮನ್ ಅವರು ಸಮಸ್ಯೆಯನ್ನು ಆಲಿಸಿ, ಕನ್ನಡದಲ್ಲೇ ಅವರಿಗೆ ಸಾಂತ್ವನವನ್ನು ಹೇಳಿದರು.
ನಂತರ ಮಾತನಾಡಿದ ನಿರ್ಮಲಾ ಸೀತಾರಾಮನ್ ಅವರು ಕೊಡಗಿನ ರಸ್ತೆಗಳು, ಮನೆಗಳು, ಕಟ್ಟಡಗಳು, ನೀರು ಮತ್ತು ವಿದ್ಯುತ್ ಸಂಪರ್ಕಗಳನ್ನು ಪುನಃಸ್ಥಾಪಿಸುವ ಸಲುವಾಗಿ  ನಾನು ಇಲ್ಲಿಗೆ ಬಂದಿದ್ದು, ಅದಕ್ಕೆ ಅಗತ್ಯವಾದ ಎಲ್ಲಾ ರೀತಿಯ ನೆರವನ್ನು ಭಾರತೀಯ ಸೇನೆ ನೀಡಲಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT