ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಮಕ್ಕಳ ಕಳ್ಳನೆಂದು ಶಂಕಿಸಿ ಅಮಾಯಕ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ

ಮಕ್ಕಳ ಕಳ್ಳ ಎಂದು ಶಂಕಿಸಿ ಯುವಕನೊಬ್ಬನನ್ನು ಸ್ಥಳೀಯರು ಥಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ...

ಬೆಂಗಳೂರು: ಮಕ್ಕಳ ಕಳ್ಳ ಎಂದು ಶಂಕಿಸಿ ಯುವಕನೊಬ್ಬನನ್ನು ಸ್ಥಳೀಯರು ಥಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಹೆಣ್ಣೂರು ಸಮೀಪದ ಥಣಿಸಂದ್ರ ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದ್ದು, 18 ವರ್ಷದ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಯುವಕನಿಗೆ ಹೆಣ್ಣೂರು ಪೊಲೀಸರು ಚಿಕಿತ್ಸೆ ಕೊಡಿಸಿದ್ದಾರೆ. ಉತ್ತರ ಪ್ರದೇಶದ ಯುವಕ ಅಣ್ಣನೊಂದಿಗೆ ಎರಡು ವರ್ಷದ ಹಿಂದೆ ನಗರಕ್ಕೆ ಬಂದಿದ್ದ. ಭಾನುವಾರ ಕೆಲಸಕ್ಕೆ ರಜೆ ಇದ್ದಿದ್ದರಿಂದ  ಬಾರ್ ಗೆ ಹೋಗಿದ್ದ ಯುವಕ ಮದ್ಯದ ಅಮಲಿನಲ್ಲೇ  ಮನೆಯತ್ತ ಹೊರಟಿದ್ದ ಅದೇ ವೇಳೆ ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನೊಬ್ಬನನ್ನು ಮಾತನಾಡಿಸಲು ಯತ್ನಿಸಿ ಎಳೆದಾಡಿದ್ದ. ಅದನ್ನು ಗಮನಿಸಿದ್ದ ಸ್ಥಳೀಯರು ಆತನನ್ನು ತರಾಟೆಗೆ ತೆಗೆದುಕೊಂಡು ಥಳಿಸಿದ್ದಾರೆ. ಸ್ಥಳೀಯರು ಕರೆ ಮಾಡಿದ ಹಿನ್ನೆಲೆಯಲ್ಲಿ  ಹೊಯ್ಸಳ ವಾಹನದ ಗಸ್ತು ಸಿಬ್ಬಂದಿ ಯುವನಕನ್ನು ರಕ್ಷಿಸಿದ್ದಾರೆ.
ಹಲ್ಲೆ ಬಗ್ಗೆ ಯುವನಕ ಅಣ್ಣನಿಗೆ ತಿಳಿಸಲಾಗಿತ್ತು, ಠಾಣೆಗೆ ಬಂದ ಅವರು ಯುವಕನಿಗೆ ದೂರು ನೀಡದಂತೆ ಆತ ತಿಳಿಸಿದ್ದಾರೆ ಹೀಗಾಗಿ ದೂರು ನೀಡಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT